ನಾನು ರಕ್ತದಲ್ಲಿ ಬರೆದುಕೊಡ್ತೇನೆ, ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ: ಪ್ರೀತಂ ಗೌಡ

Public TV
1 Min Read
HSN PREETHAM GOWDA 1

ಹಾಸನ: ಸೂರ್ಯ ಚಂದ್ರರಿರುವಷ್ಟೇ ಸತ್ಯ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಯಡಿಯೂರಪ್ಪ ಪೂರ್ಣವಧಿ ಮುಖ್ಯಮಂತ್ರಿ ಆಗಿದ್ದು ಯಾವುದೇ ಬದಲಾವಣೆ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಅಭಿಪ್ರಾಯಪಟ್ಟಿದ್ದಾರೆ.

yediyurappa corona 1 1

ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರೋ ವಿಚಾರ ಮತ್ತು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರೀತಂ ಗೌಡ, ಮಾಧ್ಯಮ ಮಿತ್ರರಿಗೆ ಯಾರು ಮಾಹಿತಿ ಕೊಡ್ತಾರೋ ಗೊತ್ತಿಲ್ಲ. ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ. ನಾಯಕತ್ವ ಬದಲಾವಣೆ ಕಪೋಲಕಲ್ಪಿತ. ಕೊರೊನಾ ಕಾಲದಲ್ಲಿ ನಾಯಕತ್ವ ಬದಲಾವಣೆ ಆದರೆ ಜನ ಆಕ್ರೋಶಗೊಂಡು ಛೀ ಥೂ ಅಂತಾರೆ ಎಂದರು.

VIJAYENDRA

20 ಜನ ಡೆಲ್ಲಿಗೆ ಹೋಗಿರುವುದು ಕಪೋಲಕಲ್ಪಿತ. 20 ಜನ ಅಲ್ಲ 40 ಜನ ಡೆಲ್ಲಿಗೆ ಹೋದ್ರು ನಾಯಕತ್ವ ಬದಲಾವಣೆ ಆಗುವುದಿಲ್ಲ. ಮುಂಬರುವ ಚುನಾವಣೆ ಕೂಡ ಅವರ ನಾಯಕತ್ವದಲ್ಲೇ ನಡೆದು ಬಹುಮತ ಬರಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್‍ನವರು ಬಿಜೆಪಿಯ ನಾಯಕತ್ವ ಬದಲಾವಣೆ ಬಗ್ಗೆ ಕನಸಲ್ಲೂ ಯೋಚನೆ ಮಾಡಬಾರದು. ಮುಂದೊಂದು ದಿನ ಬಿವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆದರು ಕೂಡ ಯಡಿಯೂರಪ್ಪ ಅವರೆ ಮುಖ್ಯಮಂತ್ರಿ ಆಗುತ್ತಾರೆ. ಆದರೆ ಈ ಅವಧಿಯಲ್ಲಿ ಅಂತು ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ನಾವೆಲ್ಲರೂ ಅವರ ಪರವಾಗಿ ಇರುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ. ಹಾಗಿದ್ದರೆ ಶಾಸಕರಾದ ನಮಗೆ ತಿಳಿಯುತ್ತಿತ್ತು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *