ನಾನು ಒಳ್ಳೆಯವರಿಗೆ ತುಂಬಾ ಒಳ್ಳೆಯವನು, ಕೆಟ್ಟವರಿಗೆ ದುಷ್ಟ: ಸಂಬರಗಿ

Public TV
2 Min Read
biggboss 4

ಬಿಗ್‍ಬಾಸ್ ಸೆಕೆಂಡ್ ಇನ್ನಿಂಗ್ಸ್‍ನ ವಾರದ ಕಥೆ ಕಿಚ್ಚನ ಜೊತೆ ಸಂಚಿಕೆಯ ವೇಳೆ ದಿವ್ಯಾ ಸುರೇಶ್ ಹೇಳಿದ ಒಂದು ಹೇಳಿಕೆಯಿಂದ ಪ್ರಶಾಂತ್ ಸಂಬರಗಿ ಮತ್ತು ಚಕ್ರವರ್ತಿ ಚಂದ್ರಚೂಡ್ ಆಕ್ರೋಶಗೊಂಡಿದ್ದಾರೆ.

manju 3 medium

ಭಾನುವಾರ ನಡೆದ ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಪ್ರಶಾಂತ್ ಸಂಬರಗಿ ಹಾಗೂ ಚಕ್ರವರ್ತಿ ಚಂದ್ರಚೂಡ್‍ರವರನ್ನು ಬಹುಶಃ ನಿನ್ನನ್ನು ಸೆಕ್ಯೂರಿಟಿ ಗಾರ್ಡ್ ಆಗಿ ಕರೆಸಿರಬಹುದು. ಯಾವಾಗಲೂ ಹಿಂದೆ ಮಾತನಾಡುತ್ತಿದ್ದರು ಎಂದು ನಮ್ಮ ಮನೆಯಲ್ಲಿ ಹೇಳುತ್ತಿದ್ದರು ಎಂದು ದಿವ್ಯಾ ಸುರೇಶ್ ಸುದೀಪ್ ಎದುರಲ್ಲಿ ಹೇಳಿದ್ದರು.

biggboss 1 medium

ವಾರದ ಕೊನೆಯಲ್ಲಿ ಪ್ರಶಾಂತ್ ಅವರನ್ನು ಎಲಿಮಿನೆಟ್‍ಗೊಳಿಸಿ ನಂತರ ಮನೆಯ ಸ್ಪರ್ಧಿಗಳಿಗೆ, ಪ್ರಶಾಂತ್ ಅವರು ಸೇವ್ ಆಗಿದ್ದು, ಬಿಗ್‍ಬಾಸ್ ಮುಂದಿನ ಆದೇಶದವರೆಗೂ ಮನೆಯಲ್ಲಿ ಪ್ರಶಾಂತ್ ಕಂಡರೂ ಕಾಣದಂತೆ ವರ್ತಿಸಬೇಕು ಎಂದು ಬಿಗ್‍ಬಾಸ್ ಸೂಚಿಸಿದ್ದರು. ನಂತರ ಮನೆ ಮಂದಿಯನ್ನೆಲ್ಲಾ ಮಾತನಡಿಸಲು ಸರ್ಕಸ್ ಮಾಡಿದ ಪ್ರಶಾಂತ್ ಜೊತೆಗೆ ಯಾರು ಕೂಡ ಮಾತನಾಡಲಿಲ್ಲ.

biggboss 3 medium

ಈ ವೇಳೆ ದಿವ್ಯಾ ಸುರೇಶ್‍ರನ್ನು ಬಿಡದೇ ಪ್ರಶಾಂತ್ ಸಂಬರ್ಗಿ ಕೆದಕುವ ಪ್ರಯತ್ನ ಮಾಡಿದ್ದಾರೆ. ಡೈನಿಂಗ್ ಹಾಲ್ ಕುಳಿತು ದಿವ್ಯಾ ಸುರೇಶ್ ಟಿಫಿನ್ ಮಾಡುತ್ತಿರುತ್ತಾರೆ. ಆಗ ಪ್ರಶಾಂತ್, ಪ್ರಿಯಾಂಕ ಆಚೆ ಹೋದಾಗ ನನ್ನ ಟಿವಿ ಸಂದರ್ಶನಗಳನ್ನು ನೋಡಿದ್ಯಾ? ಫೇಕ್ ಲವ್ ಸ್ಟೋರಿ ಬಗ್ಗೆ ಹೇಳಿದ್ದೇನೆ. ಅದನ್ನು ಇಲ್ಲಿಯೂ ಒಪ್ಪಿಕೊಂಡಿದ್ದಾರೆ. ಪ್ರಿಯಾಂಕ ಫೇಕ್ ಲವ್ ಸ್ಟೋರಿ ಬಗ್ಗೆ ಕೇಳಿದ್ಯಾ? ಕೃತಕವಾದ ಮೆಕನಿಕಲ್ ಲವ್ ಸ್ಟೋರಿ ಬಗ್ಗೆ ನಾನು ಆಚೆ ಹೇಳಿದ್ದೇನೆ. ಕರ್ನಾಟಕ ಜನತೆ ಮುಂದೆ ಆಡಿರುವ ನಾಟಕ ಒಪ್ಪಿಕೊಂಡಿದ್ದಾರೆ. ಇರುವುದನ್ನು ಹಾಗೇ ನಾನು ಆಚೆ ನೇರವಾಗಿ ಹೇಳಿದರೆ ನಿಷ್ಠುರವಾಗಿ ಕೋಪ ಬರುತ್ತದೆ. ಪ್ರಿಯಾಂಕ ನಮ್ಮ ಮನೆಯ ಸೆಕ್ಯೂರಿಟಿ ಗಾರ್ಡ್‍ಗೆ ಎಷ್ಟು ಕೆಲಸ ಗೊತ್ತಾ? ನಮ್ಮ ಮನೆಯ ಸೆಕ್ಯೂರಿಟಿ ಗಾರ್ಡ್‍ಗೆ 30 ಸಾವಿರ ಸಂಬಳ ಜೊತೆಗೆ ಮನೆ ಕೂಡ ನೀಡಿದ್ದೇನೆ ಎಂದು ಅಣುಕಿಸಿದ್ದಾರೆ.

biggboss 2 medium

ನಂತರ ಶಮಂತ್ ಕಿವಿಯ ಬಳಿ ಬಂದು ನಾನು ಒಳ್ಳೆಯವರಿಗೆ ತುಂಬಾ ಒಳ್ಳೆಯವನು ಕೆಟ್ಟವರಿಗೆ ದುಷ್ಟ ಎಂದು ನನಗೆ ಶತ್ರುಗಳಿಗಿಂತ ಮಿತ್ರರು ಜಾಸ್ತಿ ಇದ್ದಾರೆ. ಆದರೆ ಶತ್ರುಗಳೇ ರಿಯಲ್ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಕ್ಕಿ ಬಿಕ್ಕಿ ಅತ್ತ ಪ್ರಶಾಂತ್ ಸಂಬರಗಿ

Share This Article
Leave a Comment

Leave a Reply

Your email address will not be published. Required fields are marked *