ನನ್ನೂರಿನ ಅಭಿವೃದ್ಧಿಗೆ ನಾನು ಸದಾ ಸಿದ್ಧ: ಪುನೀತ್ ರಾಜ್‍ಕುಮಾರ್

Public TV
1 Min Read
Puneeth Rajkumar 1

ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ.

ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರದ ಅಭಿವೃದ್ಧಿಗೆ ಸದಾ ಸಿದ್ಧ. ನಮ್ಮ ರಾಜ್ಯ-ನಮ್ಮ ದೇಶ ಚೆನ್ನಾಗಿ ಬೆಳೆಯಬೇಕು ಎಂದು ಆಶಿಸಿದರು.

puneeth rajkumar video 2

ಚಾಮರಾಜನಗರದ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಉತ್ಸುಕನಾಗಿದ್ದೇನೆ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಜೋಡಿಸುತ್ತೇನೆ. ಜಿಲ್ಲೆಯ ಸೌಂದರ್ಯವನ್ನು ಹೊರಭಾಗದ ಜನರಿಗೆ ತಲುಪಿಸಿ ಒಮ್ಮೆಯಾದರೂ ಭೇಟಿಕೊಡಬೇಕು ಎಂದನಿಸುವಂತೆ ಮಾಡಬೇಕು. ಚಿತ್ರೀಕರಣ ಇಲ್ಲದಿದ್ದರೇ ನೇರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೆ ಎಂದು ತಿಳಿಸಿ ಇದೇ ವೇಳೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

Puneeth Rajkumar 1

Share This Article
Leave a Comment

Leave a Reply

Your email address will not be published. Required fields are marked *