ಬೆಂಗಳೂರು: ನನಗೇನು ಗೊತ್ತಿಲ್ಲ, ನನಗೆ ಈ ಬಗ್ಗೆ ಕೇಳಬೇಡಿ ಎಂದು ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ ನಾಗರಾಜ್ ಹೇಳಿದ್ದಾರೆ.
ದರ್ಶನ್ ಮತ್ತು ಸ್ನೇಹಿತರು ದಲಿತ ವೇಟರ್ರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಆರೋಪಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನನಗೇನು ಗೊತ್ತಿಲ್ಲ. ನನಗೆ ಈ ಬಗ್ಗೆ ಕೇಳಬೇಡಿ. ಈ ಬಗ್ಗೆ ಇವತ್ತೇ ಟಿವಿಯಲ್ಲಿ ನೋಡುತ್ತಿದ್ದೇನೆ. ನಾನು ಹೋಟೆಲ್ನಲ್ಲಿ ಅಂದು ಇರಲಿಲ್ಲ. ಪ್ರಕರಣ ನಡೆದಿದೆ ಎಂದು ಹೋಟೆಲ್ನವರು ಅಥವಾ ಹೋಟೆಲ್ನಲ್ಲಿ ಹೊಡೆಸಿಕೊಂಡವರಾದರು ಹೇಳಬೇಕು. ಆದರೆ ಇಬ್ಬರೂ ಕೂಡ ಆ ಬಗ್ಗೆ ಹೇಳಿಲ್ಲ. ಇಂದ್ರಜಿತ್ ಲಂಕೇಶ್ರವರು ಮಾಡುತ್ತಿರುವ ಆರೋಪದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೇಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ:ಇಂದ್ರಜಿತ್ ಮನವಿಯಂತೆ ತನಿಖೆ ನಡೆಸುವಂತೆ ಮೈಸೂರು ಎಸ್ಪಿಗೆ ಸೂಚನೆ: ಬೊಮ್ಮಾಯಿ