Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ

Bengaluru City

ನನಗೆ ಸರಿಯಾದ ಊಟ, ಚಿಕಿತ್ಸೆ ನೀಡಲಿಲ್ಲ- ಯುವಕನ ಆರೋಪಕ್ಕೆ ರಾಜೀವ್ ಗಾಂಧಿ ಆಸ್ಪತ್ರೆ ಸ್ಪಷ್ಟನೆ

Public TV
Last updated: May 29, 2020 2:27 pm
Public TV
Share
2 Min Read
rajiv gandhi
SHARE

ಬೆಂಗಳೂರು: ನನಗೆ ಸರಿಯಾದ ಚಿಕಿತ್ಸೆ, ಊಟ ನೀಡಲಿಲ್ಲ ಎಂಬ ಯುವಕನೊಬ್ಬನ ಆರೋಪಕ್ಕೆ ಸಂಬಂಧಿಸಿದಂತೆ ನಗರದ ರಾಜೀವ್ ಗಾಂಧಿ ಆಸ್ಪತ್ರೆ ನಿರ್ದೇಶಕ ಡಾ. ನಾಗರಾಜ್ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

ಯುವಕ ದಿಲೀಪ್ ಮಾಡಿರುವ ಎಲ್ಲಾ ಆರೋಪಗಳು ಸುಳ್ಳಾಗಿವೆ. ಆತನಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. ಯುವಕ ಮೇ 23ರ ಮಧ್ಯಾಹ್ನ 2 ಗಂಟೆಗೆ ಖಾಸಗಿ ಆಸ್ಪತ್ರೆಯಿಂದ ನಮ್ಮ ಆಸ್ಪತ್ರೆಗೆ ತೀವ್ರ ಉಸಿರಾಟದ ಸಮಸ್ಯೆ ಮತ್ತು ಜ್ವರ ಎಂದು ಬಂದಿದ್ದಾನೆ. ಆಗ ನಾವು ಆತನ ಪರೀಕ್ಷೆ ಮಾಡಿ ಸ್ವಾಬ್ ಪಡೆದು ಕೋವಿಡ್ ವಾರ್ಡ್ ಗೆ ದಾಖಲಿಸಿಕೊಂಡಿದ್ದೆವು. ಅಲ್ಲದೆ ಅದೇ ದಿನ ಸಂಜೆ 5 ಗಂಟೆ ಸುಮಾರಿಗೆ ಆತನಿಗೆ ಊಟದ ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

corona ward

ಯುವಕ ಜಾರ್ಖಂಡ್ ಮೂಲದವನಾಗಿದ್ದು, ಆತನ ಕಡೆಯವರು ಯಾರೂ ಜೊತೆಯಲ್ಲಿ ಬಂದಿಲ್ಲ. ಆತ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಇಸಿಜಿ, ಎಕ್ಸ್ ರೇ ಎಲ್ಲ ಮಾಡಿದ್ದು ಆತನ ಹೃದಯದಲ್ಲಿ ಹೋಲ್ ಇರೋದು ಕಂಡುಬಂದಿತ್ತು. ಕೊವೀಡ್ 19 ರಿಪೋರ್ಟ್ ಬರುವವವರೆಗೂ ಯುವಕನಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಿದ್ದೇವೆ ಎಂದಿದ್ದಾರೆ.

ಮೇ 25ಕ್ಕೆ ಕೊರೊನಾ ರಿಪೊರ್ಟ್ ನೆಗೆಟಿವ್ ಎಂದು ಬಂದಿದೆ. ಕೂಡಲೇ ಆತ ಕೆಲಸ ಮಾಡುತ್ತಿದ್ದ ಕಂಪನಿಯ ಮ್ಯಾನೇಜರ್ ಅವರನ್ನು ಕರಸಿ ಆತನಿಗೆ ಇರೋ ಸಮಸ್ಯೆ ಬಗ್ಗೆ ತಿಳಿಸಿ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಿಸಿದ್ದೇವೆ. ಸದ್ಯ ಜಯದೇವ ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಿದ್ದಾರೆ.

rajiv 4

ಮೇಜರ್ ಹಾರ್ಟ್ ಸರ್ಜರಿ ಮಾಡಬೇಕಾಗಿದೆ. ನಾವು ಆತನಿಗೆ ಉತ್ತಮ ರೀತಿಯಲ್ಲೇ ಚಿಕಿತ್ಸೆ ನೀಡಿದ್ದೇವೆ. ಆದರೂ ಯುವಕ ಸುಳ್ಳು ಆರೋಪ ಮಾಡಿದ್ದಾನೆ ಎಂದು ನಾಗರಾಜ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ.

ಯುವಕನ ಆರೋಪವೇನು..?
ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯ ಕೊರೋನಾ ವಾರ್ಡಿನಲ್ಲಿ ಸರಿಯಾಗಿ ಆಹಾರ ಕೂಡ ನೀಡ್ತಿಲ್ಲ. ಕೊರೊನಾದಿಂದ ಅಲ್ಲ ಹಸಿವಿನಿಂದ ಸಾಯ್ತೀನಿ ಅನಿಸುತ್ತಿದೆ. ಇದರಿಂದ ಆತ್ಮಹತ್ಯೆ ಮಾಡ್ಕೊಳ್ಳೋದು ಉತ್ತಮ ಅಂತ ಅನಿಸ್ತಿದೆ ಎಂದು ಶಂಕಿತ ಸೋಂಕಿತ ಕಣ್ಣೀರಿಟ್ಟಿದ್ದನು. ಈ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿತ್ತು.

Rajiv Gandhi Institute of Chest Diseases Bengaluru 2

‘ನನ್ನ ಹೆಸರು ದಿಲೀಪ್ ಕುಮಾರ್. ನಿನ್ನೆ ನಾನು ಉಸಿರಾಟದ ತೊಂದರೆಯಿಂದ ರಾಜೀವ್ ಗಾಂಧಿ ಆಸ್ಪತ್ರೆಗೆ ಚೆಕಪ್ ಬಂದೆ. ಎಕ್ಸ್‍ರೇ, ರಕ್ತ ಪರೀಕ್ಷೆ, ಇಸಿಜಿ ಮಾಡಿಸಿ ಬಳಿಕ ಚಿಕಿತ್ಸೆ ನೀಡೋದಾಗಿ ಹೇಳಿದ್ರು. ಎಲ್ಲವನ್ನೂ ಮಾಡಿಸಿದೆ. ನಿನ್ನ ಜೊತೆ ಯಾರಾದ್ರೂ ಇದ್ದಾರಾ ಅಂತ ಕೇಳಿದ್ರು. ನಾನು ಬೆಂಗಳೂರಲ್ಲಿ ಒಬ್ಬನೇ ಇದ್ದೀನಿ, ನನಗೆ ಇಲ್ಲಿ ಏನೂ ಗೊತ್ತಿಲ್ಲ ಎಂದೆ. 2ಸಾವಿರ ಡೆಪಾಸಿಟ್ ಮಾಡಲು ಹೇಳಿದ್ರು. ಹಣ ಕಟ್ಟಿದೆ. ಕೊರೊನಾ ಟೆಸ್ಟ್ ಮಾಡಿಸಿ, ವಾರ್ಡ್‍ಗೆ ಶಿಫ್ಟ್ ಮಾಡಿದ್ರು. ಉಸಿರಾಟಕ್ಕೆ ಆಕ್ಸಿಜನ್ ಹಾಕಿದ್ರು. ಬಳಿಕ 12.30ಕ್ಕೆ ಊಟ ಕೊಟ್ಟರು. ಮತ್ತೆ ರಾತ್ರಿ ಊಟ ಸಿಗಲ್ಲ ಅಂದ್ರು. ರಾತ್ರಿ ಊಟ ಕೊಡ್ತಿದ್ದಾರೆ ಅಂತ ಎಲ್ಲರೂ ಹೋದ್ರು. ನಾನೂ ಹೋದೆ. ಪಾತ್ರೆ ಕೊಡಿ ಅಂದ್ರು. ನನ್ನ ಬಳಿ ಇಲ್ಲ ಎಂದೆ. ತಟ್ಟೆ ಇಲ್ಲ ಅಂದ್ರೆ ಊಟ ಕೊಡಲ್ಲ ಅಂದ್ರು. ನಾನು ಆತ್ಮಹತ್ಯೆ ಮಾಡಿಕೊಳ್ಳುವುದೇ ಉತ್ತಮ ಅನಿಸ್ತು. ದಯಮಾಡಿ ಉಸಿರಾಟದ ತೊಂದರೆ ಸರಿಯಾದ ಮೇಲೆ ನನ್ನನ್ನು ಊರಿಗೆ ಕಳುಹಿಸಿ’ ಎಂದು ಕಣ್ಣೀರು ಹಾಕಿದ್ದನು.

TAGGED:bengaluruCorona VirusCovid 19DilipPublic TVrajiv gandhi hospitalಕೊರೊನಾ ವೈರಸ್ಕೋವಿಡ್ 19ದಿಲೀಪ್ಪಬ್ಲಿಕ್ ಟಿವಿಬೆಂಗಳೂರುರಾಜೀವ್ ಗಾಂಧಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

HD Kumaraswamy
Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
By Public TV
16 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
21 minutes ago
BY Vijayendra
Bengaluru City

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

Public TV
By Public TV
32 minutes ago
Piyush Goyal
Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
By Public TV
60 minutes ago
Syed Naseer Hussain
Latest

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Public TV
By Public TV
1 hour ago
B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?