ದೆಹಲಿ ಸರ್ಕಾರದಿಂದ ‘ಮನೆ ಮನೆಗೆ ಪಡಿತರ ಯೋಜನೆ’

Public TV
1 Min Read
arvind kejriwal

-ಅಂಗಡಿಗಳ ಮುಂದೆ ಕ್ಯೂ ನಿಲ್ಲುವಂತಿಲ್ಲ
-ಕೇಜ್ರಿವಾಲ್ ಸರ್ಕಾರದಿಂದ ಮಹತ್ವದ ಘೋಷಣೆ

ನವದೆಹಲಿ: ದೆಹಲಿಯ ಸರ್ಕಾರ ಪಡಿತರವನ್ನು ಫಲಾನುಭವಿಗಳಿಗೆ ಮನೆಗೆ ತಲುಪಿಸಲಾಗುವುದು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿ ಮನೆ ಮನೆಗೆ ಪಡಿತರ ಯೋಜನೆಗೆ ಅರವಿಂದ್ ಕೇಜ್ರಿವಾಲ್ ಸಂಪುಟ ಇಂದು ಗ್ರೀನ್ ಸಿಗ್ನಲ್ ನೀಡಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕ್ಯಾಬಿನೆಟ್ ಸಭೆಯ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್ ಯೋಜನೆಯ ಮಾಹಿತಿ ನೀಡಿದರು. ಮುಂದಿನ ಏಳೆಂಟು ತಿಂಗಳಲ್ಲಿ ಯೋಜನೆ ಪ್ರಾಯೋಗಿಕವಾಗಿ ಜಾರಿಯಾಗಲಿದೆ.

ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಬಡವರಿಗೆ ಗೌರವಯುತವಾಗಿ ಪಡಿತರ ನೀಡುವುದು ನಮ್ಮ ಬಹು ದಿನಗಳ ಕನಸಾಗಿತ್ತು. ಇಂದು ನಾವು ಕಂಡ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಈ ಯೋಜನೆಯ ಜೊತೆಯಲ್ಲಿ ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ ಸಹ ಅನ್ವಯಿಸಿಕೊಳ್ಳಲಾಗುತ್ತದೆ. ಮುಂದಿನ ಏಳೆಂಟು ತಿಂಗಳಲ್ಲಿ ಫಲಾನಭವಿಗಳಿಗೆ ಮನೆಯ ಬಾಗಿಲಿಗೆ ರೇಷನ್ ತಲುಪಲಿದೆ. ಫಲಾನುಭವಿ ಬೇಕಾದಲ್ಲಿ ಅಂಗಡಿಗಳಿಗೆ ತೆರಳಿ ತಮ್ಮ ಪಡಿತರವನ್ನು ತೆಗೆದುಕೊಳ್ಳಬಹುದು. ಗೋಧಿ ಬದಲಾಗಿ ಹಿಟ್ಟು ನೀಡಲಾಗುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *