‘ನಾನು ನಗಲು ಕಾರಣ ಚಿರು’- ಮೇಘನಾರ ಭಾವನಾತ್ಮಕ ಮಾತು

Public TV
2 Min Read
Untitled 1 copy 1

– ನಗುವಿನ ಮೂಲಕ ಸ್ನೇಹಿತರಿಂದ ಗೌರವ ನಮನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ದೈಹಿಕವಾಗಿ ದೂರವಾಗಿ ಇಂದಿಗೆ ಒಂದು ತಿಂಗಳು ಆಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬದವರು, ಆಪ್ತ ಸ್ನೇಹಿತರು ವಿಶೇಷವಾಗಿ ಚಿರುವನ್ನು ಸ್ಮರಿಸಿಕೊಳ್ಳುವ ಮೂಲಕ ವಂದನೆ ಸಲ್ಲಿಸಿದ್ದಾರೆ.

ಚಿರಂಜೀವಿ ಸರ್ಜಾ ಅವರು ಜೂನ್ 7 ರಂದು ಹೃದಯಾಘಾತವಾಗಿ ಮೃತಪಟ್ಟಿದ್ದರು. ಸಹೋದರ ಧ್ರುವ ಸರ್ಜಾ ತಮ್ಮ ಆಸೆಯಂತೆ ಅಣ್ಣ ಚಿರಂಜೀವಿಯ ಅಂತ್ಯಕ್ರಿಯೆಯನ್ನು ಕನಕಪುರದಲ್ಲಿರುವ ನೆಲಗುಳಿಯ ಬೃಂದಾವನ ಫಾರ್ಮ್ ಹೌಸ್‍ನಲ್ಲಿ ನೆರವೇರಿಸಿದ್ದರು. ಚಿರಂಜೀವಿ ಸರ್ಜಾ ಅವರು ದೈಹಿಕವಾಗಿ ದೂರವಾಗಿ ಇಂದಿಗೆ ತಿಂಗಳು ಕಳೆಯಲಿದೆ.

https://www.instagram.com/p/CCU9lSsnXuA/?igshid=yk5kvzczrj6c

ನಗುಮೊಗದ ಯುವ ಪ್ರತಿಭೆ ಚಿರು, ಇವರು ಸದಾ ನಗುತ್ತಿದ್ದರು. ಹೀಗಾಗಿ ಅವರ ಕುಟುಂಬಸ್ಥರು ಮತ್ತು ಆಪ್ತರು ಚಿರುವಿನ ನಗುವನ್ನು ಚಿರಾಯುವಾಗಿಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಎಲ್ಲರೂ ಅವರಿಗೆ ನಗುವಿನ ಮೂಲಕ ಗೌರವ ಸಲ್ಲಿಸಿದ್ದಾರೆ. ಚಿರಂಜೀವಿ ಸರ್ಜಾ ಮೃತಪಟ್ಟು ಒಂದು ತಿಂಗಳ ಕಳೆದ ಹಿನ್ನೆಲೆಯಲ್ಲಿ ಆಪ್ತರು, ಮನೆಯವರೆಲ್ಲರೂ ಒಂದುಗೂಡಿದ್ದಾರೆ. ಈ ವೇಳೆ ಅವರೆಲ್ಲರೂ ಚಿರಂಜೀವಿ ಫೋಟೋ ಮುಂದೆ ಕುಳಿತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋದಲ್ಲಿ ಪ್ರತಿಯೊಬ್ಬರು ನಗುವ ಮೂಲಕ ಚಿರುವಿಗೆ ಗೌರವ ಸಲ್ಲಿಸಿದ್ದಾರೆ.

https://www.instagram.com/p/CCU9nh7n_KJ/?igshid=dtxe3dq150j1

ಚಿರು ಪತ್ನಿ ಮೇಘನಾ ರಾಜ್ ಚಿರುವಿನ ಫೋಟೋ ಮತ್ತು ಸ್ನೇಹಿತರು, ಆಪ್ತರು ನಗು ಮುಖದಿಂದ ತೆಗೆಸಿಕೊಂಡಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಜೊತೆಗೆ “ನನ್ನ ಪ್ರೀತಿಯ ಚಿರು…ಚಿರು ಒಂದು ಸೆಲೆಬ್ರೇಷನ್ ಆಗಿದೆ. ಈ ಆಚರಣೆ ಯಾವಾಗಲೂ ಇರುತ್ತದೆ. ಈಗಲೂ ಮತ್ತು ಮುಂದೆಯೂ ಇರುತ್ತದೆ. ಬೇರೆ ಯಾವ ರೀತಿಯನ್ನು ನೀನು ಇಷ್ಟಪಡುವುದಿಲ್ಲ ಎಂಬುದು ನನಗೆ ತಿಳಿದಿದೆ. ಆದರೆ ನಾನು ನಗಲು ಕಾರಣ ಚಿರು” ಎಂದು ಚಿರುವಿನ ನಗುವಿನ ಬಗ್ಗೆ ನೋವಿನಿಂದ ಬರೆದುಕೊಂಡಿದ್ದಾರೆ.

https://www.instagram.com/p/CCU9fvdn22q/?igshid=1k7j82646wclx

ಅಷ್ಟೇ ಅಲ್ಲದೇ “ಅವರು ನನಗೆ ಕೊಟ್ಟಿದ್ದು ಅತ್ಯಂತ ಅಮೂಲ್ಯವಾದುದ್ದು ನನ್ನ ಕುಟುಂಬ…ನಾವು ಮಾತ್ರವೇ. ನಾವು ಯಾವಾಗಲೂ ಒಟ್ಟಿಗೆ ಇರುತ್ತೇವೆ ಬೇಬಿಮಾ. ಪ್ರತಿ ದಿನವೂ ನೀವು ಇಷ್ಟಪಡುವ ರೀತಿಯಲ್ಲಿಯೇ ಇರುತ್ತೇವೆ. ಪ್ರೀತಿ, ನಗು, ಕುಚೇಷ್ಟೇಗಳು, ಪ್ರಾಮಾಣಿಕತೆ ಮತ್ತು ಮುಖ್ಯವಾಗಿ ಒಗ್ಗಟ್ಟಿನಿಂದ ಒಟ್ಟಾಗಿರುತ್ತೇವೆ. ನಾವು ನಿಮ್ಮನ್ನು ತುಂಬಾ ಪ್ರೀತಿಸುತ್ತೇವೆ ಬೇಬಿಮಾ” ಎಂದು ಮೇಘನಾ ಹೇಳಿದ್ದಾರೆ.

ಕಳೆದ ದಿನ ಕುಟುಂಬ ಸದಸ್ಯರು ಫಾರ್ಮ್ ಹೌಸ್‍ಗೆ ಭೇಟಿ ಕೊಟ್ಟು ಚಿರಂಜೀವಿ ಸರ್ಜಾ ತಿಂಗಳ ಕಾರ್ಯ ಮಾಡಿದ್ದಾರೆ. ಚಿರು ಸ್ಮಾರಕಕ್ಕೆ ಸೋದರ ಧ್ರುವ ಸರ್ಜಾ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ, ಮೇಘನಾ ರಾಜ್, ಚಿರು ಅಪ್ಪ, ಅಮ್ಮ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಿರಂಜೀವಿ ಸರ್ಜಾ ಅವರನ್ನು ನೆನೆದು ಕುಟುಂಬ ಸದಸ್ಯರು ಕಣ್ಣೀರಿಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *