ಬೆಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆ ವ್ಯಾಕ್ಸಿನೇಷನ್ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ ವಿ.ಆರ್.ವಾಲಾ ಅವರಿಗೆ ಮನವಿ ಮಾಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ @RLR_BTM, @eshwar_khandre, @SaleemAhmadINC, ಮಾಜಿ ಸಚಿವರಾದ @RV_Deshpande, @HKPatil1953 ನಿಯೋಗದಲ್ಲಿದ್ದರು. pic.twitter.com/KgIXt9t8ki
— Karnataka Congress (@INCKarnataka) June 4, 2021
ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ನಾಯಕರ ನಿಯೋಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮಾಜಿ ಸಚಿವ ರಾಮಲಿಂಗ ರೆಡ್ಡಿ, ಆರ್.ವಿ.ದೇಶಪಾಂಡೆ, ಹೆಚ್.ಕೆ.ಪಾಟೀಲ್ ಸಹಾ ನಿಯೋಗದಲ್ಲಿದ್ದರು. ಪ್ರತಿದಿನ ಒಂದು ಕೋಟಿ ವ್ಯಾಕ್ಸಿನೇಷನ್ ದೇಶದಲ್ಲಿ ಆಗಬೇಕು. ಉಚಿತ ವ್ಯಾಕ್ಸಿನೇಷನನ್ನ ಸರ್ಕಾರ ಜನರಿಗೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದರ ಜವಾಬ್ದಾರಿ ತಗೆದುಕೊಳ್ಳಬೇಕು ಎಂದು ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಹೆಲಿಕಾಪ್ಟರ್ ಬೆಂಗಳೂರಿನಲ್ಲಿಳಿಯದೇ ನೆಲಮಂಗಲದಲ್ಲಿ ಲ್ಯಾಂಡ್ ಆಗಿದ್ದೇಕೆ..?
ಕೆಪಿಸಿಸಿ ಅಧ್ಯಕ್ಷ @DKShivakumar ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಕೊರೋನಾ ಲಸಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ, ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. pic.twitter.com/nrqF3dMB4h
— Karnataka Congress (@INCKarnataka) June 4, 2021
ರಾಜ್ಯಪಾಲರ ಮೂಲಕ, ರಾಷ್ಟ್ರಪತಿ ಗಳಿಗೆ ಮನವಿ ಮಾಡಿದ ಕೈ ನಾಯಕರು ಪ್ರಧಾನಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ನಮ್ಮ ಪಕ್ಷದ ಶಾಸಕರ ಪಾಲಿನ ಒಂದು ಕೋಟಿ ಪ್ರದೇಶಾಭಿವೃದ್ಧಿ ನಿಧಿ ನಮಗೆ ಕೊಡಿಸಿ ಎಂದು ರಾಜ್ಯಪಾಲರಲ್ಲಿ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.