Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನಸಾಯ್ತು ‘ಕನಕಪುರ ಬಂಡೆ’ಯ ದಶಕಗಳ ಕನಸು- ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿಕೆಶಿ ಪಟ್ಟಾಭಿಷೇಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನಸಾಯ್ತು ‘ಕನಕಪುರ ಬಂಡೆ’ಯ ದಶಕಗಳ ಕನಸು- ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿಕೆಶಿ ಪಟ್ಟಾಭಿಷೇಕ

Bengaluru City

ನನಸಾಯ್ತು ‘ಕನಕಪುರ ಬಂಡೆ’ಯ ದಶಕಗಳ ಕನಸು- ಕೆಪಿಸಿಸಿ ಅಧ್ಯಕ್ಷರಾಗಿ ಇಂದು ಡಿಕೆಶಿ ಪಟ್ಟಾಭಿಷೇಕ

Public TV
Last updated: July 2, 2020 7:31 am
Public TV
Share
2 Min Read
DK BANG
SHARE

ಬೆಂಗಳೂರು: ಡಿ.ಕೆ. ಶಿವಕುಮಾರ್ ಕೊನೆಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಘೋಷಣೆಯಾದ ಬಳಿಕ ಹಲವಾರು ಅಡೆತಡೆಗಳ ಬಳಿಕ ಇಂದು ಬೆಳಗ್ಗೆ 11.30ಕ್ಕೆ ಪದಗ್ರಹಣ ಸ್ವೀಕರಿಸಲಿದ್ದಾರೆ.

ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅಂದ್ರೆ ಡಿಕೆಶಿ. ಕಾಂಗ್ರೆಸ್ಸಿನ ಪ್ರಭಾವಿ ನಾಯಕರಲ್ಲಿ ಒಬ್ಬರು. ಕನಕಪುರದಿಂದ ಸತತವಾಗಿ ಗೆಲ್ಲುತ್ತಲೇ ವಿಧಾನಸೌಧಕ್ಕೆ ಎಂಟ್ರಿ ಕೊಡ್ತಿರೋ ಡಿಕೆಶಿ, ಇದೀಗ ಕಾಂಗ್ರೆಸ್ಸಿನ ಹೆಮ್ಮರವಾಗಿ ಬೆಳೆದಿದ್ದಾರೆ. ಪಕ್ಷದ ಅಧ್ಯಕ್ಷ ಗಾದಿಗೇರುವ ಡಿಕೆಶಿ ದಶಕಗಳ ಕನಸು ಈಗ ನನಸಾಗ್ತಿದೆ. ಹಲವಾರು ಅಡೆ-ತಡೆಗಳ ನಡುವೆ ಕೊನೆಗೂ ಡಿಕೆ ಶಿವಕುಮಾರ್ ಕೆಪಿಸಿಸಿ ಗದ್ದುಗೆ ಏರುತ್ತಿದ್ದಾರೆ. ಕಾಂಗ್ರೆಸ್ ಹೊಸ ಕಚೇರಿಯಲ್ಲಿ ಇಂದು ಅಧ್ಯಕ್ಷರಾಗಿ ಅಧಿಕೃತವಾಗಿ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ.

DK 3

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರದ ಪಾಲನೆಗಾಗಿ ಕೆಪಿಸಿಸಿ ಕಚೇರಿಯಲ್ಲಿ 150 ಮಂದಿ ಗಣ್ಯರಿಗೆ ಮಾತ್ರ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ವೇದಿಕೆಯ ಮೇಲೆ ಯಾರಿಗೂ ಆಸನದ ವ್ಯವಸ್ಥೆ ಇಲ್ಲ. ಭಾಷಣ ಮಾಡುವಾಗ ಮಾತ್ರ ನಾಯಕರು ವೇದಿಕೆ ಹತ್ತಲು ಅವಕಾಶ ಕಲ್ಪಿಸಲಾಗಿದೆ. ವೇದಿಕೆಯ ಮೇಲೆ 130 ಅಡಿ ಅಗಲದ ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗಿದೆ.

ನೆಚ್ಚಿನ ನಾಯಕ ಅಪೂರ್ವ ಕಾರ್ಯಕ್ರಮ ವೀಕ್ಷಣೆಗೆ ಕೊರೊನಾ ಅಡ್ಡಿಯಾಗಿದ್ದರು ಕೂಡ ಅಭಿಮಾನಿಗಳಿಗಾಗಿ ಪ್ರತಿಜಿಲ್ಲೆಯ ಪಂಚಾಯ್ತಿ, ಬ್ಲಾಕ್, ವಾರ್ಡ್ ಮಟ್ಟದಲ್ಲಿ ಸುಮಾರು 7,800 ಸ್ಥಳಗಳಲ್ಲಿ ಎಲ್‍ಇಡಿ ಅಳವಡಿಸಲಾಗಿದೆ. ಜೊತೆಗೆ ಫೇಸ್‍ಬುಕ್ ಲೈವ್ ಮತ್ತು ಜೂಮ್ ಕಾನ್ಫರೆನ್ಸ್ ಮೂಲಕ 10 ಲಕ್ಷ ಮಂದಿ ಏಕಕಾಲದಲ್ಲಿ ಕಾರ್ಯಕ್ರಮ ವೀಕ್ಷಣೆ ವ್ಯವಸ್ಥೆ ಕಲ್ಪಿಸಲಾಗಿದೆ.

DK 5

ಬೆಳಗ್ಗೆ 10-30 ಕ್ಕೆ ಆರಂಭವಾಗೋ ಕಾರ್ಯಕ್ರಮಕ್ಕೆ ಡಿಕೆ. ಶಿವಕುಮಾರ್ 29-30 ಕ್ಕೆ ಆಗಮಿಸಲಿದ್ದಾರೆ. 20-45 ಕ್ಕೆ ಸೇವಾದಳದಿಂದ ಗೌರವ ರಕ್ಷೆಯನ್ನ ಸ್ವೀಕರಿಸಿ, 11 ಕ್ಕೆ ಸಾಮೂಹಿಕ ವಂದೇ ಮಾತರಂ ಹಾಡಲಿದ್ದಾರೆ. 12-03 ನಿಮಿಷಕ್ಕೆ ಸ್ವಾಗತ ಕೋರಿ, 12-07 ಕ್ಕೆ ಕೆಸಿ ವೇಣುಗೋಪಾಲ್ ಸಮಾರಂಭವನ್ನ ಉದ್ಘಾಟಿಸಲಿದ್ದಾರೆ. 11-10 ಕ್ಕೆ ಜ್ಯೋತಿ ಬೆಳಗ್ಗೆ 11-25 ಕ್ಕೆ ಸಂವಿಧಾನ ಪೀಠಿಕೆ ಪಠಣ ನಡೆಯಲಿದೆ. 11-20 ಕ್ಕೆ ವೇಣುಗೋಪಾಲ್‍ರಿಂದ ಉದ್ಘಾಟನಾ ಭಾಷಣ ನೆಡಯಲಿದ್ದು, 11-30ಕ್ಕೆ ಡಿ ಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. 11-35ಕ್ಕೆ ದಿನೇಶ್ ಗುಂಡೂರಾವ್ ಡಿಕೆಶಿಗೆ ಅಧಿಕಾರ ಹಸ್ತಾಂತರಿಸಿ, 11-45ಕ್ಕೆ ಭಾಷಣ ಮಾಡಲಿದ್ದಾರೆ. ಇನ್ನು 11-55 ರಿಂದ 12-25 ರವರೆಗೆ ಅತಿಥಿಗಳು ಶುಭನುಡಿಗಳನ್ನಾಡಲಿದ್ದಾರೆ. 12-25 ಕ್ಕೆ ಡಿ.ಕೆ ಶಿವಕುಮಾರ್ ಭಾಷಣ ಮಾಡಲಿದ್ದು, 12.58ಕ್ಕೆ ವಂದನಾರ್ಪಣೆ ಮಾಡಿ ರಾಷ್ಟ್ರಗೀತೆಯನ್ನ ಹಾಡಲಾಗುತ್ತೆ.

DK

ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಮೂರು ಬಾರಿ ಅನುಮತಿ ನಿರಾಕರಣೆ ಮಾಡಲಾಗಿತ್ತು. ಆದರೆ ಅದು ರಾಜಕೀಯ ಆರೋಪ ಹಾಗೂ ಪ್ರತ್ಯಾರೋಪಕ್ಕೆ ಕಾರಣವಾಗಿತ್ತು. ಸಿಎಂ ಅನುಮತಿ ಕೊಟ್ಟರು ಈಗಲು ಪೊಲೀಸರು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಕಾಂಗ್ರೆಸ್ ಕಾರ್ಯಾಧ್ಯಕ್ಷರಿಗೆ ಕೆಲ ಜವಾಬ್ದಾರಿಗಳನ್ನ ನೀಡಲಾಗಿದೆ. ಕಾರ್ಯಕ್ರಮ ನಿರ್ವಹಣೆ, ಆಯೋಜನೆ, ಸಂಪರ್ಕದ ಜವಾಬ್ದಾರಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ವಹಿಸಲಾಗಿದೆ.

DK 6

ಇದೆಲ್ಲದರ ನಡುವೆ ಕೈ ಪಡೆ ಮೇಲೆ ಸಾಮಾಜಿಕ ಜವಾಬ್ದಾರಿ ಕೂಡ ಇದೆ. ಮೊನ್ನೆಯ ಪ್ರತಿಭಟನೆಯಂತೆ ಜಾತ್ರೆ ಮಾಡದೆ, ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಆದರೆ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಇದು ಸಾಧ್ಯವಾಗುತ್ತಾ ಅನ್ನೋದೆ ಸದ್ಯದ ಕುತೂಹಲ.

TAGGED:bengalurucongressCorona VirusCovid 19DK ShivakumarKPCCOathPublic TVಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಡಿಕೆ ಶಿವಕುಮಾರ್ಪದಗ್ರಹಣಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
5 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
11 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
8 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?