ನನ್ನ, ನಿಖಿಲ್ ಮಧ್ಯೆ ಏನೂ ಇಲ್ಲವೆಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ: ನಿಖಿಲ್ ಕುಮಾರಸ್ವಾಮಿ

Public TV
1 Min Read
Darshan

– ಆರ್.ಆರ್ ನಗರದಲ್ಲಿ ವ್ಯಕ್ತಿ ಪರವಾಗಿ ಪ್ರಚಾರ ಮಾಡಿದ್ದಾರೆ

ತುಮಕೂರು: ನನ್ನ ನಿಖಿಲ್ ಮಧ್ಯೆ ಏನೂ ಇಲ್ಲ ಎಂದು ದರ್ಶನ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ನಟ ನಿಖಿಲ್ ಕುಮಾರಸ್ವಾಮಿಯವರು ಹೇಳಿದ್ದಾರೆ.

ಇಂದು ಉಪಚುನಾವಣೆಯ ಪ್ರಚಾರದ ಅಂಗವಾಗಿ ನಿಖಿಲ್ ಕುಮಾರಸ್ವಾಮಿಯವರು ಶಿರಾದಲ್ಲಿ ನಡೆದ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿರಾ ಕ್ಷೇತ್ರದ ಜನರು ಜೆಡಿಎಸ್ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸ ಇಂದು ವ್ಯಕ್ತವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು.

Ammajamma 4

ಜೊತೆಗೆ ನನ್ನ ಮತ್ತು ನಿಖಿಲ್ ಮಧ್ಯೆ ಏನೂ ಇಲ್ಲ ಎಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಮಾಧ್ಯಮದವರು ಈ ಪ್ರಶ್ನೆ ಕೇಳಬೇಡಿ. ಆರ್.ಆರ್ ನಗರದಲ್ಲಿ ದರ್ಶನ್ ಅವರು ವ್ಯಕ್ತಿ ಪರವಾಗಿ ಪ್ರಚಾರ ಮಾಡಿದ್ದಾರೆ. ಅದಕ್ಕೆ ಅವರು ಸ್ವತಂತ್ರರು. ಅವರ ಅಭಿಮಾನ ಮತವಾಗಿ ಬದಲಾಗುತ್ತಾ ಅನ್ನೋದನ್ನು ಕಾದು ನೋಡಬೇಕು. ಆದರೆ ಆರ್.ಆರ್ ನಗರದಲ್ಲೂ ಜೆಡಿಎಸ್ ಪರ ಮತದಾರರು ಇದ್ದಾರೆ ಎಂದು ತಿಳಿಸಿದರು.

nikhilgowda jaguar 87717244 607162686509629 3800231147951377876 n

ಶಿರಾ ಕ್ಷೇತ್ರದಲ್ಲಿ ಮತದಾರರು ನಮ್ಮ ಪರ ಒಲಿಯಲಿದ್ದಾರೆ. ಟಿ.ಬಿ.ಜಯಚಂದ್ರ ಅವರು ಈ ಹಿಂದೆ ಮಂತ್ರಿಯಾಗಿದ್ದವರು, ಆಗ ಯಾಕೆ ಮದಲೂರು ಕೆರೆ ತುಂಬಿಸಿಲ್ಲ. ಚುನಾವಣೆಯಲ್ಲಿ ಮತ ಪಡೆಯಲು ಜನರನ್ನು ದಿಕ್ಕು ತಪ್ಪಿಸಲು ಸಾಧ್ಯವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *