ವಿಜಯಪುರ: ಅಕ್ರಮ ರಸಗೊಬ್ಬರ ತಯಾರಿಕಾ ಜಾಲವನ್ನು ರೈತರೇ ಬೇಧಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಇಂಗಳಗಿ ಗ್ರಾಮದ ಹೊರ ಭಾಗದಲ್ಲಿ ಅಕ್ರಮ ದಾಸ್ತಾನು ಪತ್ತೆಯಾಗಿದೆ.
- Advertisement 2
ಜಮ್ಮು ಭಾಗವಾನ್ ಅವರಿಗೆ ಸೇರಿದ ತೋಟದ ಮನೆಯಲ್ಲಿ ಅಕ್ರಮವಾಗಿ ಇಟ್ಟಿದ್ದ ರಸಗೊಬ್ಬರಗಳ ಮೂಟೆಗಳನ್ನು ರೈತರು ಪತ್ತೆಹಚ್ಚಿದ್ದಾರೆ. ನಂತರ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಧಿಕಾರಿಗಳೊಂದಿಗೆ ದಾಳಿ ಮಾಡಿದ್ದಾರೆ.
- Advertisement 3
- Advertisement 4
ದಾಳಿ ವೇಳೆ ತೋಟದ ಮನೆಯಲ್ಲಿ ಯಾರೂ ಕಂಡು ಬಂದಿಲ್ಲ. ನಂತರ ಅಧಿಕಾರಿಗಳು ರಸಗೊಬ್ಬರ ತಯಾರಿಕೆ, ಸಾಗಾಟ ಹಾಗೂ ಮಾರಾಟ ಮಾಡಿದ್ದರ ಬaಗ್ಗೆ ತನಿಖೆ ನಡೆಸಿದ್ದಾರೆ.ನಕಲಿ ರಸಗೊಬ್ಬರ ಸಂಗ್ರಹಿಸಿದ ಮನೆಗೆ ಪೊಲೀಸ್ ಕಾವಲು ಇರಿಸಿ, ನಕಲಿ ರಸಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೃಷಿ ಜಂಟಿ ನಿರ್ದೇಶಕ ರಾಜಶೇಖರ್ ವಿಲಿಯಮ್ಸ್ ಹಾಗೂ ಇತರ ಸಿಬ್ಬಂದಿಯಿಂದ ಪರಿಶೀಲನೆ ನಡೆಸಲಾಗಿದ್ದು, ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ.