ರಾಯ್ಪುರ: ಕಳೆದ ವಾರ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ದಾಳಿಗೆ 22 ಯೋಧರು ಹುತಾತ್ಮರಾಗಿ, ಹಲವು ಯೋಧರು ನಾಪತ್ತೆಯಾಗಿದ್ದರು. ಇದೀಗ ನಾಪತ್ತೆಯಾಗಿದ್ದ ಕೋಬ್ರಾ ಯುನಿಟ್ನ ಯೋಧರೊಬ್ಬರ ಫೋಟೋ ಒಂದನ್ನು ನಕ್ಸಲ್ ಸಂಘಟನೆ ಬಿಡುಗಡೆ ಮಾಡಿದೆ.
- Advertisement 2
ಛತ್ತೀಸ್ಗಢದ ಟರ್ರೆಮ್ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಿಡುಬಿಟ್ಟಿರುವ ಕುರಿತು ಮಾಹಿತಿ ಕಲೆಹಾಕಿದ್ದ ನಕ್ಸಲ್ ನಿಗ್ರಹ ಪಡೆ ಸಿಆರ್ಪಿಎಫ್ ನೊಂದಿಗೆ ಜಂಟಿ ಕಾರ್ಯಾಚರಣೆಗೆ ನಡೆಸಿತ್ತು. ಸಿಆರ್ಪಿಎಫ್ ನ ಕೋಬ್ರಾ ತಂಡ ಮತ್ತು ಜಿಲ್ಲಾ ಮೀಸಲು ಸಶಸ್ತ್ರಪಡೆ ಜಂಟಿ ಕಾರ್ಯಾಚರಣೆಗಿಳಿದು, ನಕ್ಸಲರ ಅಡಗುತಾಣದ ಮೇಲೆ ದಾಳಿ ಮಾಡಿತ್ತು. ಬಳಿಕ ಈ ದಾಳಿಯಲ್ಲಿ 22 ಮಂದಿ ಯೋಧರು ಮೃತಪಟ್ಟು ಹಲವು ಯೋಧರು ನಾಪತ್ತೆಯಾಗಿದ್ದರು.
- Advertisement 3
A photo released by Naxals has been circulating in media, jawan in the photo is missing CoBRA jawan, appropriate action is being taken: CRPF sources pic.twitter.com/FycWLHnHqz
— ANI (@ANI) April 7, 2021
- Advertisement 4
ಭದ್ರತಾಪಡೆಗಳು ಹಾಗೂ ನಕ್ಸಲರ ನಡುವೆ ಒಟ್ಟು 4 ಗಂಟೆಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ 22 ಜನ ಯೋಧರು ಮೃತಪಟ್ಟು ಉಳಿದ ಯೋಧರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಸಂಘಟನೆಯೊಂದು ಇದೀಗ ಕೋಬ್ರಾ ಯುನಿಟ್ನ ಯೋಧರೊಬ್ಬರ ಫೋಟೋವನ್ನು ಕಳುಹಿಸಿ ಈ ಯೋಧ ನಮ್ಮ ವಶದಲ್ಲಿದ್ದಾನೆ ಎಂದು ಪತ್ರದ ಮೂಲಕ ತಿಳಿಸಿದೆ.
ನಕ್ಸಲ್ ಸಂಘಟನೆ ಕಳುಹಿಸಿ ಕೊಟ್ಟಿರುವ ಪತ್ರದಲ್ಲಿ ಈ ಯೋಧನನ್ನು ಬಿಡುಗಡೆ ಮಾಡಬೇಕಾದರೆ ಮಾತುಕತೆ ನಡೆಸಲು ಮಧ್ಯವರ್ತಿಯನ್ನು ನೇಮಿಸುವಂತೆ ಸರ್ಕಾರಕ್ಕೆ ತಿಳಿಸಿದೆ. ನಕ್ಸಲ್ ಸಂಘಟನೆ ಈ ಪತ್ರವನ್ನು ಸ್ಥಳೀಯ ಪತ್ರಕರ್ತರ ಮೂಲಕ ಸರ್ಕಾರಕ್ಕೆ ತಲುಪಿಸಿದೆ. ಹೀಗಾಗಿ ಸರ್ಕಾರ ಅದೇ ಪತ್ರಕರ್ತರನ್ನು ಮಾತುಕತೆಗಾಗಿ ಮಧ್ಯವರ್ತಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.