ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ನವೀನ್ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ ಎಂದು ಬರೆದುಕೊಂಡಿದ್ದಾರೆ.
ಟ್ವೀಟ್ 1: ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ.
ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. 1/3#djhalli pic.twitter.com/H8FEtGNDoy
— Siddaramaiah (@siddaramaiah) September 2, 2020
ಟ್ವೀಟ್ 2: ಒಂದು ವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ. ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ.
ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ.
ಈ ವೇಳೆ ಶಾಸಕರಾದ @ArshadRizwan, ನಸೀರ್ ಅಹ್ಮದ್, ವೆಂಕಟರಮಣಪ್ಪ ಅವರು ಸೇರಿದಂತೆ ಹಲವರು ಜೊತೆಗಿದ್ದರು. pic.twitter.com/W88jBK8MKS
— Siddaramaiah (@siddaramaiah) September 2, 2020
ಟ್ವೀಟ್ 3: ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.