ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ ಎನ್‌ಆರ್‌ಐಗಳಿಗೆ ಲಸಿಕೆ ನೀಡಲು ಡಿಸಿ ಆದೇಶ

Public TV
2 Min Read
Red Cross Society 1

ಮಂಗಳೂರು: ಮೇ 30 ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದರು.

Red Cross Society 3 medium

ವೀಡಿಯೋ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ ವಿಷಯ ಅನಿವಾಸಿಗಳಿಗೆ ತುರ್ತು ಲಸಿಕೆ ನೀಡುವ ಕುರಿತಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಾರು ಜನರು ವಿದೇಶದಲ್ಲಿ, ಅದರಲ್ಲೂ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದಾರೆ. ರಜೆ ನಿಮ್ಮಿತ ಊರಿಗೆ ತೆರಳಿರುವ ಅನೇಕರಿಗೆ ಮರಳಿ ಬರಲು ಎರಡು ಡೋಸ್ ಲಸಿಕೆ ಕಡ್ಡಾಯಗೊಳಿಸಿದರೆ ನೂರಾರು ಮಂದಿ ಲಸಿಕೆ ಪಡೆಯದೇ ಕ್ಲಪ್ತ ಸಮಯದಲ್ಲಿ ವಾಪಾಸಾಗಲೂ ಆಗದೇ ಉದ್ಯೋಗ ಕಳೆದುಕೊಳ್ಳುವ ಭೀತಿ ಇದೆ ಎಂದು ಅನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಫೀಸ್ ಕಟ್ಟುವಂತೆ ಒತ್ತಾಯ ಮಾಡುವ ಶಾಲೆಗಳ ವಿರುದ್ಧ ಕ್ರಮ: ಸಿಎಂ

Red Cross Society 2 medium

ಸಂವಾದ ಕಾರ್ಯಕ್ರಮ ಮುಕ್ತಾಯವಾದ ಕೂಡಲೇ ಈ ಕುರಿತು ಕಾರ್ಯಪ್ರವೃತ್ತರಾದ ಜಿಲ್ಲಾಧಿಕಾರಿಯವರು, ಅನಿವಾಸಿಗಳಿಗೆ ಲಸಿಕೆ ಪಡೆಯಲು ಹೆಸರು ನೊಂದಾಯಿಸಲು ಸೂಚಿಸಿ, ನೊಂದಾಯಿಸಿದ 402 ಜನರಿಗೆ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಪ್ರಥಮ ಲಸಿಕೆ ನೀಡುವ ವ್ಯವಸ್ಥೆ ಮಾಡಿದ್ದರು. ಹೊಸದಾಗಿ ನೊಂದಾಯಿಸಿದ 500 ಜನರಿಗೆ ಜುಲೈ 11ರಂದು ಲಸಿಕೆ ನೀಡಲು ವ್ಯವಸ್ಥೆ ಮಾಡಲಾಯಿತು. ಇದೀಗ, ಜೂನ್ 14ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ, ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ವಿದೇಶಕ್ಕೆ ತೆರಳಿರುವ ಅನಿವಾಸಿಗಳಿಗೆ ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಸೋಮವಾರದಿಂದ ಲಾಕ್ ಓಪನ್ – ನೈಟ್, ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಆದೇಶ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಈ ಆದೇಶವನ್ನು ಅನಿವಾಸಿ ಕನ್ನಡಿಗರು ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ‘ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ’ಯ ಯತೀಶ್ ಬೈಕಂಪಾಡಿರವರ ಕಾಳಜಿಗೆ ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್, ಒಮಾನ್ ಪ್ರವಾಸಿ ಕನ್ನಡಿಗರ ಸೇವಾ ವೇದಿಕೆಯ ಶಶಿಧರ್ ಶೆಟ್ಟಿ, ದುಬೈ ಅಡ್ವೊಕೇಟ್ ಸುನೀಲ್ ಎ ಆರ್, ಕತಾರ್ ಅನಿವಾಸಿ ಸಂಘಟಕರಾದ ಅಬ್ದುಲ್ಲಾ ಮೋನು, ಬಂಟ್ ಸಂಘ ಕತಾರ್ ಸ್ಥಾಪಕಾಧ್ಯಕ್ಷ ರವಿ ಶೆಟ್ಟಿ, ಸಲೀಂ ಅಲ್ತಾಫ್, ಬ್ಯಾರೀಸ್ ವೆಲ್ಫೇರ್ ಫಾರಂ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮದುಮೂಲೆ, ಕರ್ನಾಟಕ ಸಂಘ ದುಬೈ ಪ್ರಧಾನ ಕಾರ್ಯದರ್ಶಿ ದಯಾ ಕಿರೋಡಿಯನ್ ಹಾಗೂ ಇತರ ಸಂಘ ಸಂಸ್ಥೆಗಳು ಧನ್ಯವಾದ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *