Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು ತಪ್ಪು ಮಾಡಿಲ್ಲ, ಗ್ರಾಫಿಕ್ಸ್‌ನಲ್ಲಿ ಏನು ಬೇಕಾದರೂ ಮಾಡಬಹುದು: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾನು ತಪ್ಪು ಮಾಡಿಲ್ಲ, ಗ್ರಾಫಿಕ್ಸ್‌ನಲ್ಲಿ ಏನು ಬೇಕಾದರೂ ಮಾಡಬಹುದು: ರೇಣುಕಾಚಾರ್ಯ

Bengaluru City

ನಾನು ತಪ್ಪು ಮಾಡಿಲ್ಲ, ಗ್ರಾಫಿಕ್ಸ್‌ನಲ್ಲಿ ಏನು ಬೇಕಾದರೂ ಮಾಡಬಹುದು: ರೇಣುಕಾಚಾರ್ಯ

Public TV
Last updated: July 30, 2021 4:43 pm
Public TV
Share
3 Min Read
renukacharya 2
SHARE

ಬೆಂಗಳೂರು: ಸಚಿವಸ್ಥಾನಕ್ಕಾಗಿ ಹಲವರು ಲಾಬಿ ನಡೆಸುತ್ತಿರುವಾಗಲೇ ಸಹಜವಾಗಿ ರೇಣುಕಾಚಾರ್ಯ ಸಹ ಸಚಿವಸ್ಥಾನಕ್ಕಾಗಿ ಕಸರತ್ತು ನಡೆಸಿದ್ದಾರೆ. ಇದೇ ವೇಳೆ ಕೆಲವರು ಬ್ಲಾಕ್‍ಮೇಲ್ ಮಾಡುತ್ತಿದ್ದು, ಇದಕ್ಕೆ ಸ್ವತಃ ಶಾಸಕ ರೇಣುಕಾಚಾರ್ಯ ಉತ್ತರಿಸಿದ್ದಾರೆ.

ಈ ಕುರಿತು ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು, ಅಪರಾಧ ಮಾಡಿಲ್ಲ. ಕೆಲವು ಪುಣ್ಯಾತ್ಮರು ರೇಣುಕಾಚಾರ್ಯನ ಅದಿದೆ, ಇದಿದೆ ಎಂದು ಬ್ಲ್ಯಾಕ್ ಮಾಡಬಹುದು, ನೋಡೋಣ. ಈಗ ಗ್ರಾಫಿಕ್ಸ್ ನಲ್ಲಿ ಏನು ಬೇಕಾದರು ಮಾಡಬಹುದು. ಯಾರದೋ ಕೈ, ಯಾರದೋ ಮೈ ಮುಖ ಪ್ಯಾಂಟು ಶರ್ಟ್ ಎಲ್ಲಾ ಗ್ರಾಫಿಕ್ಸ್ ಮಾಡಬಹುದು. ನಾನು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಒಳಗಾಗಲ್ಲ, ಶಡ್ಯಂತ್ರಕ್ಕೆ ಬಗ್ಗಲ್ಲ. ಕೆಲವರು ನನ್ನನ್ನು ಬ್ಲ್ಯಾಕ್ ಮೇಲ್ ಮಾಡೋಕೆ ನೋಡುತ್ತಿದ್ದಾರೆ. ಅಪಪ್ರಚಾರ ಮಾಡುತ್ತಿದ್ದಾರೆ. ಅವರು ಏನೇನು ಮಾಡಿದ್ದಾರೆ ಆತ್ಮವಲೋಕನ ಮಾಡಿಕೊಳ್ಳಲಿ ಎಂದರು.

ಯಾರ ಬಗ್ಗೆಯೂ ಮಾತನಾಡುವ ಅವಶ್ಯಕತೆ ಇಲ್ಲ. ಕೊರೊನಾ ಕಾಲದಲ್ಲಿ ರೇಣುಕಾಚಾರ್ಯ ಕೆಲಸ ಮಾಡಿರುವ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದು ಜೀವನದಲ್ಲಿ ತಪ್ಪು ಮಾಡಿದ್ದು ನಿಜ. ನಡೆಯುವ ಮನುಷ್ಯ ಎಡವುದು ಸಹಜ, ನಾನು ತಪ್ಪು ಮಾಡಿದರೆ ಕೇಳುವವರು ನಮ್ಮ ಕುಟುಂಬದ ಸದಸ್ಯರು. ನಾನು ಯಾವುದೇ ತಪ್ಪು ಮಾಡಿಲ್ಲ, ಯಾವ ತಪ್ಪೂ ಮಾಡಿಲ್ಲ, ನನ್ನ ವಿರುದ್ದ ಷಡ್ಯಂತ್ರ ಮಾಡಿದ್ದಾರೆ. ನನ್ನ ಬಗ್ಗೆ ಯಾರು ಅಪ ಪ್ರಚಾರ ಮಾಡಿದ್ದಾರೆ ಎನ್ನುವುದರ ಬಗ್ಗೆ ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಯೋಗೇಶ್ವರ್ ಹೆಸರು ಹೇಳದೆ ತಿರುಗೇಟು ನೀಡಿದರು.

ಕೋರ್ಟ್ ನಿಂದ ಸ್ಟೇ ತಂದಿರುವ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ ರೇಣುಕಾಚಾರ್ಯ, ಕೋರ್ಟ್ ಸ್ಟೇ ತಂದವರಿಗೆ ಸಚಿವ ಸ್ಥಾನ ಇಲ್ಲ ಎಂಬ ವಿಚಾರ ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದರು.

mys cp yogeshwar medium

ಇಂತಹವರನ್ನೇ ಸಚಿವರನ್ನಾಗಿ ಮಾಡುವಂತೆ ಹೇಳಲ್ಲ ಎಂದು ಯಡಿಯೂರಪ್ಪನವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಅದು ಸಿಎಂಗೆ ಬಿಟ್ಟ ವಿಚಾರ ಎಂದಿದ್ದಾರೆ. ಸಿಎಂ ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಿ ತಿರ್ಮಾನ ಮಾಡುತ್ತಾರೆ. ನಾನು ಯಾರ ಹೆಸರನ್ನೂ ಸೂಚನೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಇದನ್ನು ಪಕ್ಷದ ನಾಯಕರು ತೀರ್ಮಾನಿಸುತ್ತಾರೆ. ಬಿಎಸ್‍ವೈ ನಾಯಕತ್ವದಲ್ಲಿ ಹಲವರು ಶಾಸಕರಾಗಿದ್ದಾರೆ. ರಾಷ್ಟ್ರೀಯ ನಾಯಕರ ಮಾತಿಗೆ ಗೌರವ ಕೊಟ್ಟು ಈ ಹಿಂದೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಈಗ ಸ್ವ ಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಅವರು ತೆಗೆದುಕೊಂಡ ತಿರ್ಮಾನದ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಯಡಿಯೂರಪ್ಪನವರ ಸಾಮಥ್ರ್ಯ, ಅವರ ನಾಯಕತ್ವ, ಹೋರಾಟ, ನೂರಾರು ಪಾದಯಾತ್ರೆಯಿಂದ ನೂರಾರು ಕೇಸ್ ಹಾಕಿಸಿಕೊಂಡು, ಹಲವು ಬಾರಿ ಜೈಲಿಗೆ ಹೋಗಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಯಾರೋ ಮಾತಾಡಿದರೆ ಅವರ ಬೆಲೆ ಕಡಿಮೆ ಆಗಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ತಿರುಗೇಟು ನೀಡಿದರು.

Yatnal 1 2

ಯಡಿಯೂರಪ್ಪನವರು ಪುರಸಭೆ ಅಧ್ಯಕ್ಷರಾಗಿ ತಲೆಗೆ ಏಟು ತಿಂದು ಕೆಳಗೆ ಬಿದ್ದಾಗ ನಾವ್ಯಾರು ಅವರ ಜೊತೆ ಇರಲಿಲ್ಲ. ಶಿಕಾರಿಪುರದ ಜನ ಮಾತ್ರ ಅವರ ಜೊತೆ ಇದ್ದದ್ದು. ಅವರ ಹೋರಾಟದ ಶ್ರಮ ರಾಷ್ಟ್ರೀಯ ನಾಯಕರ ಆಶೀರ್ವಾದ, ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಇಂತಹ ಯಡಿಯೂರಪ್ಪನವರ ಬಗ್ಗೆ ಮಾತನಾಡುವರು ಆತ್ಮವಲೋಕನ ಮಾಡಿಕೊಳ್ಳಬೇಕು. ಯಾರು ಮಾತಾಡ್ತಾರೋ ಅವರ ವರ್ಚಸ್ಸು ಕಡಿಮೆ ಆಗುತ್ತೆ. ಯಡಿಯೂರಪ್ಪ ನವರ ವಿರುದ್ಧ ಮಾತನಾಡುವವರನ್ನು ವಿಲನ್ ರೀತಿ ನೋಡುತ್ತಾರೆ. ಇವರು ಪಕ್ಷಾಂತರಿ, ಜೆಡಿಎಸ್ ಗೆ ಹೋದಾಗ ಹಿಂದುತ್ವ ಗೊತ್ತಿರಲಿಲ್ಲವೇ? ಈಗ ಹಿಂದುತ್ವ ನೆನಪಾಗಿದೆಯೇ ಎಂದು ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದರು.

BSY RSS 3

ಯಡಿಯೂರಪ್ಪನವರ ಚೇಲಾಗಳಾಗಿ ಮಠಾಧೀಶರು ಬಂದಿಲ್ಲ, ಅರಮನೆ ಮೈದಾನದಲ್ಲಿ ಯಾರೂ ಕಾರ್ಯಕ್ರಮ ಮಾಡಿಸಿಲ್ಲ. ಮನೆಗೆ ಹೋಗಿದ್ದಕ್ಕೆ ಗೌರವವಾಗಿ ಕಾಣಿಕೆಯನ್ನ ಕೊಟ್ಟಿದ್ದಾರೆ. ಅದು ಗೌರವ ಹಾಗೂ ಭಕ್ತಿಯ ಸಮರ್ಪಣೆ ಎಂದು ಸ್ವಾಮೀಜಿಗಳಿಗೆ ಬಿಎಸ್‍ವೈ ಮನೆಯಲ್ಲಿ ನೀಡಲಾಗಿದ್ದ ಪಾಕೆಟ್ ಕುರಿತು ಸ್ಪಷ್ಟಪಡಿಸಿದರು.

TAGGED:Basavaraj BommaiBS YediyurappaM.P.Renukacharyaminister postPublic TVಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪರೇಣುಕಾಚಾರ್ಯಸಚಿವ ಸ್ಥಾನ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

Manjamma Jogathi nari narayani
Bengaluru City

ಮಂಜಮ್ಮ ಜೋಗತಿಗೆ ನಾರಿ ನಾರಾಯಣಿ ಗೌರವ

Public TV
By Public TV
6 minutes ago
Cylinder Price Hike Congress Protest In Bengaluru
Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
By Public TV
11 minutes ago
Mala Vijay Makhija nari narayani award
Bengaluru City

ಆಕಾರ್ ಅಡ್ವರ್ಟೈಸಿಂಗ್‌ ಎಂಡಿ ಮಾಲಾ ಮಖೀಜಾಗೆ ನಾರಿ ನಾರಾಯಣಿ ಗೌರವ

Public TV
By Public TV
25 minutes ago
Mamata Banerjee Droupadi Murmu
Latest

ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Public TV
By Public TV
30 minutes ago
Mallikarjun Kharge Donald Trump Narendra Modi
Districts

ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡ್ತಿದ್ದಾನೆ: ಮಲ್ಲಿಕಾರ್ಜುನ ಖರ್ಗೆ

Public TV
By Public TV
37 minutes ago
Geetha Priya nari narayani
Bengaluru City

ಕೃಪಾನಿಧಿ ಗ್ರೂಫ್ ಆಫ್ ಇನ್ಸ್ಟಿಟ್ಯೂಷನ್ಸ್‌ ಸಂಸ್ಥಾಪಕಿ ಗೀತಾ ಪ್ರಿಯಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?