ದೇವಸ್ಥಾನ, ಮನೆಯಲ್ಲಿ ಕಳ್ಳರ ಕೈಚಳಕ -ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪಾರಾರಿ

Public TV
3 Min Read
robbery 1

ಮಂಡ್ಯ/ಮೈಸೂರು/ಕೊಪ್ಪಳ: ದಿನೆ ದಿನೇ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಂಡ್ಯ, ಮೈಸೂರು ಹಾಗೂ ಕೊಪ್ಪಳದಲ್ಲಿ ಪ್ರತ್ಯೇಕ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.

robbery 2

ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಯ ಬೀಗ ಒಡೆದು ಮನೆಯಲ್ಲಿದ್ದ ಸುಮಾರು 100 ಗ್ರಾಂ ಚಿನ್ನಾಭರಣ ಹಾಗೂ ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕೆ.ಎಸ್.ನಗರ ಬಡಾವಣೆಯಲ್ಲಿ ಜರುಗಿದೆ. ಕೊಪ್ಪ ಶುಗರ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕುಮಾರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಕುಮಾರ್ ಹಾಗೂ ಅವರು ಕುಟುಂಬ ಸದಸ್ಯರು ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಈ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

robbery 4

ಇತ್ತ ಮೈಸೂರಿನ ಹುಣಸೂರಿನಲ್ಲಿ ವೃದ್ಧ ದಂಪತಿಯ ಹಲ್ಲೆ ನಡೆಸಿ ನಗದು ಹಾಗೂ ಆಭರಣ ದೋಚಿದ್ದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸೂರು ಪೊಲೀಸರು 6 ಮಂದಿ ಆರೋಪಿಯನ್ನು ಬಂಧಿಸಿದ್ದಾರೆ. ಪಿರಿಯಾಪಟ್ಟಣದ ಮೋಸಿನ್, ಹುಣಸೂರಿನ ಇಮ್ರಾನ್, ಮಿರ್ಜಾ ತಸ್ವೀರ್ ಬೇಗ್, ಕುಶಾಲನಗರದ ಅಫ್ರಿನ್, ಮಡಿಕೇರಿ ತಾಲೂಕು ಮೇಕೇರಿ ಗ್ರಾಮದ ಅಶಿಕ್ ಹುಸೇನ್ ಮತ್ತು ಮಡಿಕೇರಿ ಪಟ್ಟಣದ ಮಹಮ್ಮದ್ ಅಜರುದ್ದೀನ್ ಬಂಧಿತರು.

robbery 5

ಜುಲೈ 26 ರಂದು ಸಂಜೆ ಹುಣಸೂರು ಪಟ್ಟಣ ನಿವಾಸಿ ಗಜಾಲಾ ತರಾನಮ್ ಮತ್ತು ಅವರ ಕುಟುಂಬದವರು ಮನೆಯಲ್ಲಿದ್ದಾಗ, ದುಷ್ಕರ್ಮಿಗಳು ಕಾಲಿಂಗ್ ಬೆಲ್ ಮಾಡಿದ್ದಾರೆ. ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿದ್ದ ಅಪರಿಚಿತರು 36 ಲಕ್ಷ ನಗದು ಮತ್ತು 500 ಗ್ರಾಂ ತೂಕದ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದರು. ಆರೋಪಿಗಳು 20 ರಿಂದ 35 ವರ್ಷ ಒಳಗಿನವರಾಗಿದ್ದು, ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇನ್ನೂ ಕೆಲವರು ಕೃತ್ಯದಲ್ಲಿ ಭಾಗಿಯಾಗಿದ್ದು, ಅವರ ಬಂಧನಕ್ಕೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಎಸ್ಪಿ ಆರ್.ಚೇತನ್ ತಿಳಿಸಿದ್ದಾರೆ.

money web

ಆರೋಪಿಗಳಲ್ಲಿ ಮಿರ್ಜಾ ತನ್ವೀರ್ ಬೇಗ್ ಎಂಬವನು ಹುಣಸೂರಿನಲ್ಲಿ ನಡೆದ ವಿದ್ಯಾರ್ಥಿಗಳ ಜೋಡಿ ಕೊಲೆ ಪ್ರಕರಣ ಮತ್ತು ತ್ಯಾಗರಾಜ ಪಿಳ್ಳೆ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಅಫ್ರಿನ್ ಎಂಬಾತ ಕುಶಾಲನಗರದ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

FotoJet 1

ಕೊಪ್ಪಳ ನಗರದಲ್ಲಿರುವ ಹೇಮರಡ್ಡಿ ಮಲ್ಲಮ್ಮ ದೇವಾಲಯದ ಹುಂಡಿ, ದೇವರ ಮೂರ್ತಿ ಹಾಗೂ ಅಲ್ಲಿಯ ಆಭರಣಗಳನ್ನೂ ಸಹ ಬಿಡದೇ ಕಳ್ಳರು ದೋಚಿರುವ ಘಟನೆ ನಡೆದಿದೆ. ಕಳ್ಳತನದ ಮೊದಲು ಆರೋಪಿಗಳು ದೇವಸ್ಥಾನದಲ್ಲಿದ್ದ ಸಿಸಿ ಕ್ಯಾಮೆರಾದ ಕನೆಕ್ಷನ್ ಡಿಸ್ ಕನೆಕ್ಟ್ ಮಾಡಿರುವ ಬಗ್ಗೆ ಪರಿಶೀಲನೆ ವೇಳೆ ಕೊಪ್ಪಳ ನಗರ ಠಾಣೆಯ ಪೊಲೀಸರಿಗೆ ತಿಳಿದುಬಂದಿದೆ. ಕೊಪ್ಪಳ ನಗರದ ಕಿನ್ನಾಳ ರಸ್ತೆಯ ಸಣ್ಣ ಬೆಟ್ಟದ ಮೇಲಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನವು ಸುಂದರ ಹಾಗೂ ಪ್ರಶಾಂತವಾಗಿದೆ. ಈ ದೇವಸ್ಥಾನವು ಬೆಟ್ಟದಲ್ಲಿದ್ದು, ಬೆಟ್ಟದ ಕೆಳಗೆ ಮನೆಗಳಿವೆ. ಸಂಜೆ ವೇಳೆ ಇಲ್ಲಿ ಜನರ ಸಂಚಾರ ಕಡಿಮೆ, ಇಂತಹ ದೇವಸ್ಥಾನದಲ್ಲಿ ಮಧ್ಯರಾತ್ರಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.

robbery 3

ಮೊದಲಿಗೆ ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿ ವೈಯರನ್ನು ಡಿಸ್‍ ಕನೆಕ್ಟ್ ಮಾಡಿದ ಕಳ್ಳರು ಬಾಗಿಲು ಮುರಿದು ಒಳನುಗ್ಗಿದ್ದಾರೆ. ಬಳಿಕ ಅರ್ಧ ಕೆಜಿ ತೂಕದ ದೇವರ ವಿಗ್ರಹ, ದೇವರಿಗೆ ಹಾಕಿದ್ದ 15 ತೊಲ ಬಂಗಾರದ ಆಭರಣವನ್ನು ಕದ್ದಿದ್ದಾರೆ. ಇದೇ ವೇಳೆ ದೇವರ ಹುಂಡಿಯಲ್ಲಿದ್ದ ಸುಮಾರು 50 ಸಾವಿರ ರೂಪಾಯಿಯನ್ನು ಕದ್ದಿದ್ದಾರೆ. ದೇವರ ಹುಂಡಿಯನ್ನು ದೇವಸ್ಥಾನದಿಂದ ಹೊರ ತಂದು ಹುಂಡಿ ಒಡೆದು ಚಿಲ್ಲರೆ ಹಣ ಅಲ್ಲಿಯೇ ಬಿಟ್ಟು ನೋಟುಗಳನ್ನು ತೆಗೆದುಕೊಂಡಿದ್ದಾರೆ. ಈ ಘಟನೆಯ ನಂತರ ಕೊಪ್ಪಳ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಶ್ವಾನ ದಳ, ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಜಿಲ್ಲಾವಾರು ಪರಿಗಣಿಸಿ ಹೈಕಮಾಂಡ್ ಅವಕಾಶ ಕೊಟ್ರೆ ಕೆಲಸ ಮಾಡ್ತೀನಿ: ನಿರಂಜನ್ ಕುಮಾರ್

Share This Article
Leave a Comment

Leave a Reply

Your email address will not be published. Required fields are marked *