ವಿಜಯಪುರ: ಚಿಂದಿ ಆಯುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಪಟ್ಟಣದಲ್ಲಿ ನಡೆದಿದೆ. ವಿವಾಹಿತ ಮಹಿಳೆ ಮೇಲೆ ಮೂವರು ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ.
ನಸುಕಿನಲ್ಲಿ ಇನ್ನೂ ಕತ್ತಲೆ ಇರುವಾಗಲೇ ಚಿಂದಿ ಆಯಲು ಮಹಿಳೆ ಹೊರಟಿದ್ದಳು. ಈ ವೇಳೆ ದುಷ್ಟರು ಮಹಿಳೆಯ ಮೈ ಮೇಲಿನ ಬಟ್ಟೆ ಹರಿದು, ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ಆರೋಪಿಗಳನ್ನು ಅಕ್ಬರ್ ಮಕಾನದಾರ, ಸಲೀಮ ನದಾಫ, ಸೋಯೆಲ್ ಹಡಗಲಿ ಎಂದು ಗುರುತಿಸಲಾಗಿದ್ದು, ಇದೀಗ ನೊಂದ ಮಹಿಳೆ ಆರೋಪಿಗಳ ವಿರುದ್ಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.