ಬೆಂಗಳೂರು: ನಾಳೆಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಎರಡು ದಿನ ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಿಗೆ ಪ್ರವಾಸಕ್ಕೆ ತೆರಳಲಿದ್ದಾರೆ.
ಯಡಿಯೂರಪ್ಪ ನಾಳೆ ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಹೋಗಲಿದ್ದಾರೆ. ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ನಾಳೆ ಶಿವಮೊಗ್ಗದಲ್ಲೇ ಸಿಎಂ ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ. ಈ ತಿಂಗಳಲ್ಲಿ ಎರಡು ಬಾರಿ ಬಿಎಸ್ವೈ ಶಿವಮೊಗ್ಗಕ್ಕೆ ಪ್ರಯಾಣ ಬೆಳಸಿದ್ದಾರೆ.
ಸೋಮವಾರ ಬೆಳಗ್ಗೆ ಮಾಜಿ ಸಿಎಂ ಬಂಗಾರಪ್ಪನವರ ಜನ್ಮ ಸ್ಮರಣೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ನಂತರ ಸೋಮವಾರ ಮಧ್ಯಾಹ್ನ ಮೈಸೂರಿಗೆ ಬರಲಿರುವ ಅವರು, ಮೈಸೂರಿನಲ್ಲಿ ನಂದಿ ಧ್ವಜ ಪೂಜೆ, ವಿಜಯದಶಮಿ ಮೆರವಣಿಗೆ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಸೋಮವಾರ ಸಂಜೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.