Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ

Corona

ದೇಶದಲ್ಲಿ ಕೊರೊನಾ ವ್ಯಾಪಿಸಲು ತಬ್ಲಿಘಿಗಳೂ ಕಾರಣ – ಪ್ರಶ್ನೆಗೆ ಕೇಂದ್ರದ ಉತ್ತರ

Public TV
Last updated: September 21, 2020 5:30 pm
Public TV
Share
2 Min Read
tablighijamaatdelhiheadquarter 26 6 e1600689389805
SHARE

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಲು ತಬ್ಲಿಘಿಗಳೂ ಕಾರಣ. ಒಂದೇ ಸ್ಥಳದಲ್ಲಿ ಹೆಚ್ಚು ಜನ ಸೇರಿದ್ದರಿಂದ ಹಾಗೂ ಸಮಾರಂಭದಲ್ಲಿ ವಿವಿಧ ರಾಜ್ಯಗಳ ಜನರು ಭಾಗವಹಿಸಿದ್ದರಿಂದ ವ್ಯಾಪಕವಾಗಿ ಹಬ್ಬಿತು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಶಿವ ಸೇನೆಯ ಸಂಸದ ಅನಿಲ್ ದೇಸಾಯಿ ಅವರು ದೆಹಲಿ ತಬ್ಲಿಘಿ ಜಮಾತ್ ಸಭೆಯಿಂದ ದೇಶದಲ್ಲಿ ಎಷ್ಟು ಜನರಿಗೆ ಕೊರೊನಾ ಹರಡಿದೆ ಎಂದು ಪ್ರಶ್ನೆ ಕೇಳಿದ್ದರು. ಈ ಪ್ರಶ್ನೆಗೆ ಗೃಹ ಸಚಿವ ಜಿ.ಕೃಷ್ಣಾ ರೆಡ್ಡಿ ಅವರು ರಾಜ್ಯ ಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

tablighi

ಇದರಲ್ಲಿ ಕೊರೊನಾ ವ್ಯಾಪಕವಾಗಿ ಹರಡುವಿಕೆಗೆ ಕಾರಣ ತಿಳಿಸಿದ್ದು, ಮಾರ್ಚ್‍ನಲ್ಲಿ ದೆಹಲಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ತಬ್ಲಿಘಿ ಜಮಾತ್ ವೇಳೆ ಹೆಚ್ಚು ಜನರು ಒಂದೇ ಕಡೆ ಸೇರಿರುವುದೂ ಕೊರೊನಾ ವ್ಯಾಪಕವಾಗಿ ಹರಡಲು ಕಾರಣ. ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಸಂದರ್ಭದಲ್ಲಿ ವಿವಿಧ ಪ್ರಾಧಿಕಾರಗಳು ಹೆಚ್ಚು ಜನ ಸೇರದಂತೆ, ಯಾವುದೇ ಕಾರ್ಯಕ್ರಮ ನಡೆಸದಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದರೂ ದೆಹಲಿಯಲ್ಲಿ ಯಾರಿಗೂ ತಿಳಿಯದಂತೆ ಮುಸ್ಲಿಂ ಸಮುದಾಯದವರು ಕಾರ್ಯಕ್ರಮ ನಡೆಸಿದ್ದರು ಎಂದು ತಿಳಿಸಿದ್ದಾರೆ.

Tablighi Jamaat A 1

ದೆಹಲಿ ಪೊಲೀಸರು ಈ ಕುರಿತು ವರದಿ ಮಾಡಿದ್ದು, ಕೊರೊನಾ ವೈರಸ್ ಹರಡುವ ಹಿನ್ನೆಲೆ ವಿವಿಧ ಪ್ರಾಧಿಕಾರಗಳು ಆದೇಶ, ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು. ಇದರ ಹೊರತಾಗಿಯೂ ಯಾರಿಗೂ ತಿಳಿಯದಂತೆ ಗುಪ್ತವಾಗಿ ಬೃಹತ್ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸೇರಿದಂತೆ ಕೊರೊನಾದ ಯಾವುದೇ ನಿಯಮ ಪಾಲಿಸಿರಲಿಲ್ಲ. ಹೀಗಾಗಿ ಕೊರೊನಾ ವ್ಯಾಪಕವಾಗಿ ಹಬ್ಬಲು ಇದೂ ಒಂದು ಕಾರಣ ಎಂದು ಸಚಿವರು ತಿಳಿಸಿದರು.

ಮಾರ್ಚ್‍ನಲ್ಲಿ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮಸೀದಿಯಲ್ಲಿ ತಬ್ಲಿಘಿ ಜಮಾತ್ ಆಯೋಜಿಸಿದ್ದ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ವಿದೇಶಿ ಹಾಗೂ ಸ್ಥಳೀಯರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ್ದ ನೂರಾರು ಜನರ ಸಂಪರ್ಕದ ಹಿನ್ನೆಲೆ ವಿವಿಧ ರಾಜ್ಯಗಳಲ್ಲಿ ಕೊರೊನಾ ವ್ಯಾಪಿಸಿತು ಎಂದು ವಿವರಿಸಿದರು.

Tablighi A

ದೆಹಲಿ ಸೇರಿದಂತೆ ದೇಶದ ವಿವಿಧ ನಗರಗಳಿಗೆ ಕೊರೊನಾ ಹೇಗೆ ವ್ಯಾಪಿಸಿತು ಎಂಬುದನ್ನು ವಿವರಿಸಿ ಎಂದು ಅನಿಲ್ ದೇಸಾಯಿ ಕೇಳಿದ್ದರು. ಹೀಗಾಗಿ ಕೇಂದ್ರ ಸಚಿವ ಜಿ.ಕೃಷ್ಣಾ ರೆಡ್ಡಿ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದ್ದಾರೆ.

ಬಳಿಕ ತಬ್ಲಿಘಿ ಜಮಾತ್‍ನಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಎಷ್ಟು ಜನರನ್ನು ಬಂಧಿಸಲಾಗಿದೆ ಎಂದು ಸಂಸದ ಅನಿಲ್ ದೇಸಾಯಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗೃಹ ಸಚಿವಾಲಯ, ತಬ್ಲಿಘಿ ಜಮಾತ್‍ನ ಸುಮಾರು 2,361 ಜನರನ್ನು ಮಾರ್ಚ್ 29ರಂದು ದೆಹಲಿ ಪೊಲೀಸರು ಸ್ಥಳಾಂತರಿಸಿದ್ದಾರೆ. ಜಮಾತ್‍ನ 233 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಜಮಾತ್ ಮುಖ್ಯಸ್ಥ ಮೌಲಾನಾ ಮೊಹದ್ ಸಾದ್‍ನನ್ನು ವಿಚಾರಣೆ ನಡೆಸುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರೆಡ್ಡಿ ವಿವರಿಸಿದ್ದಾರೆ.

Tablighi

ದೆಹಲಿ ಪೊಲೀಸರು ಜಮಾತ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ 36 ದೇಶಗಳ 956 ವಿದೇಶಿಗರ ವಿರುದ್ಧ 59 ಚಾರ್ಜ್‍ಶೀಟ್ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅವರ ವಿಸಾ ರದ್ದುಪಡಿಸಿದೆ. ಪ್ರವಾಸ ವೀಸಾದಲ್ಲಿ ಬಂದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಅಪರಾಧ. ಈ ಹಿನ್ನೆಲೆಯಲ್ಲಿ ಪ್ರವಾಸಿ ವೀಸಾ ದುರುಪಯೋಗ ಮಾಡಿದವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಈ ವಿದೇಶಿಗರು ಪ್ರವಾಸಿ ವಿಸಾ ಪಡೆದು ಭಾರತಕ್ಕೆ ಬಂದಿದ್ದು, ಧಾರ್ಮಿಕ ಕೂಟಗಳಲ್ಲಿ ಭಾಗಿಯಾಗಿದ್ದರು ಎಂದು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ.

TAGGED:Corona VirusNew DelhiPublic TVrajya sabhasessionTablighi Jamaatಅಧಿವೇಶನಕೊರೊನಾ ವೈರಸ್ತಬ್ಲಿಘಿ ಜಮಾತ್ನವದೆಹಲಿಪಬ್ಲಿಕ್ ಟಿವಿರಾಜ್ಯಸಭೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 minutes ago
Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
38 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
56 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
1 hour ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
2 hours ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?