ಮೈಸೂರು: ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಹೋಗಿದ್ದಾರೆ.
ಮೈಸೂರಿನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡುವ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದರು. ನಂತರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ರೋಹಿಣಿ ಸಿಂಧೂರಿಯವರು ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಕ್ಕೆ ಹೋಗಿದ್ದಾರೆ.
ರೋಹಿಣಿ ಸಿಂಧೂರಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ದೇವಾಲಯದಲ್ಲಿ ಧ್ಯಾನ ಪ್ರಾರ್ಥನೆಯಲ್ಲಿ ಮುಳುಗಿದ್ದರು. ನಂತರ ನಂಜುಂಡನಿಗೆ ಹಾಲು, ಎಳನೀರು ಅಭಿಷೇಕ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪೂಜೆ ಬಳಿಕ ಕಪಿಲಾ ನದಿಯ ಸ್ನಾನಘಟಕ್ಕೆ ತೆರಳಿ ಅಲ್ಲಿನ ಸ್ಥಿತಿಗತಿಯನ್ನು ವೀಕ್ಷಿಸಿದರು.
ಇದೇ ವೇಳೆ ದೇವಾಲಯದಲ್ಲಿ ಆಗಬೇಕಾಗಿರುವ ವಿವಿದ ಅಭಿವೃದ್ದಿ ಕಾರ್ಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ.