Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ

Karnataka

ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ

Public TV
Last updated: June 21, 2021 6:51 pm
Public TV
Share
4 Min Read
DK Shivakumar 4
SHARE

ನವದೆಹಲಿ: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್. ಎಲ್ಲರೂ ಇದೇ ಹಾದಿಯಲ್ಲಿ ಸಾಗುತ್ತಾರೆ. ಸಣ್ಣ-ಪುಟ್ಟ ವಿಚಾರಗಳನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನನ್ನ ಹೆಸರನ್ನು ಯಾರೂ ಹೇಳಬಾರದು. ಸದ್ಯ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಬೇಕು. ಕೊರೊನಾ ಸಮಯದಲ್ಲಿ ಜನರನ್ನು ಉಳಿಸೋಣ. ಆರ್ಥಿಕ ಸಂಕಟಕ್ಕೆ ಪರಿಹಾರ ಕೊಡಲು ಶ್ರಮಿಸೋಣ ಎಂದರು.

DK Shivakumar Rahul Gandhi

ಡಿಕೆಶಿ ಹೇಳಿದ್ದು ಏನು?
ನಾನು ಕೆಪಿಸಿಸಿ ಅಧ್ಯಕ್ಷನಾಗಿ ಪ್ರತಿಜ್ಞೆ ಸ್ವೀಕರಿಸಿದ ನಂತರ ಪಕ್ಷದ ದಿಲ್ಲಿ ನಾಯಕರನ್ನು ಅಧಿಕೃತವಾಗಿ ಭೇಟಿ ಮಾಡಿರಲಿಲ್ಲ. ಹೀಗಾಗಿ ಬಂದಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಆರೋಗ್ಯ ಸರಿ ಇಲ್ಲ. ಕೋರೋನಾ ಸಮಯದಲ್ಲಿ ದೂರದಿಂದಲೇ ಮಾತಕತೆ ಮಾಡಬೇಕಿದ್ದು, ಹೀಗಾಗಿ ಅವರ ಜತೆ ದೂರವಾಣಿಯಲ್ಲಿ ಮಾತನಾಡಲಾಗುವುದು. ರಾಹುಲ್ ಗಾಂಧಿ ಅವರ ಭೇಟಿಗೂ ಸಮಯ ಕೇಳಿದ್ದು, ಅವರು ಬಿಡುವಿದ್ದರೆ ಭೇಟಿ ಮಾಡುವೆ. ಇದನ್ನೂ ಓದಿ: ಜನರ ಕಷ್ಟದಲ್ಲಿ ಭಾಗಿಯಾಗಲು ಕಾಂಗ್ರೆಸ್ ಸಂಕಲ್ಪ: ಡಿ.ಕೆ ಶಿವಕುಮಾರ್

ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಅದರ ಮಾರ್ಗಸೂಚಿ ಬಗ್ಗೆ ಪಕ್ಷದ ನಾಯಕರ ಜತೆ ಮಾತನಾಡಲು ಬಂದಿದ್ದೇನೆ. ಸದ್ಯಕ್ಕೆ ಕೆಲವು ಕಾರ್ಯಾಧ್ಯಕ್ಷರು ಮಾತ್ರ ಇದ್ದು, ಉಳಿದಂತೆ ಅಧಿಕೃತ ಸಮಿತಿ ಇಲ್ಲ. ಕೆಲವು ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ಬದಲಾವಣೆ ಮಾಡಬೇಕಿದೆ. ಸಮಿತಿ ಗಾತ್ರ ಹೆಚ್ಚಿಸಬೇಕೆ, ಇಳಿಸಬೇಕೆ ಎಂದು ಎರಡು ಮೂರು ವರ್ಷಗಳಿಂದ ಚರ್ಚೆ ನಡೆದಿದೆ. ಈ ಬಗ್ಗೆ ನಮ್ಮ ಪ್ರಧಾನ ಕಾರ್ಯದರ್ಶಿಗಳ ಜತೆ ಮಾತನಾಡಲು ಬಂದಿದ್ದೇನೆ. ನಾಳೆ ಬೆಳಗ್ಗೆ ಸುರ್ಜೆವಾಲ ಅವರನ್ನು ಭೇಟಿ ಮಾಡಲಿದ್ದೇನೆ.

dk shivakumar siddaramaiah dinesh gundurao petrol medium

ಪಕ್ಷದಲ್ಲಿ ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ನಾನು ಒಂದು ವರ್ಷದಿಂದ ನೋಡಿದ್ದೇನೆ. ಕೆಲವು ಬದಲಾವಣೆ ಆಗಬೇಕಿದೆ. ಎಲ್ಲೆಲ್ಲಿ ಐದಾರು ವರ್ಷಗಳಿಂದ ಅಧ್ಯಕ್ಷರಿದ್ದಾರೋ ಅಲ್ಲಿ ಬದಲಾವಣೆ ಮಾಡಬೇಕು ಎಂದು ಹಿರಿಯ ನಾಯಕರ ಸಭೆಯಲ್ಲಿ ತೀರ್ಮಾನವಾಗಿದೆ. ಬ್ಲಾಕ್ ಅಥವಾ ಜಿಲ್ಲಾಧ್ಯಕ್ಷರು ಸತತ ಎರಡು ಬಾರಿ ಅಧ್ಯಕ್ಷರಾಗಿದ್ದರೆ ಬದಲಾವಣೆ ಮಾಡಬೇಕು ಎಂದು ತೀರ್ಮಾನಿಸಲಾಗಿದೆ. ಕೊರೊನಾ ಸಮಯದಲ್ಲಿ ಬದಲಾವಣೆ ಬೇಡ ಅಂತಾ ಸುಮ್ಮನಿದ್ದೆವು. ಕೊರೊನಾ ಸಮಯದಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ.

ಮಧ್ಯಂತರ ಚುನಾವಣೆ ವಿಚಾರ ಬಿಜೆಪಿಗೆ ಬಿಟ್ಟ ವಿಚಾರ. ಒಂದು ವಿಚಾರ ಏನೆಂದರೆ ಬಿಜೆಪಿಯಿಂದ ಆಡಳಿತ ನಡೆಸಲು ಸಾಧ್ಯವಿಲ್ಲ ಅನ್ನೋದು ರುಜುವಾತಾಗಿದೆ. ಕೊರೋನಾ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದನ್ನು ಬೆಳಕಿಗೆ ತಂದಿದ್ದೆವು. ಈಗ ಬಿಜೆಪಿ ಶಾಸಕರುಗಳೇ ನಮಗಿಂತ ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಆ ಮೂಲಕ ನಮ್ಮ ಮಾತಿಗೆ ಪುಷ್ಠಿ ನೀಡುತ್ತಿದ್ದಾರೆ. ಸದ್ಯಕ್ಕೆ ನಾವು ಜಿಲ್ಲಾ ಪಂಚಾಯಿತಿ, ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಗಮನ ಹರಿಸುತ್ತಿದ್ದೇವೆ.

Congress Siddu DKSHI

ಯಾವುದೇ ನಾಯಕರಾದರೂ ಪಾಲಿಕೆ ಹಾಗೂ ಪಂಚಾಯಿತಿ ಚುನಾವಣೆ ಗೆಲ್ಲಬೇಕು. ಈಗ ಸಿಎಂ ಸ್ಥಾನ ಖಾಲಿ ಇಲ್ಲ. ಸಿಎಂ ಯಾರಾಗಬೇಕು ಎಂದು ತೀರ್ಮಾನ ಮಾಡೋರು ದೆಹಲಿ ನಾಯಕರು. ಸಿಎಂ ಸ್ಥಾನದ ಬಗ್ಗೆ ಬಿಜೆಪಿಯವರು ಮಾತನಾಡಬೇಕು. ನಮ್ಮ ಪಕ್ಷದವರಲ್ಲ. ನಾನು ಪ್ರತಿಜ್ಞೆ ಸ್ವೀಕಾರ ಮಾಡುವಾಗ ಸ್ಪಷ್ಟವಾಗಿ ಹೇಳಿದ್ದೆ, ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಮಾತ್ರ ಅವಕಾಶ ಎಂದು. ಆ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ.

ನಾನು ಈ ಹಿಂದೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ನನಗೆ ಶೇ.95 ರಷ್ಟು ಸಹಕಾರ ಸಿಗುತ್ತಿದೆ. ಉಳಿದ ಶೇ.5 ರಷ್ಟು ಜನ ಕೊರೊನಾ ವಿಚಾರವಾಗಿ ಗಾಬರಿಯಾಗಿದ್ದಾರೆ. ಮನೆಯಿಂದ ಈಚೆ ಬರಲು ಹೆದರುತ್ತಿದ್ದಾರೆ. ಖರ್ಗೆ ಅವರು, ಸಿದ್ದರಾಮಯ್ಯ ಅವರು, ಹರಿಪ್ರಸಾದ್, ದೇಶಪಾಂಡೆ ಅವರು, ಹೆಚ್.ಕೆ ಪಾಟೀಲ್, ಕೆ.ಎಚ್ ಮುನಿಯಪ್ಪ ಅವರು ಹೇಳಿದ ಕಡೆಯೆಲ್ಲ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆ ಮೂಲಕ ಎಲ್ಲ ಹಿರಿಯ ನಾಯಕರು ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಕೊಟ್ಯಂತರ ರೂಪಾಯಿ ಸ್ವಂತ ಹಣ ಕೊಟ್ಟು ಲಸಿಕೆ ಹಾಕಿಸುತ್ತಿದ್ದಾರೆ. ಇದಕ್ಕಿಂತ ಇನ್ನೇನು ಸಹಕಾರ ಬೇಕು.

DKShivakumar 4 medium

ಮೈಸೂರು ಮೇಯರ್ ವಿಚಾರದ ಜವಾಬ್ದಾರಿಯನ್ನು ಕಾರ್ಯಾಧ್ಯಕ್ಷರಾದ ಧೃವನಾರಾಯಣ್ ಹಾಗೂ ಸ್ಫಳೀಯ ಅಧ್ಯಕ್ಷರಿಗೆ ನೀಡಿದ್ದೇನೆ. ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ತೀರ್ಮಾನಿಸಲು ಹೇಳಿದ್ದೇನೆ.

ಬಿಜೆಪಿಯಲ್ಲಿ ರಾಜೀನಾಮೆ ನೀಡುವ ಬ್ಲಾಕ್ ಮೇಲ್ ಗಳು ನಡೆಯುತ್ತಲೇ ಇವೆ. ನಾನ್ಯಾಕೆ ಅವರ ವಿಚಾರ ಮಾತನಾಡಲಿ. ಅವರು ಪಕ್ಷಕ್ಕೆ ಬರುವ ಅರ್ಜಿ ಬಂದಾಗ ಆ ಬಗ್ಗೆ ಮಾತನಾಡೋಣ. ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ರಾಜ್ಯದ ಜನ ಕೂಡ ಎಲ್ಲವನ್ನು ನೋಡುತ್ತಿದ್ದಾರೆ. ವಿರೋಧ ಪಕ್ಷವಾಗಿ ನಾವು ಈ ವಿಚಾರದಲ್ಲಿ ಸುಮ್ಮನೆ ಕೂರುವುದಿಲ್ಲ. ಈ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಉತ್ತರ ಕೊಡಬೇಕು. ತಮಿಳುನಾಡಿನಲ್ಲಿ ಮಾಜಿ ಸಚಿವರ ಅತ್ಯಾಚಾರ ಪ್ರಕರಣ ಏನಾಗಿದೆ? ಕರ್ನಾಟಕದಲ್ಲಿ ಯಾಕಾಗುತ್ತಿಲ್ಲ? ರಾಜ್ಯದ ಪೊಲೀಸ್ ವ್ಯವಸ್ಥೆ ಹಾಗೂ ಕಾನೂನಿಗೆ ಕಳಂಕ ಬರುತ್ತಿದೆ. ಆರೋಪಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ.

BELLAD 2 medium

ಬಿಜೆಪಿ ಶಾಸಕರೇ ಮಾಡಿರುವ ಭ್ರಷ್ಟಾಚಾರ ಆರೋಪಗಳ ಕುರಿತು ಚರ್ಚೆ ಮಾಡಲು ವರ್ಚುವಲ್ ಸಭೆ ಕರೆಯಿರಿ ಅಂತಾ ಅಗ್ರಹಿಸಿದ್ದೇವೆ. ಈ ವಿಚಾರವಾಗಿ ತನಿಖೆ ಮಾಡಲು ಜಂಟಿ ಸದನ ಸಮಿತಿ ರಚಿಸಲು ಒತ್ತಾಯಿಸಿದ್ದೇವೆ. ನೀರಾವರಿ ಖಾತೆ ಇಟ್ಟುಕೊಂಡಿರುವ ಮುಖ್ಯಮಂತ್ರಿಗಳು ಈ ಆರೋಪಗಳಿಗೆ ಉತ್ತರ ನೀಡದೇ, ಇವುಗಳನ್ನು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕೊರೋನಾ ಪರಿಸ್ಥಿತಿಯಿಂದಾಗಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ದೊಡ್ಡಮಟ್ಟದ ಹೋರಾಟ ಮಾಡಲು ಆಗುತ್ತಿಲ್ಲ.

ಸಿದ್ದರಾಮಯ್ಯ ಅವರ ಕಾಲದಲ್ಲಿ ಬಂದ ವಿಚಾರಗಳ ಬಗ್ಗೆ ಬಿಜೆಪಿಯವರ ಹೋರಾಟ ನೋಡಿದ್ದೇವೆ. ಕುಮಾರಸ್ವಾಮಿ ಅವರ ಸರ್ಕಾರ ಸಮಯದಲ್ಲಿ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಯಡಿಯೂರಪ್ಪನವರು ಸಿಬಿಐಗೆ ಕೊಟ್ಟರು. ಈಗ ಅವರದೇ ಸರ್ಕಾರ, ಅವರದೇ ಪಕ್ಷದ ಶಾಸಕರು ಆರೋಪ ಮಾಡಿದ್ದು, ಈಗಲೂ ಸಿಬಿಐಗೆ ನೀಡಲಿ. ಹಳೇ ಪ್ರಕರಣದಲ್ಲಿ ಸಿಬಿಐನವರು ನಮ್ಮ ನಾಯಕರಾದ ಬ್ರಿಜೇಶ್ ಕಾಳಪ್ಪ ಅವರಿಗೆ ನೋಟೀಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಪಕ್ಷದ ವಕ್ತಾರರಿಗೂ ಕದ್ದಾಲಿಕೆಗೂ ಏನು ಸಂಬಂಧ?

TAGGED:bjpcongressDK Shivakumarpoliticsಕದ್ದಾಲಿಕೆಕುಮಾರಸ್ವಾಮಿಡಿಕೆ ಶಿವಕುಮಾರ್ಭ್ರಷ್ಟಾಚಾರಸಿದ್ದರಾಮಯ್ಯಸಿಬಿಐ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
5 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
12 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
28 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
41 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?