ನವದೆಹಲಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಹೈ ಕಮಾಂಡ್ನ ವಿವಿಧ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
- Advertisement 2
ಇಂದು ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರಾದ ದಿಗ್ವಿಜಯ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. pic.twitter.com/ej8LqkCfR3
— Siddaramaiah (@siddaramaiah) July 21, 2021
- Advertisement 3
ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆಂಟನಿ ಅವರನ್ನು ಸಹ ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಹೀಗೆ ಕಾಂಗ್ರೆಸ್ನ ವಿವಿಧ ಹಿರಿಯ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
- Advertisement 4
ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದೆ. pic.twitter.com/iY3D4g2ZY3
— Siddaramaiah (@siddaramaiah) July 21, 2021
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಲಿಂಗಾಯತ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಬೆಂಬಲ ಸೂಚಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನಾಯಕರ ಜೊತೆ ಮಾತನಾಡುತ್ತೇನೆ. ಎಂ.ಬಿ.ಪಾಟೀಲ್, ಶಿವಶಂಕರಪ್ಪ ಜೊತೆ ಈ ಕುರಿತು ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.
Met senior @INCIndia leader & General Secretary Shri @kcvenugopalmp in New Delhi today and discussed about various issues. pic.twitter.com/T4Oi9ORKGp
— Siddaramaiah (@siddaramaiah) July 21, 2021
ದೆಹಲಿ ಪ್ರವಾಸ ಮುಗಿಸಿರುವ ಸಿದ್ದರಾಮಯ್ಯ, ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕೆ.ಸಿ.ವೇಣುಗೋಪಾಲ್ ಅವರ ಭೇಟಿ ಮುಗಿಸಿ ಬೆಂಗಳೂರಿಗೆ ಮರಳಿದ್ದಾರೆ.
Met senior @INCIndia leader Shri A K Antony in New Delhi today and discussed about various issues. pic.twitter.com/aveFHSaZEO
— Siddaramaiah (@siddaramaiah) July 21, 2021