ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಭರ್ತಿ, ಮುಳುಗಡೆ ಭೀತಿ- ಇತ್ತ ತುಂಬಿದ ತುಂಗಾ ನದಿ

Public TV
1 Min Read
SMG MNG RAIN

-ತುಂಗಾ ನದಿಗೆ ಈಶ್ವರಪ್ಪ ಬಾಗಿನ

ಮಂಗಳೂರು/ಶಿವಮೊಗ್ಗ: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.

ಕಳೆದ ಎರಡು ದಿನದಿಂದ ಕರಾವಳಿ ಹಾಗೂ ಮಲೆನಾಡು, ಪಶ್ಚಿಮ ಘಟ್ಟದಲ್ಲಿ ಹೆಚ್ಚಿನ ಮಳೆಯಾಗಿದೆ. ಇಂದೂ ಕೂಡಾ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆ ನೀರು ಸಮುದ್ರ ಸೇರಲು ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ಹರಿದು ಬರುತ್ತಿದೆ. ಹೀಗಾಗಿ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಬಳಿ ಇರುವ ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಭಾಗದವರೆಗೂ ನದಿ ನೀರು ಬರುತ್ತಿದೆ.

NETRAVATI 2

ನದಿ ನೀರು ಅಪಾಯದ ಮಟ್ಟಮೀರಿ ಹರಿಯುತ್ತಿರೋದ್ರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಭಕ್ತರಿಗೆ ಸಂಪೂರ್ಷವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಖುಗಡೆಯಾಗುವ ಸಾಧ್ಯತೆ ಇದೆ.

ಈಶ್ವರಪ್ಪ ಬಾಗಿನ: ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹರಿಯುವ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.

SMG ESHWARAPPA 1 1

ಈ ವೇಳೆ ಮಾತನಾಡಿದ ಸಚಿವರು, ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ರೈತರ ಮೊಗದಲ್ಲಿ ಹರ್ಷ ಕಾಣುತ್ತಿದ್ದೇವೆ. ಕಳೆದ ಭಾರಿ ನಿರೀಕ್ಷೆ ಮೀರಿ ನೆರೆ ಬಂದ ಹಿನ್ನೆಲೆಯಲ್ಲಿ, ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ದುರಸ್ತಿ ಸೇರಿದಂತೆ, ಇತರೇ, ಪರಿಹಾರಕ್ಕಾಗಿ ಸ್ಪಂದಿಸಿ, 1500 ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಾರಿ ಯಾವುದೇ ತೊಂದರೆ ಇಲ್ಲದಂತೆ ಮಳೆಯಾಗುತ್ತಿದ್ದು, ಯಾವುದೇ ತೊಂದರೆಯಾಗದಂತೆ ತುಂಗೆಗೆ ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *