Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್

Bengaluru City

ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್

Public TV
Last updated: September 16, 2020 3:04 pm
Public TV
Share
2 Min Read
SUCHENDRA PRASAD
SHARE

– ತುಂಬಾ ಸಭ್ಯ, ಸಜ್ಜನ ಕುಟುಂಬ ಅವರದ್ದು

ಬೆಂಗಳೂರು: ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಆದರೆ ಒಮ್ಮೆ ದಿಗಂತ್ ಮತ್ತು ಐಂದಿತ್ರಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಹಿರಿಯ ಕಲಾವಿದರಾದ ಸುಚೇಂದ್ರ ಪ್ರಸಾದ್ ಹೇಳಿದರು. ಇದನ್ನೂ ಓದಿ: ಸಿಸಿಬಿ ವಿಚಾರಣೆಗೆ ಹಾಜರಾದ ಗುಳಿ ಕೆನ್ನೆ ದಂಪತಿ

indritha

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಸುಚೇಂದ್ರ ಪ್ರಸಾದ್, ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದ್ದಲ್ಲ. ಯಾರ‍್ಯಾರ ಬಳಿ ಮಾಹಿತಿ ಇದಿಯೋ ಅವರನ್ನು ಒಬ್ಬೊಬ್ಬರಾಗಿ ಕರೆಸಿ ಪ್ರಶ್ನೆ ಮಾಡುವ ಕೆಲಸವನ್ನು ಇದಕ್ಕೆ ಸಂಬಂಧಪಟ್ಟ ಇಲಾಖೆ ಮಾಡುತ್ತಿದೆ. ನಾವು ನಮ್ಮ ಕೆಲಸ ಆಯಿತು ಎಂದು ಇದ್ದವರು. ಹೀಗಾಗಿ ನಮಗೆ ಇದರ ಬಗ್ಗೆ ಗೊತ್ತಿಲ್ಲ. ಆದರೆ ಇದೆಲ್ಲವನ್ನು ಗಮನಿಸಿದಾಗ ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ ಎಂದರು. ಇದನ್ನೂ ಓದಿ: ರಾಗಿಣಿಗೆ ಬಿಗ್ ಶಾಕ್- ಜಾಮೀನು ಅರ್ಜಿ ಮುಂದೂಡಿಕೆ

SUCHENDRA PRASAD 10 e1600241693845

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ಒಂದು ಸಿನಿಮಾದಲ್ಲಿ ಮಾತ್ರ ಅವರ ಜೊತೆ ತೆರೆ ಹಂಚಿಕೊಂಡಿದ್ದೇನೆ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಅವರ ತಂದೆ ಪ್ರಾಂಶುಪಾಲರು ಎಂದು ಗೊತ್ತು. ಅದನ್ನು ಬಿಟ್ಟು ಅಷ್ಟೇನು ಗೊತ್ತಿಲ್ಲ. ನಮ್ಮ ಮನೆ ಇರುವ ಏರಿಯಾದ ಕೊನೆಯಲ್ಲಿ ಅವರ ಮನೆ ಇದೆ. ಆದರೆ ನಾನು ಹೆಚ್ಚಾಗಿ ಅವರಿಬ್ಬರನ್ನೂ ನೋಡಿಯೇ ಇಲ್ಲ. ಇತ್ತೀಚೆಗೆ ಆ ಮನೆಗೆ ದಂಪತಿ ಬಂದಿದ್ದರು. ಒಂದು ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

dinganth 1

ಮಧ್ಯರಾತ್ರಿ ಆದರೂ ಸಂಭ್ರಮಾಚರಣೆಯ ಸದ್ದು ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು. ಆಗ ನಾನು ನಟರಾಗಿರುವುದರಿಂದ ಈ ಬಗ್ಗೆ ಮಾತನಾಡಿ ಎಂದು ನಮ್ಮ ನೆರೆಹೊರೆಯವರು ಹೇಳಿದ್ದರು. ಆದರೆ ನಾನು ಬೆಳಗ್ಗೆ ಹೋಗಿ ಮಾತನಾಡುತ್ತೇನೆ ಎಂದಿದ್ದೆ. ನಮ್ಮ ಏರಿಯಾದಲ್ಲಿ ಕಾಣಿಸಿಕೊಂಡರೆ ಮಾತನಾಡೋಣ ಎಂದುಕೊಂಡಿದ್ದೆ. ಆದರೆ ದಂಪತಿ ನನಗೆ ಏಲ್ಲೂ ಕಾಣಿಸಿಕೊಂಡಿಲ್ಲ. ತುಂಬಾ ಸಭ್ಯ ರೀತಿಯಲ್ಲಿ ದಂಪತಿ ನಡೆದುಕೊಂಡಿದ್ದಾರೆ. ಮಧ್ಯರಾತ್ರಿ ಯಾಕೆ ಸಂಭ್ರಮಾಚರಣೆ ಮಾಡಬೇಕು ಎಂದು ನನಗೆ ಆಶ್ವರ್ಯ ಆಯಿತು. ಆದರೆ ಮತ್ತೆ ಆ ರೀತಿಯ ಘಟನೆಯ ಸಂಭವಿಸಿಲ್ಲ ಎಂದು ತಿಳಿಸಿದರು.

SUCHENDRA PRASAD 2 e1600241744725

ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಈಗಲಾದರೂ ನಾವು ಈ ರೀತಿ ಮಾಡುವುದು ತಪ್ಪು ಎಂದು ತಿಳಿದುಕೊಳ್ಳಲಿ. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಆಗಬೇಕು. ನಮ್ಮ ಕ್ಷೇತ್ರ ಮಾತ್ರವಲ್ಲದೇ ಯಾವುದೇ ವಲಯದಲ್ಲಿ ಇದ್ದರೂ ಪರವಾಗಿಲ್ಲ ಅವರ ಹೆಡೆಮುರಿ ಕಟ್ಟಿ ಅವರಿಗೆ ಶಿಕ್ಷೆಯಾಗುವ ರೀತಿ ಸರ್ಕಾರ ಅಥವಾ ಅದಕ್ಕೆ ಸಂಬಂಧಪಟ್ಟ ಇಲಾಖೆ ಮಾಡಬೇಕು ಎಂದು ನಾನು ಆಶಿಸುತ್ತೇನೆ ಎಂದರು.

Diganth Aindrita

ನನಗೆ ಸಿನಿಮಾ ಹೊಟ್ಟೆ ತುಂಬಿಸಿದೆ, ನನ್ನ ಜೀವನಕ್ಕೆ ಒಂದು ದಾರಿ ಮಾಡಿಕೊಟ್ಟಿದೆ. ನಾವು ಬೇರೆಯವರಿಗೆ ಉಪಕಾರ ಮಾಡದಿದ್ದರೂ ಸಮಾಜಕ್ಕೆ ಅಪಕಾರ ಮಾಡಬಾರದು. ಆದರೆ ಹಿಂದಿನಿಂದಲೂ ಸಿನಿಮಾ ಎಂದಾಕ್ಷಣ ಹಣ ಎಂಬ ಭಾವನೆ ಇದೆ. ನನಗಿದು ಗೊತ್ತಿಲ್ಲದ ಸಂಗತಿ. ಇದು ನಾಗರೀಕರು ಮಾಡುವಂತ ಕೆಲಸವಲ್ಲ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ. ಇಂತಹ ಪ್ರಕರಣದಿಂದ ಮುಂದಿನ ಯುವ ಜನತೆ ಎಚ್ಚರವಾಗಿರುತ್ತಾರೆ ಎಂದು ಹೇಳಿದರು.

CCB

ಮಾಹಿತಿ ಇದೆ ಎಂದು ಹೇಳುವರು ಬಹಿರಂಗವಾಗಿ ತನಿಖೆ ಮಾಡುವ ಇಲಾಖೆಗೆ ತಿಳಿಸಬೇಕು. ಈ ಮೂಲಕ ಅವರಿಗೆ ಸಹಕರಿಸಬೇಕು. ನಿಜವಾದ ಸಮಾಜ ನಿರ್ಮಾಣ ಮಾಡಲು ಯಾರಾದರೂ ಆಗಲಿ ಸಹಕರಿಸಬೇಕು. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ತಲೆಮಾರಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

 

TAGGED:AindritabengaluruccbDiganthDrugs MafiaPublic TVsandalwoodSuchendra Prasadಐಂದ್ರಿತಾಡ್ರಗ್ಸ್‌ ಮಾಫಿಯಾದಿಗಂತ್ಪಬ್ಲಿಕ್ ಟಿವಿಬೆಂಗಳೂರುಸಿಸಿಬಿಸುಚೇಂದ್ರ ಪ್ರಸಾದ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
8 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
8 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
8 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?