ಚಾಮರಾಜನಗರ: ಬಿಎಸ್ಪಿಯಿಂದ ಉಚ್ಛಾಟಿತನಾಗಿ ಅತಂತ್ರವಾಗಿರುವ ಶಾಸಕ ಎನ್ ಮಹೇಶ್ ಮುಂದಿನ ನಡೆಯೇನು ಎಂಬುದಕ್ಕೆ ಉತ್ತರ ಸಿಕ್ಕಿದೆ.
ಇಂದು ಕೊಳ್ಳೇಗಾಲದಲ್ಲಿ ಮಾತನಾಡಿದ ಮಹೇಶ್ ಅವರು, ಕ್ಷೇತ್ರದ ಅಭಿವೃದ್ಧಿಯಾದ ದಿನ ನನ್ನ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಡುತ್ತೇನೆ ಎಂದು ಹೇಳಿದ್ದಾರೆ. ಸಂಕ್ರಾಂತಿ ಹೊತ್ತಿಗೆ ಸಾಕಷ್ಟು ಅನುದಾನ ಬರುವುದಿದೆ. ಅದು ಬಂದರೆ ಪಕ್ಕ ಗುಡ್ ನ್ಯೂಸ್ ಕೊಡುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಕ್ಷೇತ್ರದ ಬಸ್ ನಿಲ್ದಾಣ, ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಭವನ ಉದ್ಘಾಟನೆಯಾಗಬೇಕಿದೆ. ನಮ್ಮ ಜನರಿಗೆ ಗುಡ್ ನ್ಯೂಸ್ ಕೊಡಲೂ ಬಿಜೆಪಿಯೊಂದಿಗೆ ಚೆನ್ನಾಗಿದ್ದೇನೆ. ಬಿಜೆಪಿ ಸೇರುವ ಅವಕಾಶ ಓಪನ್ ಇದೆ. 2008ರಿಂದಲೂ ಯಡಿಯೂರಪ್ಪ ಆಪ್ತರು ಎಂದು ಹೇಳುವ ಮೂಲಕ ಮುಂದೆ ನಾನು ಬಿಜೆಪಿ ಸೇರುತ್ತೇನೆ ಎಂಬುವ ಸುಳಿವು ನೀಡಿದ್ದಾರೆ.