ನವದೆಹಲಿ: ಆಗ್ನೇಯ ದೆಹಲಿಯ ತುಘಲಕಾಬಾದ್ ಪ್ರದೇಶದ ಕೊಳೆಗೇರಿಗಳಲ್ಲಿ ಸೋಮವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಸುಮಾರು 1,500 ಗುಡಿಸಲುಗಳು ಸುಟ್ಟು ಭಸ್ಮವಾಗಿದ್ದು, ನೂರಾರು ಜನರು ನಿರಾಶ್ರಿತರಾಗಿದ್ದಾರೆ.
ನಮಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ರಾತ್ರಿ 12.50ಕ್ಕೆ ಕರೆ ಬಂದಿದ್ದು, 28 ಅಗ್ನಿಶಾಮಕ ವಾಹನವನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಜನರು ನಿದ್ರೆಯಲ್ಲಿ ಇದ್ದಾಗ ಈ ಅವಘಡ ಸಂಭವಿಸಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಹೇಳಲಾಗಿದೆ.
Delhi: A fire has broken out at Tughlakabad slums. Rajendra Prasad Meena, DCP South East says, "We received information of fire at around 1 am, 18-20 fire tenders are at the spot. Firefighting operations underway. No casualty reported so far". pic.twitter.com/9ny3HpHAAZ
— ANI (@ANI) May 25, 2020
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ದಕ್ಷಿಣದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜೇಂದ್ರ ಪ್ರಸಾದ್ ಮೀನಾ, ತುಘಲಕಾಬಾದ್ನ ಕೊಳೆಗೇರಿಗಳಲ್ಲಿ ನಸುಕಿನ ಜಾವ 1 ಗಂಟೆ ಸುಮಾರಿಗೆ ಬೆಂಕಿಯ ಕಾಣಿಸಿಕೊಂಡ ಬಗ್ಗೆ ನಮಗೆ ಮಾಹಿತಿ ಬಂದಿತ್ತು. ತಕ್ಷಣ ನಮ್ಮ ಎಲ್ಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದೆವು. ಸುಮಾರು 1,000-1,200 ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಹೇಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸ್ಥಳೀಯರ ಪ್ರಕಾರ ಅಗ್ನಿ ಅವಘಡ ಹೇಗೆ ಸಂಭವಿಸಿತ್ತು ಎಂಬದರ ಬಗ್ಗೆ ಮಾಹಿತಿ ಇಲ್ಲ. ಆದರೆ ಬೆಂಕಿ ಕಾಣಿಸಿಕೊಂಡ ನಂತರ ಹೆಚ್ಚಿನ ಜನರು ತಮ್ಮ ಗುಡಿಸಲುಗಳಿಂದ ಹೊರಬಂದಿದ್ದಾರೆ. ಆದ್ದರಿಂದ ಯಾವುದೇ ಸಾವು ಸಂಭವಿಸಿಲ್ಲ. ಅಗ್ನಿಶಾಮಕ ದಳ ಮುಂಜಾನೆ 3:40ರ ಸುಮಾರಿಗೆ ಬೆಂಕಿಯನ್ನು ನಂದಿಸಿದ್ದು, ಇನ್ನೂ ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ.