ಮಂಗಳೂರು: ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.
ಸುಳ್ಯ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಆರೋಪಿ ಸಂಪತ್ ಕುಮಾರ್ ಸಾವನ್ನಪ್ಪಿದ್ದಾನೆ.
ಸಂಪತ್ ಕುಮಾರ್ ಕೊಡಗಿನ ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿ. ಈತ ಜಾಮೀನು ಪಡೆದು ಹೊರಗೆ ಬಂದಿದ್ದ. ಕಾರಿನಲ್ಲಿ ಬಂದ ನಾಲ್ವರ ತಂಡದಿಂದ ಗುಂಡಿನ ದಾಳಿ ನಡೆದಿದ್ದು, ಸಂಪತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಸುಳ್ಯ ಪೊಲೀಸರು, ಎಫ್ಎಸ್ಎಲ್ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.