-ಇಂದ್ರಜಿತ್ ಲಂಕೇಶ್ರನ್ನು ಗೇಲಿ ಮಾಡುತ್ತಿದ್ದೇವೆ
ಬೆಂಗಳೂರು: ವಿಧಾನಸಭಾ ಅಧಿವೇಶನ ಆರಂಭಕ್ಕೆ ಮುನ್ನವೇ ಸಂಪುಟ ಪುನಾರಚನೆ ಆಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಇದೇ ವೇಳೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ನಾನು ಪರಿಷತ್ ಸದಸ್ಯ, ಆದ್ದರಿಂದ ನಾನು ಕೂಡ ಸಚಿವ ಸ್ಥಾನದ ಆಂಕಾಕ್ಷಿ ಎಂದು ತಿಳಿಸಿದರು.
ಇದೇ ವೇಳೆ ಡ್ರಗ್ಸ್ ಮಾಫಿಯಾ ಕೊರೊನಾದಂತೆ ಇಡೀ ಜಗತ್ತನ್ನು ಆವರಿಸಿಕೊಂಡಿದೆ. ಪಾಕಿಸ್ತಾನ ಭಾರತವನ್ನು ಹಾಳು ಮಾಡಲು ಅಮೃತಸರಕ್ಕೆ ಡ್ರಗ್ಸ್ ಸಪ್ಲೈ ಮಾಡಿ ಹೇಗೆ ಯುವಕರನ್ನು ಹಾಳುಮಾಡುತ್ತಿದೆ ಎಂಬುವುದು ಗೊತ್ತಿದೆ. ಪಂಜಾಬ್ ರಾಜ್ಯ ಡ್ರಗ್ಸ್ ನಿಂದ ಏನಾಗುತ್ತಿದೆ ಎಂಬುವುದು ಗೊತ್ತಿದೆ. ನಮ್ಮಲ್ಲಿ ಡ್ರಗ್ಸ್ ಎಲ್ಲಿಂದ ಬರುತ್ತದೆ, ಯಾರು ಇದನ್ನು ಉಪಯೋಗಿಸುತ್ತಿದ್ದಾರೆ ಎಂಬುದು ಪೊಲೀಸರಿಗೆ ಗೊತ್ತಿದೆ. ಆದರೆ ಸೆಲೆಬ್ರಿಟಿಗಳು ಇದನ್ನು ಬಳಕೆ ಮಾಡುವ ಮಟ್ಟಕ್ಕೆ ಬಂದಿದ್ದಾರೆ. ಈ ಬಗ್ಗೆ ಸೆಲೆಬ್ರಿಟಿ ಅವರೇ ರಿವೀಲ್ ಮಾಡಿದ್ದರು. ಆದರೆ ನಾವು ಅವರನ್ನು ಗೇಲಿ ಮಾಡುತ್ತಿದ್ದೇವೆ. ಯಾರೋ ಒಬ್ಬರನ್ನು ಬಂಧನ ಮಾಡುವುದರಿಂದ ಏನು ಆಗಲ್ಲ. ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸಿದರೇ ಮಾತ್ರ ಇದಕ್ಕೆ ಬ್ರೇಕ್ ಹಾಕಲು ಸಾಧ್ಯ ಎಂದರು.
ಇತ್ತ ಸಂಪುಟ ಪುನರ್ ರಚನೆ ಸಂಬಂಧ ಚಟುವಟಿಕೆಗಳು ಚುರುಕು ಪಡೆದಿದೆ. ಸಿಎಂ ಯಡಿಯೂರಪ್ಪ ಅವರು ನಿನ್ನೆಯೇ ಹಿರಿಯ ಸಚಿವರೊಂದಿಗೆ ಸಭೆ ಕೂಡ ನಡೆಸಿದ್ದರೆ. ಸಭೆಯಲ್ಲಿ ಯಾರನ್ನು ಕೈಬಿಡಬೇಕು, ಅವರನ್ನು ಹೇಗೆ ಒಪ್ಪಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.