ರಾಯಚೂರು: ಆಗತಾನೆ ಜನಿಸಿದ ಹಸುಗೂಸನ್ನು ಜಮೀನೊಂದರಲ್ಲಿ ಎಸೆದು ಹೋದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡದಿದೆ. ಒಂದು ದಿನದ ಮಗುವನ್ನು ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಬಿಸಾಡಿದ್ದಾರೆ ಅದೃಷ್ಟವಶಾತ್ ಶಿಶು ಪ್ರಾಣಾಪಾಯದಿಂದ ಪಾರಾಗಿದೆ.
- Advertisement 2
ಮೇಲ್ನೋಟಕ್ಕೆ ನೋಡಿದಾಗ ಹೆಣ್ಣು ಮಗು ಎಂಬ ಕಾರಣಕ್ಕೆ ಹೀಗೆ ಬಿಸಾಡಿರಬಹುದೆಂಬ ಅನಮಾನ ವ್ಯಕ್ತವಾಗಿದೆ. ಗ್ರಾಮದ ಕುಮಾರಗೌಡ ಎಂಬವರ ಜಮೀನಿನಲ್ಲಿ ಹೆಣ್ಣು ಶಿಶುವನ್ನ ಬಿಸಾಡಿದ್ದಾರೆ. ಹಸಿವಿನಿಂದ ಅಳುತ್ತಿದ್ದ ಮಗುವನ್ನು ಬಹಿರ್ದೆಸೆಗೆ ತೆರಳಿದ ಮಲ್ಲಿಕಾರ್ಜುನ ಹಾಗೂ ಕಿರಣ್ ಎಂಬವರು ಗಮನಿಸಿದ್ದಾರೆ. ಸ್ಥಳೀಯರಿಗೆ ಮಾಹಿತಿ ನೀಡಿದ್ದು ಮಗುವನ್ನು ರಕ್ಷಿಸಿದ್ದಾರೆ.
- Advertisement 3
- Advertisement 4
ಮಾಹಿತಿ ಮೇರೆಗೆ ಬಂದ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಿಶುವಿಗೆ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಶಿಶುವಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.