Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ

Public TV
Last updated: September 21, 2020 5:30 pm
Public TV
Share
2 Min Read
tablighijamaatdelhiheadquarter 26 6 e1600689389805
SHARE

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಲು ತಬ್ಲಿಘಿಗಳೂ ಕಾರಣ. ಒಂದೇ ಸ್ಥಳದಲ್ಲಿ ಹೆಚ್ಚು ಜನ ಸೇರಿದ್ದರಿಂದ ಹಾಗೂ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಜನರು ಭಾಗವಹಿಸಿದ್ದರಿಂದ ವ್ಯಾಪಕವಾಗಿ ಹಬ್ಬಿತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಶಿವ ಸೇನೆಯ ಸಂಸದ ಅನಿಲ್ ದೇಸಾಯಿ ಅವರು ದೆಹಲಿ ತಬ್ಲಿಘಿ ಜಮಾತ್ ಸಭೆಯಿಂದ ದೇಶದಲ್ಲಿ ಎಷ್ಟು ಜನರಿಗೆ ಕೊರೊನಾ ಹರಡಿದೆ ಎಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಗೃಹ ಸಚಿವ ಜಿ.ಕೃಷ್ಣಾ ರೆಡ್ಡಿ ಅವರು ರಾಜ್ಯ ಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

tablighi

ಇದರಲ್ಲಿ ಕೊರೊನಾ ವ್ಯಾಪಕವಾಗಿ ಹರಡುವಿಕೆಗೆ ಕಾರಣ ತಿಳಿಸಿದ್ದು, ಮಾರ್ಚ್‍ನಲ್ಲಿ ದೆಹಲಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ತಬ್ಲಿಘಿ ಜಮಾತ್ ವೇಳೆ ಹೆಚ್ಚು ಜನರು ಒಂದೇ ಕಡೆ ಸೇರಿರುವುದೂ ಕೊರೊನಾ ವ್ಯಾಪಕವಾಗಿ ಹರಡಲು ಕಾರಣ. ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಸಂದರ್ಭದಲ್ಲಿ ವಿವಿಧ ಪ್ರಾಧಿಕಾರಗಳು ಹೆಚ್ಚು ಜನ ಸೇರದಂತೆ, ಯಾವುದೇ ಕಾರ್ಯಕ್ರಮ ನಡೆಸದಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ದೆಹಲಿಯಲ್ಲಿ ಯಾರಿಗೂ ತಿಳಿಯದಂತೆ ಮುಸ್ಲಿಂ ಸಮುದಾಯದವರು ಕಾರ್ಯಕ್ರಮ ನಡೆಸಿದ್ದರು ಎಂದು ತಿಳಿಸಿದ್ದಾರೆ.

Tablighi Jamaat A 1

ದೆಹಲಿ ಪೊಲೀಸರು ಈ ಕುರಿತು ವರದಿ ಮಾಡಿದ್ದು, ಕೊರೊನಾ ವೈರಸ್ ಹರಡುವ ಹಿನ್ನೆಲೆ ವಿವಿಧ ಪ್ರಾಧಿಕಾರಗಳು ಆದೇಶ, ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಇದರ ಹೊರತಾಗಿಯೂ ಯಾರಿಗೂ ತಿಳಿಯದಂತೆ ಗುಪ್ತವಾಗಿ ಬೃಹತ್ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸೇರಿದಂತೆ ಕೊರೊನಾದ ಯಾವುದೇ ನಿಯಮ ಪಾಲಿಸಿರಲಿಲ್ಲ. ಹೀಗಾಗಿ ಕೊರೊನಾ ವ್ಯಾಪಕವಾಗಿ ಹಬ್ಬಲು ಇದೂ ಒಂದು ಕಾರಣ ಎಂದು ಸಚಿವರು ತಿಳಿಸಿದರು.

ಮಾರ್ಚ್‍ನಲ್ಲಿ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮಸೀದಿಯಲ್ಲಿ ತಬ್ಲಿಘಿ ಜಮಾತ್ ಆಯೋಜಿಸಿದ್ದ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ವಿದೇಶಿ ಹಾಗೂ ಸ್ಥಳೀಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ನೂರಾರು ಜನರ ಸಂಪರ್ಕದ ಹಿನ್ನೆಲೆ ವಿವಿಧ ರಾಜ್ಯಗಳಲ್ಲಿ ಕೊರೊನಾ ವ್ಯಾಪಿಸಿತು ಎಂದು ವಿವರಿಸಿದರು.

Tablighi A

ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಕೊರೊನಾ ಹೇಗೆ ವ್ಯಾಪಿಸಿತು ಎಂಬುದನ್ನು ವಿವರಿಸಿ ಎಂದು ಅನಿಲ್ ದೇಸಾಯಿ ಕೇಳಿದ್ದರು. ಹೀಗಾಗಿ ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದ್ದಾರೆ.

ಬಳಿಕ ತಬ್ಲಿಘಿ ಜಮಾತ್‍ನಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಎಷ್ಟು ಜನರನ್ನು ಬಂಧಿಸಲಾಗಿದೆ ಎಂದು ಸಂಸದ ಅನಿಲ್ ದೇಸಾಯಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವಾಲಯ, ತಬ್ಲಿಘಿ ಜಮಾತ್‍ನ ಸುಮಾರು 2,361 ಜನರನ್ನು ಮಾರ್ಚ್ 29ರಂದು ದೆಹಲಿ ಪೊಲೀಸರು ಸ್ಥಳಾಂತರಿಸಿದ್ದಾರೆ. ಜಮಾತ್‍ನ 233 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಜಮಾತ್ ಮುಖ್ಯಸ್ಥ ಮೌಲಾನಾ ಮೊಹದ್ ಸಾದ್‍ನನ್ನು ವಿಚಾರಣೆ ನಡೆಸುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರೆಡ್ಡಿ ವಿವರಿಸಿದ್ದಾರೆ.

Tablighi

ದೆಹಲಿ ಪೊಲೀಸರು ಜಮಾತ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ 36 ದೇಶಗಳ 956 ವಿದೇಶಿಗರ ವಿರುದ್ಧ 59 ಚಾರ್ಜ್‍ಶೀಟ್ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅವರ ವಿಸಾ ರದ್ದುಪಡಿಸಿದೆ. ಪ್ರವಾಸ ವೀಸಾದಲ್ಲಿ ಬಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅಪರಾಧ. ಈ ಹಿನ್ನೆಲೆಯಲ್ಲಿ ಪ್ರವಾಸಿ ವೀಸಾ ದುರುಪಯೋಗ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಈ ವಿದೇಶಿಗರು ಪ್ರವಾಸಿ ವಿಸಾ ಪಡೆದು ಭಾರತಕ್ಕೆ ಬಂದಿದ್ದು, ಧಾರ್ಮಿಕ ಕೂಟಗಳಲ್ಲಿ ಭಾಗಿಯಾಗಿದ್ದರು ಎಂದು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ.

TAGGED:Corona VirusNew DelhiPublic TVrajya sabhasessionTablighi Jamaatಅಧಿವೇಶನಕೊರೊನಾ ವೈರಸ್ತಬ್ಲಿಘಿ ಜಮಾತ್ನವದೆಹಲಿಪಬ್ಲಿಕ್ ಟಿವಿರಾಜ್ಯಸಭೆ
Share This Article
Facebook Whatsapp Whatsapp Telegram

Cinema Updates

Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
2 minutes ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
4 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
12 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
14 hours ago

You Might Also Like

Shivaraj Tangadagi
Bengaluru City

ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ – ಶಿವರಾಜ ತಂಗಡಗಿ

Public TV
By Public TV
1 minute ago
Bidar Accident
Bidar

ಲಾರಿಗಳ ನಡುವೆ ಭೀಕರ ಅಪಘಾತ – ಬೀದರ್ ಮೂಲದ ಚಾಲಕ ಸಾವು

Public TV
By Public TV
8 minutes ago
Corona Virus
Belgaum

ಬೆಳಗಾವಿಯಲ್ಲಿ ಕೊರೊನಾಗೆ ಮೊದಲ ಬಲಿ

Public TV
By Public TV
40 minutes ago
Dance Master Arrestes in Kadugodi bengaluru crime
Bengaluru City

ಕಾರಿಗೆ ಹತ್ತಿಸಿಕೊಂಡು ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

Public TV
By Public TV
54 minutes ago
k ashraf
Dakshina Kannada

ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

Public TV
By Public TV
58 minutes ago
Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?