Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

Bengaluru City

ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

Public TV
Last updated: February 26, 2021 7:08 pm
Public TV
Share
3 Min Read
ashwath narayan 1
SHARE

– ಸ.ಪ್ರ.ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಕಂಪ್ಯೂಟರ್
– ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್, ರೋಟರಿ ಕ್ಲಬ್ ಜೊತೆ ಒಪ್ಪಂದ

ಬೆಂಗಳೂರು: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವ `ಶಿಕ್ಷಣಕ್ಕೆ ಸಹಾಯ’ದ (Help Educate) ಕಾರ್ಯಕ್ರಮದ ಅಂಗವಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 12,500 ಡಿ-ಬಾಂಡೆಡ್ ಡೆಸ್ಕ್‍ಟಾಪ್ ಕಂಪ್ಯೂಟರ್ ಗಳನ್ನು ನೀಡುವ ಬಗ್ಗೆ ಮಹತ್ವದ ಒಪ್ಪಂದ ಏರ್ಪಟ್ಟಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರ ಪರಿಕಲ್ಪನೆಯಂತೆ ಈ ಒಪ್ಪಂದ ಆಗಿದ್ದು, ನಗರ-ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಅಂತರವನ್ನು ಅಳಿಸಿಹಾಕಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ.

ಉನ್ನತ ಶಿಕ್ಷಣ ಇಲಾಖೆ ವತಿಯಿಂದ @Cognizant ಹಾಗೂ @rotary_india ಸಹಭಾಗಿತ್ವದಲ್ಲಿ ‘Help Educate’ ಎಂಬ ಉಪಕ್ರಮವನ್ನು ಕಾರ್ಯಗತಗೊಳಿಸಲಾಗುತ್ತಿದೆ.

ಡಿಜಿಟಲ್ ಕಲಿಕೆಯ ಈ ಯುಗದಲ್ಲಿ, ಕಾಲೇಜುಗಳ ಮೂಲಸೌಕರ್ಯ ವೃದ್ಧಿಸಲು ನೆರವಾಗುವಂತೆ ಸರ್ಕಾರಿ ಪದವಿ ಕಾಲೇಜುಗಳಿಗೆ 12500 De-bonded Computer ಗಳನ್ನು ನೀಡಲಾಗುತ್ತಿದೆ.

1/2 pic.twitter.com/iN1rMUgBxB

— Dr. Ashwathnarayan C. N. (@drashwathcn) February 26, 2021

ಈ ಕುರಿತು ತಿಳುವಳಿಕೆ ಪತ್ರಕ್ಕೆ ಶುಕ್ರವಾರ ಉಪ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಸಹಿ ಹಾಕಲಾಗಿದ್ದು, ಇದರಲ್ಲಿ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ), ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ರೋಟರಿ ಕ್ಲಬ್ ವೈಟ್‍ಫೀಲ್ಡ್ ಸೆಂಟ್ರಲ್ (ಜಿಲ್ಲೆ 1390) ವತಿಯಿಂದ ಸಹಿ ಬಿದ್ದಿದೆ.

ಈ ಕಾರ್ಯಕ್ರಮದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವಂತೆ ಮತ್ತು ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಾಸವನ್ನುಂಟು ಮಾಡುವ ಪ್ರಮುಖ ಉದ್ದೇಶವನ್ನು ಹೊಂದಿದೆ. ಸಾಮಾಜಿಕ-ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ಒಪ್ಪಂದಕ್ಕೆ ಅಂಕಿತ ಬಿದ್ದ ನಂತರ ಸುದ್ದಿಗಾರರಿಗೆ ತಿಳಿಸಿದರು.

ashwath narayan 1 1

ಶಿಕ್ಷಣದಲ್ಲಿ ಮಹತ್ವದ ಬದಲಾವಣೆ:
‘ಶಿಕ್ಷಣಕ್ಕೆ ಸಹಾಯ’ ಮಾಡುವ ಈ ಕಾರ್ಯಕ್ರಮದ ಅಡಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾರ್ಪೊರೇಟ್ ಕಂಪನಿಗಳು ಮತ್ತು ದಾನಿಗಳ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಕಲಿಕೆ ಬಗ್ಗೆ ತರಬೇತಿ ನೀಡಲಾಗುವುದು. ಬೋಧಕ ಸಿಬ್ಬಂದಿ ಅಭಿವೃದ್ಧಿ ಕಾರ್ಯಕ್ರಮಗಳು, ಡಿಜಿಟಲ್ ಬೋಧನೆಯ ಮೂಲಕ ಆಧುನಿಕ ವಿಧಾನದಲ್ಲಿ ಪ್ರಾಧ್ಯಾಪಕರು ಅಪ್‍ಗ್ರೇಡ್ ಆಗಲು ಇದರಿಂದ ಸಾಧ್ಯವಿದೆ. ಜೊತೆಗೆ, ಡಿಜಿಟಲ್ ಕಲಿಕೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರ್ಕಾರಿ ಕಾಲೇಜುಗಳನ್ನು ಸಜ್ಜುಗೊಳಿಸುವ ಅಂಶವೂ ಇದರಲ್ಲಿ ಸೇರಿದೆ ಎಂದರು.

ಸರ್ಕಾರಿ ಕಾಲೇಜುಗಳಿಗೆ ಸುಮಾರು 30,000 ಕಂಪ್ಯೂಟರ್‍ಗಳು ಅಗತ್ಯ ಇದ್ದು, ಆ ಪೈಕಿ ಈಗ 12,500 ಕಂಪ್ಯೂಟರ್‍ಗಳನ್ನು ಒದಗಿಸಲಾಗಿದೆ. ಸುಮಾರು 50 ಕೋಟಿ ರೂ.ಗಳ ಯೋಜನೆ ಇದಾಗಿದ್ದು, ವಿದ್ಯಾರ್ಥಿಗಳನ್ನು ಆಧುನಿಕ ಕಲಿಕೆಯತ್ತ ಕರೆದೊಯ್ಯಲು, ಡಿಜಿಟಲ್ ತಾರತಮ್ಯವನ್ನು ನಿವಾರಿಸುವ ಈ ಉದಾತ್ತ ಉದ್ದೇಶಕ್ಕೆ ಖಾಸಗಿ ಸಂಘ ಸಂಸ್ಥೆಗಳು ಸರಕಾರದ ಜತೆ ಕೈಜೋಡಿಸುತ್ತಿರುವುದು ಸಂತೋಷ ಉಂಟು ಮಾಡಿದೆ. ಅನೇಕ ದಾನಿಗಳು ಶಿಕ್ಷಣಕ್ಕೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ashwath narayan 2

ಈ ಉದಾತ್ತ ಕಾರ್ಯಕ್ರಮದ ಅಡಿಯಲ್ಲಿ ಕಾಗ್ನಿಜೆಂಟ್ ಇಂಡಿಯಾ ಪ್ರೈ. ಲಿಮಿಟೆಡ್ ಇಲಾಖೆಗೆ 12,500 ಡಿ-ಬಾಂಡೆಡ್, ಡೆಸ್ಕ್‍ಟಾಪ್ ಕಂಪ್ಯೂಟರ್ ಗಳನ್ನು ಒದಗಿಸಲು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದೆ. ಇದರೊಂದಿಗೆ ವಿದ್ಯಾರ್ಥಿಗಳ ಬಳಕೆಗಾಗಿ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್ ಲ್ಯಾಬ್‍ಗಳನ್ನು ಸ್ಥಾಪಿಸಲಾಗುವುದು. ರೋಟರಿ ಕ್ಲಬ್ ನವರು ವಿಂಡೋಸ್ ಒಎಸ್ ಒದಗಿಸಲಿದ್ದಾರೆ. ನಂತರ ಕಂಪ್ಯೂಟರ್ ಗಳನ್ನು ನಿಗದಿತ ಕಾಲೇಜುಗಳಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ ಎಂದು ಡಿಸಿಎಂ ಮಾಹಿತಿ ಕೊಟ್ಟರು.

ಕಾಗ್ನಿಜೆಂಟ್ ಸಂಸ್ಥೆಯ ಬೆಂಗಳೂರು ಕೇಂದ್ರದ ಮುಖ್ಯಸ್ಥ ನವೀನ್ ರಾವ್ ಮಾತನಾಡಿ, ಕಾಲೇಜು ಶಿಕ್ಷಣ ಇಲಾಖೆಯ ನೇತೃತ್ವದ ಈ ನಿರ್ಣಾಯಕ ಕಾರ್ಯಕ್ರಮದಲ್ಲಿ ಭಾಗವಾಗಿರುವುದಕ್ಕೆ ಸಂತೋಷವಾಗಿದೆ. ಡಿಜಿಟಲ್ ಕಲಿಕೆಯನ್ನು ಉತ್ತೇಜಿಸುವ ಈ ಕಾರ್ಯಕ್ರಮ ಅರ್ಥಪೂರ್ಣವಾದದ್ದು ಎಂದರು.

ಡಿಜಿಟಲ್ ವೇದಿಕೆಯಲ್ಲಿರುವ ಸಮಗ್ರ ಕಲಿಕಾ ನಿರ್ವಹಣಾ ವ್ಯವಸ್ಥೆ ಮೂಲಕ ಕಲಿಯುವ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಸಹಾಯ ಕಾರ್ಯಕ್ರಮ ಪೂರಕ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಉಪಯುಕ್ತ ಎಂದು ರೋಟರಿ ಕ್ಲಬ್ ಜಿಲ್ಲಾ ಗರ್ವನರ್ ನಾಗೇಂದ್ರ ಪ್ರಸಾದ್ ಅವರು ಹೇಳಿದರು.

ashwath narayan 3

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಮಾತನಾಡಿ, ಯೋಜನೆ ಕುರಿತು ಮಾಹಿತಿ ನೀಡಿದರು. ಕಾಗ್ನಿಜೆಂಟ್ ಸಂಸ್ಥೆಯ ನಿರ್ದೇಶಕ (ಸಿಎಸ್‍ಆರ್) ದೀಪಕ್ ಪ್ರಭು, ಸಂಸ್ಥೆಯ ಸಹಾಯಕ ಉಪಾಧ್ಯಕ್ಷ ಹರಿಸಿಂಗ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

TAGGED:ComputersDCM Ashwath NarayanPublic TVstudentsಕಂಪ್ಯೂಟರ್ಡಿಸಿಎಂ ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿವಿದ್ಯಾರ್ಥಿಗಳು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
3 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
47 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?