Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳದ ಹುಂಡಿ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆಯ ಕೊರಳು ಸೇರಿತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಧರ್ಮಸ್ಥಳದ ಹುಂಡಿ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆಯ ಕೊರಳು ಸೇರಿತು

Chikkamagaluru

ಧರ್ಮಸ್ಥಳದ ಹುಂಡಿ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆಯ ಕೊರಳು ಸೇರಿತು

Public TV
Last updated: February 15, 2021 10:56 am
Public TV
Share
2 Min Read
mangalya 2
SHARE

ಚಿಕ್ಕಮಗಳೂರು: ಧರ್ಮಸ್ಥಳ ಮುಂಜುನಾಥನ ಹುಂಡಿಗೆ ಸೇರಬೇಕಿದ್ದ ಮಾಂಗಲ್ಯ ಸರ ಮತ್ತೆ ಮಹಿಳೆ ಕೊರಳು ಸೇರಿರುವ ಅಪರೂಪದ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.

ಫೆಬ್ರವರಿ 6ರಂದು ಶಿಕ್ಷಕಿ ಹೇಮಲತಾ ಪತಿ ಯೋಗೀಶ್ ಜೊತೆ ಆಟದ ಮೈದಾನವೊಂದರಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಮಾಂಗಲ್ಯ ಸರ ಕಳೆದುಕೊಂಡಿದ್ದರು. ನಂತರ ಮಾಂಗಲ್ಯ ಸರ ಯುವಕ ವಿನೋದ್ ಹಾಗೂ ರಾಘವೇಂದ್ರ ಎಂಬವರಿಗೆ ಸಿಕ್ಕಿದೆ. ಈ ವಿಚಾರವಾಗಿ ಇವರಿಬ್ಬರು ಮಾಂಗಲ್ಯ ಸರ ಸಿಕ್ಕಿದ್ದು, ಸರ ನಿಮ್ಮದೇ ಆಗಿದ್ದರೆ ಕರೆ ಮಾಡಿ ಸರ ಸ್ವೀಕರಿಸಿ ಎಂದು ಮೈದಾನದ ಸುತ್ತಾಮುತ್ತ ನಾಮಫಲಕಗಳನ್ನು ಹಾಕಿದ್ದರು.

mangalya 3

ಮಾಂಗಲ್ಯ ಸರ ಕಳೆದುಕೊಂಡ ದಂಪತಿ ಮನನೊಂದು ವಾಕ್ ಬರುವುದನ್ನೆ ನಿಲ್ಲಿಸಿದ್ದರು. ಒಮ್ಮೆ ಶನಿವಾರ ಯೋಗೀಶ್ ಮತ್ತೆ ವಾಕಿಂಗ್‍ಗೆಂದು ಬಂದಾಗ ಸರದ ಬಗೆಗೆ ಹಾಕಿದ್ದ ನಾಮಫಲಕವನ್ನು ನೋಡಿದ್ದಾರೆ. ಬಳಿಕ ಮೊಬೈಲ್ ತರದ ಕಾರಣ ಆ ನಾಮಫಲಕವನ್ನೇ ಕಿತ್ತುಕೊಂಡು ಮನೆಗೆ ಹೋಗಿ ಕರೆ ಮಾಡಿದ್ದಾರೆ. ಆಗ ವಿನೋದ್ ಧರ್ಮಸ್ಥಳ ಬಂದಿರುವುದಾಗಿ ತಿಳಿಸಿ, ನಾಳೆ ಬಂದು ನಿಮ್ಮ ಸರ ವಾಪಸ್ ಕೊಡುತ್ತೇವೆ ಎಂದು ಹೇಳಿದ್ದಾರೆ.

ಅದೇ ರೀತಿ ಧರ್ಮಸ್ಥಳದಿಂದ ಹಿಂದಿರುಗಿದ ವಿನೋದ್ ಹಾಗೂ ರಾಘವೇಂದ್ರ ಸರದ ಮಾಲೀಕ ಪೇದೆ ಯೋಗೀಶ್ ಹಾಗೂ ಶಿಕ್ಷಕಿ ಹೇಮಲತ ಅವರಿಗೆ ಸರವನ್ನು ವಾಪಸ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಾಂಗಲ್ಯ ಸರ ಸುಮಾರು 11.500 ಗ್ರಾಂ ಇದ್ದು, ಅಂದಾಜು 60 ಸಾವಿರ ರೂ. ಆಗಿದೆ. ನೂರು ರೂಪಾಯಿ ಸಿಕ್ಕಿದರೂ ವಾಪಸ್ ಕೊಡದ ಈ ಕಾಲದಲ್ಲಿ 60 ಸಾವಿರ ಮೌಲ್ಯದ ಬಂಗಾರದ ಸರವನ್ನು ಹಿಂದಿರುಗಿಸಿದ ವಿನೋದ್ ಹಾಗೂ ರಾಘವೇಂದ್ರ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ.

mangalya
ಹುಂಡಿ ಸೇರುತ್ತಿದ್ದ ಸರ : ಏಳು ದಿನವಾದರೂ ಸರದ ಮಾಲೀಕರು ಯಾರೂ ಕೇಳದ, ಫೋನ್ ಮಾಡದ ಹಿನ್ನೆಲೆ ವಿನೋದ್ ಹಾಗೂ ರಾಘವೇಂದ್ರ ಅವರು ಮೂರ್ನಾಲ್ಕು ದಿನ ನೋಡಿ ಸರವನ್ನ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಹುಂಡಿಗೆ ಹಾಕಲು ತೀರ್ಮಾನಿಸಿದ್ದರು. ಆದರೆ, ಸರ ಕಳೆದುಕೊಂಡ ಹೇಮಲತಾ ಅವರ ಅದೃಷ್ಟ ಹಾಗೂ ಚೆನ್ನಾಗಿತ್ತು. ಇದರಿಂದ ಹೇಮಲತಾ ಕೂಡ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಶಾಲೆ, ಮನೆ, ಆಟದ ಮೈದಾನ ಎಲ್ಲಾ ಕಡೆ ಹುಡುಕಿದ್ದೆ. ಎಲ್ಲೂ ಸರ ಸಿಕ್ಕಿರಲಿಲ್ಲ. ಮಾಂಗಲ್ಯ ಸರ ಎಂದು ತುಂಬಾ ನೋವಾಗಿತ್ತು. ಸರ ಸಿಕ್ಕಿದ್ದು ತುಂಬಾ ಖುಷಿಯಾಯ್ತು ಎಂದಿದ್ದಾರೆ.

ಮತ್ತೊಮ್ಮೆ ಮದುವೆ : ವಾರದಿಂದ ಹುಡುಕಾಡಿದ ಸರ ಸಿಕ್ಕ ಖುಷಿಯಲ್ಲಿ ಪೇದೆ ಯೋಗೀಶ್ ಹಾಗೂ ಶಿಕ್ಷಕಿ ಹೇಮಲತಾ ಪ್ರೇಮಿಗಳ ದಿನದಂದೇ ಮತ್ತೊಮ್ಮೆ ಮದುವೆಯಾಗಿದ್ದಾರೆ. ಸರ ಸಿಕ್ಕ ಖುಷಿಯಲ್ಲಿ ನಗರದ ಬೋಳರಾಮೇಶ್ವರ ದೇವಾಲಯದ ಮುಂಭಾಗ ಯೋಗೀಶ್ ಮತ್ತೊಮ್ಮೆ ಪತ್ನಿ ಕೊರಳಿಗೆ ಮಾಂಗಲ್ಯ ಸರವನ್ನ ಕಟ್ಟಿದ್ದಾರೆ.

mangalya 1

ಈ ವೇಳೆ, ಸರವನ್ನ ಹಿಂದಿರುಗಿಸಿದ ವಿನೋದ್, ರಾಘವೇಂದ್ರ ಹಾಗೂ ಅವರ ಪತ್ನಿ ಕೂಡ ಜೊತೆಗಿದ್ದರು. ದಾರಿಯಲ್ಲಿ ಸಿಕ್ಕ ಮಾಂಗಲ್ಯ ಸರವನ್ನ ವಾರಗಳ ಕಾಲ ಕಷ್ಟಪಟ್ಟು ವಿಭಿನ್ನ ಪ್ರಯತ್ನದ ಮೂಲಕ ನೊಂದ ಮಹಿಳೆಯ ಕೊರಳು ಸೇರಿಸಿದ ವಿನೋದ್ ಹಾಗೂ ರಾಘವೇಂದ್ರ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಅವರ ಈ ಕಾರ್ಯಕ್ಕೆ ನಗರದ ಜನ ಕೂಡ ಮೆಚ್ಚುಗೆ ವ್ಯಕ್ತಪಡಿಸಿ, ಇದು ಮಾದರಿ ಹಾಗೂ ಎಲ್ಲರೂ ಈ ನಡೆಯನ್ನ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.

TAGGED:dharmasthalahusbandMangalya chainPublic TVwomanಚಿಕ್ಕಮಗಳೂರುಧರ್ಮಸ್ಥಳಪತಿಪಬ್ಲಿಕ್ ಟಿವಿ Chikkamagaluruಮಹಿಳೆಮಾಂಗಲ್ಯ ಸರ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Boat Tragedy Madhya Pradesh Narmada River
Latest

ನರ್ಮದಾ ನದಿ ಬೋಟ್ ದುರಂತ‌ | ಊಟ ಮಾಡಲು ಆಗ್ತಿಲ್ಲ, ನಿದ್ರೆಯೂ ಬರುತ್ತಿಲ್ಲ – ಕಣ್ಣೀರಿಟ್ಟ ಚಾಲಕ

Public TV
By Public TV
2 minutes ago
Bengaluru Hulimavu Housewife Suicide
Bengaluru City

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
4 minutes ago
Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
31 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
32 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
38 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?