ಧಾರವಾಡ ಜಿಲ್ಲೆಯಲ್ಲಿ ಅನ್‍ಲಾಕ್-2ರ ಸಡಿಲಿಕೆ ಜಾರಿ ಮಾಡಿ: ಸಿಎಂ ಬಿಎಸ್‍ವೈಗೆ ಸಚಿವ ಜಗದೀಶ್ ಶೆಟ್ಟರ್ ಮನವಿ

Public TV
1 Min Read
jagadesh shettar

ಧಾರವಾಡ: ಜಿಲ್ಲೆಯನ್ನು ಅನ್‍ಲಾಕ್-2 ರ ಮಾರ್ಗಸೂಚಿಯನ್ವಯ ಸಡಿಲಿಕೆಗಳನ್ನು ನೀಡಬೇಕೆಂದು ಸಿಎಂ ಯಡಿಯೂರಪ್ಪ ಬಳಿ ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜತೆ ದೂರವಾಣಿ ಮೂಲಕ ಮಾತಾಡಿ ಧಾರವಾಡ ಜಿಲ್ಲೆಯನ್ನು ಅನ್‍ಲಾಕ್ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ನಡೆದ ಮಾತುಕತೆಯನ್ನು ಸಚಿವ ಶೆಟ್ಟರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

dwd bus stand 2

ಜಿಲ್ಲೆಗಳಲ್ಲಿ ಅನ್ ಲಾಕ್ ಪ್ರಕ್ರಿಯೆಯು ಕಳೆದ ಹತ್ತು ದಿನಗಳ ಕೋವಿಡ್ ಪಾಸಿಟಿವಿಟಿ ದರದ ಸರಾಸರಿ ಆಧಾರಿಸಿ ನಿರ್ಧರಿತವಾಗಲಿದೆ. ಧಾರವಾಡ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಜಿಲ್ಲಾಡಳಿತದಿಂದ ಸರಾಸರಿ ಮಾಹಿತಿ ಪಡೆದು ಪರಿಶೀಲಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.4.5 ಕ್ಕಿಂತ ಕಡಿಮೆ ಇರುವುದು ಖಚಿತವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರಾದ ಸುಧಾಕರ್ ಅವರಿಗೆ ವೈಯಕ್ತಿಕವಾಗಿ ಜಿಲ್ಲೆಯ ಕೋವಿಡ್ ಸ್ಥಿತಿಗತಿಯ ಮಾಹಿತಿ ರವಾನಿಸಿ ಮಾತನಾಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

ಈ ದೂರವಾಣಿ ಮಾತುಕತೆಯಲ್ಲಿ ಧಾರವಾಡ ಜಿಲ್ಲೆಯನ್ನೂ ಸಹ ಅನ್‍ಲಾಕ್ ಮಾಡುವಂತೆ ಸಚಿವ ಶೆಟ್ಟರ್ ಕೇಳಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಈ ಕುರಿತು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದೂ ಶೆಟ್ಟರ್ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸೋಮವಾರದಿಂದ ಹೊಸ ರೂಲ್ಸ್, ಹೊಸ ಲೈಫ್ – ಅನ್‍ಲಾಕ್ 2.Oಗೆ ಬೆಂಗಳೂರಿಗರ ಸಿದ್ಧತೆ

Share This Article
Leave a Comment

Leave a Reply

Your email address will not be published. Required fields are marked *