Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ 10ನೇ ತರಗತಿ ಪರೀಕ್ಷೆ ನಡೆಸುವುದು ಅರ್ಥಹೀನ-ನಿರಂಜನಾರಾಧ್ಯ ವಿ.ಪಿ

Public TV
Last updated: June 5, 2021 9:10 am
Public TV
Share
3 Min Read
niranjanadya
SHARE

ಬೆಂಗಳೂರು: ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ ವಿಷಯ. ಇದು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ತೀರ್ಮಾನವನ್ನು ಗೌರವಿಸಿದಂತಾಗಿದೆ. ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸುವುದಾಗಿ ಪ್ರಕಟಿಸಿರುವುದು ಅರ್ಥಹೀನವಾಗಿದೆ ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಅಭಿಪ್ರಾಯಪಟ್ಟಿದ್ದಾರೆ.

cbse class 12 exam medium

ಪತ್ರಿಕಾ ಪ್ರಕಟನೆಯನ್ನು ಹೊರಡಿಸಿದ ನಿರಂಜನಾರಾಧ್ಯ ಅವರು, ಸಾಮಾನ್ಯವಾಗಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ನಾವು ಮಂಡಳಿ ಪರೀಕ್ಷೆಗಳಿಲ್ಲದೆ ತೇರ್ಗಡೆಗೆ ಪರಿಗಣಿಸುವಾಗ ಪ್ರಥಮ ಪಿಯುಸಿಯಲ್ಲಿ ಅವರ ಸಾಧನೆ, ತರಗತಿ ಪರೀಕ್ಷೆಗಳ ಹಾಗೂ ಪ್ರಾಯೋಗಿಕ ಪರೀಕ್ಷೆಗಳ ಅಂಕ, ಅಂದರೆ ಒಂದು ವರ್ಷದ ಸಾಧನೆಯನ್ನು ಪರಿಗಣಿಸಿ ಎಲ್ಲರನ್ನೂ ತೇರ್ಗಡೆ ಮಾಡುವ ಕ್ರಮ ಅನುಸರಿಸುತ್ತೇವೆ. ಅದರ ಜೊತೆಗೆ ಅಗತ್ಯವಿದ್ದಲ್ಲಿ ಅವರು ಹಿಂದಿನ ಮಂಡಳಿ ಪರೀಕ್ಷೆಯಾದ 10ನೇ ತರಗತಿಯ ಸಾಧನೆಯನ್ನು ಪರಿಗಣಿಸಬಹುದಾಗಿದೆ. ಇಲ್ಲಿ ಸಾಧನೆಯನ್ನು ಓರೆಗಲ್ಲಿಗೆ ಹಚ್ಚಲು ಹೆಚ್ಚಿನ ಆಯಾಮಗಳು ಕಷ್ಟ ಎಂದಿದ್ದಾರೆ. ಇದನ್ನೂ ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಹೇಗೆ ನಡೆಯುತ್ತೆ? ಪಿಯುಸಿ ವಿದ್ಯಾರ್ಥಿಗಳು ಹೇಗೆ ಪಾಸ್?

2nd puc Exam Sureshkumar medium

10ನೇ ತರಗತಿಯಲ್ಲಿರುವ ಮಕ್ಕಳ ಸಂಚಿತ (ಕ್ಯುಮ್ಯುಲೇಟೀವ್) ಸಾಧನೆಯನ್ನು ಪರಿಗಣಿಸಿ ಮಂಡಳಿ ಪರೀಕ್ಷೆಯಿಲ್ಲದೆ ವಸ್ತುನಿಷ್ಠವಾಗಿ ಹಾಗೂ ವೈಜ್ಞಾನಿಕವಾಗಿ ತೇರ್ಗಡೆಗೊಳಿಸುವ ಸಾಧ್ಯತೆಗಳು ಹೆಚ್ಚಿರುತ್ತವೆ ಮತ್ತು ದೀರ್ಘಕಾಲದ ಸಾಧನೆಯನ್ನು ಪರಿಗಣಿಸಬಹುದಾಗಿದೆ. ಸಾಮಾನ್ಯವಾಗಿ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳು 1 ರಿಂದ 10 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ಕಲಿಯುತ್ತಿರುತ್ತಾರೆ. ಅಥವಾ ಕನಿಷ್ಠ ಮೂರು ವರ್ಷಗಳಾದರು ಒಂದು ಶಾಲೆಯಲ್ಲಿ( 8, 9 ಮತ್ತು 10 ನೇ ತರಗತಿ) ಮಕ್ಕಳ 10 ವರ್ಷದ ಸಂಚಿತ ಸಾಧನೆ ಅಥವಾ ಮೂರು ವರ್ಷದ ಸಂಚಿತ ಸಾಧನೆ ಹೆಚ್ಚು ವಸ್ತುನಿಷ್ಠವಾಗಿರುವುದಲ್ಲದೆ ಕಲಿಕೆಯ ಹಲವು ಆಯಾಮಗಳನ್ನು ಪರಿಗಣಿಸಿ ಮಕ್ಕಳನ್ನು ತೇರ್ಗಡೆಗೊಳಿಸುವ ವಿಫುಲ ಅವಕಾಶಗಳಿವೆ ಎಂದರು. ಇದನ್ನೂ ಓದಿ: ಪರಿಸ್ಥಿತಿ ಸುಧಾರಣೆಯಾದ್ರೆ ಮಾತ್ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ – ಸಿಎಂ ಬಿಎಸ್‍ವೈ 

ಪರಿಸ್ಥಿತಿ ಹೀಗಿರುವಾಗ, ಸರ್ಕಾರ 10 ನೇ ತರಗತಿಯನ್ನು ರದ್ದುಗೊಳಿಸದಿರುವುದು ಅವೈಜ್ಞಾನಿಕ ಮಾತ್ರವಲ್ಲ ಶೈಕ್ಷಣಿಕವಾಗಿ ತಪ್ಪು ನಿರ್ಧಾರ. ಜೊತೆಗೆ ಈಗಾಗಲೇ ಉಳಿದ ಎರಡು ಮಂಡಳಿಗಳಾದ ಸಿಬಿಎಸ್‍ಇ ಮತ್ತು ಐಸಿಎಸ್‍ಇ ಮಂಡಳಿಗಳು ತಮ್ಮ ಪರೀಕ್ಷೆಗಳನ್ನು ರದ್ದು ಮಾಡಿರುವಾಗ, ರಾಜ್ಯ ಮಂಡಳಿಯ ಪಠ್ಯಕ್ರಮಕ್ಕೆ ಸಂಯೋಜನೆಗೊಂಡಿರುವ ಮಕ್ಕಳ ಮೇಲೆ ಪರೀಕ್ಷೆ ಹೇರುವುದು ಅಮಾನವೀಯ, ತಾರತಮ್ಯ ಮತ್ತು ಶೈಕ್ಷಣಿಕವಾಗಿ ಅಪಕ್ವ-ಅಪ್ರಬುದ್ಧ ನಿರ್ಧಾರ. ಈ ಮಕ್ಕಳು ಕಳೆದ 14 ತಿಂಗಳುಗಳಿಂದ ಸಂಕಷ್ಟಕ್ಕೆ ಗುರಿಯಾಗಿದ್ದು, ಸರಿಯಾದ ಕಲಿಕಾ ವ್ಯವಸ್ಥೆಯಿಲ್ಲದೆ ಮಾನಸಿಕವಾಗಿ ಸೊರಗಿರುವ ಈ ಸಂದರ್ಭದಲ್ಲಿ ಸಮಾನಾಂತರ ತರಗತಿಯಲ್ಲಿ ಕಲಿಯುತ್ತಿರುವ ಅವರ ಗೆಳೆಯರು ಮಂಡಳಿ ಪರೀಕ್ಷೆಯಿಲ್ಲದೆ ತೇರ್ಗಡೆ ಹೊಂದಿ ಇವರು ಮಾತ್ರ ರಾಜ್ಯ ಪಠ್ಯಕ್ರಮದಲ್ಲಿ ಓದಿದಕ್ಕಾಗಿ ಪರೀಕ್ಷೆ ಬರೆಯುವುದು ಎಷ್ಟು ಸಮಂಜಸ? ಇದು ತಾರತಮ್ಯವಲ್ಲವೇ? ಇದು ಅತ್ಯಂತ ಅವೈಜ್ಞಾನಿಕ ನಿರ್ಧಾರ ಎಂದು ಟೀಕಿಸಿದ್ದಾರೆ.

ಸಚಿವರೂ ಕೂಡಲೇ ತಮ್ಮ ನಿರ್ಧಾರವನ್ನು ಹಿಂಪಡೆದು ಮಕ್ಕಳ ಹಾಗೂ ಪಾಲಕರ ಆತಂಕ ಮತ್ತು ಮಾನಸಿಕ ಒತ್ತಡವನ್ನು ನಿವಾರಿಸಲು 10ನೇ ತರಗತಿ ಪರೀಕ್ಷೆಗಳನ್ನು ಕೂಡ ರದ್ದು ಮಾಡುವಂತೆ ವಿನಂತಿಸುತ್ತೇನೆ. ಜೊತೆಗೆ ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾಗದೆ ಈಗ ಪೂರಕ ಪರೀಕ್ಷೆಗಳಿಗೆ ಸಿದ್ಧವಾಗಿದ್ದ ಪುನರಾವರ್ತಿ ವಿದ್ಯಾರ್ಥಿಗಳನ್ನು ಸಹ ತೇರ್ಗಡೆಗೊಳಿಸಿ ಅವರು ತಮ್ಮ ಮುಂದಿನ ಶಿಕ್ಷಣ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುವ ತೀರ್ಮಾನವನ್ನು ಪ್ರಕಟಿಸಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

10ನೇ ಅಥವಾ 12ನೇ ತರಗತಿಯ ಮಕ್ಕಳಾಗಲಿ ಅಥವಾ ಇತರೆ ಯಾವುದೇ ತರಗತಿಯ ಮಕ್ಕಳ ಕಲಿಕೆ ಕಳೆದ 15 ತಿಂಗಳಿಗಳಿಂದ ಸಮರ್ಪಕವಾಗಿ ನಡೆದಿಲ್ಲವೆಂಬ ಸತ್ಯವನ್ನು ಒಪ್ಪಿ, ಈ ಮಕ್ಕಳು ಮುಂದಿನ ಯಾವುದೇ ತರಗತಿಗಳಿಗೆ ತೇರ್ಗಡೆಯಾಗಿ ಹೋಗುವ ಸಂದರ್ಭದಲ್ಲಿ, 2021-22ನೇ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ಅವರಿಗೆ ಮೂರು ತಿಂಗಳ ವೇಗ ವರ್ಧಿತ ಕಲಿಕಾ ಸೇತು ಬಂಧ ಕಾರ್ಯಕ್ರಮದ ಮೂಲಕ ಕಲಿಕೆಯಲ್ಲಿನ ನಷ್ಟವನ್ನು ತುಂಬಿ ಕೊಡುವುದು ಹಾಗೂ ಬುನಾದಿ ಜ್ಞಾನವನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ಯೋಚಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯ ಮತ್ತು ಆದ್ಯತೆಯಾಗಬೇಕೆಂದು ನಾನು ಒತ್ತಾಯಿಸುತ್ತೇನೆ. ಸರ್ಕಾರ ಪರೀಕ್ಷೆಗಳ ಸುಳಿಯಿಂದ ಹೊರಬಂದು ಈ ನಿಟ್ಟಿನಲ್ಲಿ ಯೋಚಿಸಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

TAGGED:education ministerexamgovernmentNiranjanaradhya V.PPublic TVpucSSLCsuresh kumarಎಸ್‍ಎಸ್‍ಎಲ್‍ಸಿನಿರಂಜನಾರಾಧ್ಯ ವಿ.ಪಿಪಬ್ಲಿಕ್ ಟಿವಿಪರೀಕ್ಷೆಪಿಯುಸಿಶಿಕ್ಷಣ ಸಚಿವರುಸರ್ಕಾರಸುರೇಶ್ ಕುಮಾರ್
Share This Article
Facebook Whatsapp Whatsapp Telegram

You Might Also Like

Bengaluru Tree Fall Case
Bengaluru City

ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

Public TV
By Public TV
17 minutes ago
darshan to kerala kottiyur temple
Cinema

ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

Public TV
By Public TV
18 minutes ago
Ballary Fake Account Arrest
Bellary

ಮೊಬೈಲ್‌ನಲ್ಲಿ 13,500 ಅಶ್ಲೀಲ ಚಿತ್ರ – ಫೇಕ್ ಅಕೌಂಟ್‌ನಿಂದ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಕ ಅರೆಸ್ಟ್

Public TV
By Public TV
49 minutes ago
Ayatollah Ali Khamenei
Latest

ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

Public TV
By Public TV
1 hour ago
Amul Namma Metro BMRCL
Bengaluru City

ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

Public TV
By Public TV
1 hour ago
KRS Dam 1
Districts

KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?