ದೊರೆಸ್ವಾಮಿ ಅವರಿಗೂ ವಿಜಯಪುರಕ್ಕೂ ಇತ್ತು ನಂಟು

Public TV
1 Min Read
doreswamy 1

ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೂ ವಿಜಯಪುರಕ್ಕೂ ನಂಟು ಇತ್ತು. ಈ ಹಿಂದೆ 2010ರಲ್ಲಿ ಅಂದು ರಾಜ್ಯವಷ್ಟೇ ಅಲ್ಲ ದೇಶಾದ್ಯಂತ ಹೋರಾಟದ ಮೂಲಕ ಸದ್ದು ಮಾಡಿದ್ದ ಭೀಮಾ ನದಿ ನೀರು ರೈತವರ್ಗ ಸಮಿತಿ ದಶಮಾನೋತ್ಸವ ಕಾರ್ಯಕ್ರಮಕ್ಕೆ ಹೆಚ್. ಎಸ್. ದೊರೆಸ್ವಾಮಿ ವಿಜಯಪುರ ಜಿಲ್ಲೆಗೆ ಆಗಮಿಸಿದ್ದರು.

doreswamy 4

ಮಹಾರಾಷ್ಟ್ರ ಕರ್ನಾಟಕದ ಪಾಲಿನ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಭೀಮಾ ನದಿ ನೀರು ರೈತವರ್ಗ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. 2000ರಲ್ಲಿ ರಚನೆಯಾಗಿದ್ದ ಈ ಸಮಿತಿ ತನ್ನ ಹೋರಾಟದ ಮೂಲಕ ಅಂದು ಬೇಸಿಗೆಯಲ್ಲಿ ಪ್ರತಿದಿನ 400 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರಕ್ಕೆ ಮಧ್ಯಂತರ ಆದೇಶ ನೀಡಿತ್ತು.

doreswamy 3

ಈ ಸಮಿತಿಯ ದಶಮಾನೋತ್ಸವ ಕಾರ್ಯಕ್ರಮ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮರಗೂರು ಗ್ರಾಮದ ಬಳಿ ಭೀಮಾ ಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಹತ್ತಿರ ಜನವರಿ 8 ರಿಂದ 10ರ ವರೆಗೆ ಮೂರು ದಿನ ನಡೆದಿತ್ತು. ಸಮಿತಿ ಅಧ್ಯಕ್ಷ ಮತ್ತು ಭೀಮಾ ಹೋರಾಟಗಾರ ಈ ಕಾರ್ಯಕ್ರಮ ಆಯೋಜಿಸಿದ್ದರು.

doreswamy 2

ಈ ಹೋರಾಟಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ದೊರೆಸ್ವಾಮಿ, ಕಾರ್ಯಕ್ರಮದ ಅಚ್ಚುಕಟ್ಟುತನದಿಂದ ಪ್ರಭಾವಿತರಾಗಿ ಮೂರೂ ದಿನ ಕಾರ್ಯಕ್ರಮ ಮುಗಿಯುವವರೆಗೆ ಅಲ್ಲಿಯೇ ಇದ್ದು ಹೋರಾಟಗಾರರನ್ನು ಹುರಿದುಂಬಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *