ದಿಢೀರ್‌ ಉಸಿರಾಟದ ಸಮಸ್ಯೆ – ಕೋವಿಡ್‌ 19ಗೆ ಜಿಲ್ಲಾಧಿಕಾರಿ ಬಲಿ

Public TV
1 Min Read
Debdutta Ray main

ಕೋಲ್ಕತ್ತಾ: ಕೋವಿಡ್‌ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್‌ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.

ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್‌ ಆಗಿದ್ದರು.

ಭಾನುವಾರ ಉಸಿರಾಟದ ಸಮಸ್ಯೆ ದಿಢೀರ್‌ ಉಲ್ಬಣವಾಗಿದ್ದರಿಂದ ಅವರನ್ನು ಸೆರಾಂಪೋರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮೃತಪಟ್ಟಿದ್ದಾರೆ.

2010ರ ಬ್ಯಾಚ್‌ ಅಧಿಕಾರಿಯಾಗಿದ್ದ ಇವರು ಪಶ್ಚಿಮ ಬಂಗಾಳ ಮತ್ತು ವಿವಿಧ ರಾಜ್ಯಗಳಿಂದ ಶ್ರಮಿಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಡಂಕಣಿಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಕೊರೊನಾ ವಾರಿಯರ್‌ ಆಗಿ ಕೆಲಸ ಮಾಡುತ್ತಿದ್ದಾಗ ಸೋಂಕು ತಗುಲಿತ್ತು.

ದೇಬದತ್ತ ರೇ ಪತಿ ಮತ್ತು ನಾಲ್ಕು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿ ಸಂತಾಪ ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *