Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Bengaluru City

ದೇಶವಿರೋಧಿ ಚಿಂತನೆಯ ಕಾಂಗ್ರೆಸ್ ತನ್ನ ಹೆಸರು ಬದಲಿಸುವುದು ಸೂಕ್ತ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್

Public TV
Last updated: June 12, 2021 6:53 pm
Public TV
Share
3 Min Read
Capt Ganesh Karnik
SHARE

ಬೆಂಗಳೂರು: ಕಾಂಗ್ರೆಸ್ ಹಿರಿಯ ನೇತಾರ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದಿರುವ ರಾಜ್ಯ ಬಿಜೆಪಿ ಮುಖ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ದಿಗ್ವಿಜಯ ಸಿಂಗ್ ಅವರ ಹೇಳಿಕೆಯನ್ನು ಪಕ್ಷವು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ.

ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ವಿಶ್ವವಂದ್ಯ ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ, ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಆ ಪಕ್ಷವು ಚೀನಾ- ಪಾಕಿಸ್ತಾನದ ಜೊತೆ ನಿಂತಿರುವುದು ಸ್ಪಷ್ಟಗೊಳ್ಳುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು ಕ್ಲಬ್‍ಹೌಸ್ ಆ್ಯಪ್ ಮೂಲಕ ದೇಶವಿರೋಧಿ ಮಾತನ್ನಾಡುವ ನಾಚಿಗೆಗೆಟ್ಟ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ ಆ್ಯಂಟಿ ನ್ಯಾಷನಲ್ ಕ್ಲಬ್‍ಹೌಸ್ ಎಂದು ಬದಲಿಸಿಕೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ.

Capt Ganesh Karnik 1 medium

ದಿಗ್ವಿಜಯ್ ಸಿಂಗ್ ಅವರು ಈ ಹಿಂದೆ ಪುಲ್ವಾಮಾ ದಾಳಿ ಇದೇನೂ ಗಂಭೀರ ವಿಚಾರವಲ್ಲ ಎಂದು ಹೇಳಿ ಪಾಕಿಸ್ತಾನದ ಕ್ರಮವನ್ನೇ ಸಮರ್ಥಿಸಲು ಮುಂದಾಗಿದ್ದರು. ಇದು ಭಯೋತ್ಪಾದಕರ ದಾಳಿ ಎಂದು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ. ವಿದೇಶದ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ “ನರೇಂದ್ರ ಮೋದಿ ಅವರ ಅಧಿಕಾರ ಕಳೆದುಕೊಂಡರೆ” ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್‍ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ, ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Digvijaya Singh

ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದಲ್ಲಿ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆ ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು ಕಾಶ್ಮೀರದಲ್ಲಿ ಶೇ.54ರಷ್ಟು ಉಗ್ರ ಚಟುವಟಿಕೆ ಇಳಿಕೆ

digvijay singh

ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ. ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್ ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ರಾಷ್ಟ್ರಾಧ್ಯಕ್ಷರಾದ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ಅವರು ಕೇಳಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ನಮಗೆ ರಾಷ್ಟ್ರೀಯತೆಯ ಪ್ರಶ್ನೆ: ಅಮಿತ್ ಶಾ

jammu kashmir

ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್‍ನಲ್ಲಿ ಜಮ್ಮು -ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಪ್ರಶ್ನೆ ಮುಂದಿಟ್ಟಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧ ಹಿಂಪಡೆಯುವವರೆಗೆ ದ್ವಿಪಕ್ಷೀಯ ಮಾತುಕತೆ ಇಲ್ಲ- ಇಮ್ರಾನ್ ಖಾನ್

TAGGED:Article 370Captain Ganesh Karnikcongressdigvijay singhJammu and KashmirPublic TVಆರ್ಟಿಕಲ್ 370ಕಾಂಗ್ರೆಸ್ಕ್ಯಾಪ್ಟನ್ ಗಣೇಶ್ ಕಾರ್ಣಿಕ್ಜಮ್ಮು ಮತ್ತು ಕಾಶ್ಮೀರದಿಗ್ವಿಜಯ್ ಸಿಂಗ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

health
Latest

17 ಕ್ಯಾನ್ಸರ್‌ ಔಷಧಿ ದರ ಇಳಿಕೆ, 10,000 ಕೋಟಿಗೆ ‘ಬಯೋಫಾರ್ಮಾ ಶಕ್ತಿ ಮಿಷನ್’‌ – ಆರೋಗ್ಯ ವಲಯಕ್ಕೆ ಸಿಕ್ಕಿದ್ದೇನು?

Public TV
By Public TV
9 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
18 minutes ago
Defence
Latest

ರಕ್ಷಣಾ ಬಜೆಟ್‌ ಬರೋಬ್ಬರಿ 7.85 ಲಕ್ಷ ಕೋಟಿಗೆ ಏರಿಕೆ – ಯಾವ ವರ್ಷ ಎಷ್ಟಿತ್ತು?

Public TV
By Public TV
31 minutes ago
Lakhpati Didi
Latest

ಲಕ್‌ಪತಿ ದೀದಿಯಿಂದ ‘SHE-ಮಾರ್ಟ್‌’ವರೆಗೆ – ಬಜೆಟ್‌ನಲ್ಲಿ ಗ್ರಾಮೀಣ ಮಹಿಳೆಯರಿಗೆ ಒತ್ತು

Public TV
By Public TV
53 minutes ago
Nirmala Sitharaman 2
Latest

Union Budget 2026 | ಪ್ರತಿ ಜಿಲ್ಲೆಯಲ್ಲೂ ಬಾಲಕಿಯರ ಹಾಸ್ಟೆಲ್‌ ಸ್ಥಾಪನೆ

Public TV
By Public TV
1 hour ago
Differently Abled
Latest

Union Budget 2026: ದಿವ್ಯಾಂಗರಿಗೆ ಐಟಿ, ಎವಿಜಿಸಿ, ಆತಿಥ್ಯ ವಲಯಗಳಲ್ಲಿ ಸಮಗ್ರ ತರಬೇತಿ ನೀಡಲು ಕೌಶಲ್ಯ ಯೋಜನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?