ನಾವು ನಿಮ್ಮನ್ನು ಮಿಸ್ ಮಾಡೋಕೆ ಆಗಲ್ಲ – ಎಸ್‍ಪಿಬಿಗಾಗಿ ನಟಿ ಭಾರತಿ ಫ್ರಾರ್ಥನೆ

Public TV
1 Min Read
bhrathi

ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

spb

“ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ ಮಹಾನ್ ಗಾಯಕರು, ಮಹಾನ್ ವ್ಯಕ್ತಿ ಎಲ್ಲರಿಗೂ ಆತ್ಮೀಯವಾಗಿ ಇರುವವರು. ಆದಷ್ಟು ಬೇಗ ಅವರು ನಮ್ಮ ಮನೆಗಳಿಗೆ ಬರಲಿ. ಅವರನ್ನು ನಾವು ಮಿಸ್ ಮಾಡೋಕೆ ಆಗಲ್ಲ” ಎಂದು ನೋವಿನಿಂದ ಹೇಳಿಕೊಂಡಿದ್ದಾರೆ.

Capture 5 medium

ಅಲ್ಲದೇ “ಅವರನ್ನು ನೋಡಿದಾಗಲೆಲ್ಲ ನಮ್ಮ ಯಜಮಾನ್ರು ನೆನಪಾಗುತ್ತಾರೆ. ಯಾಕೆಂದರೆ ಅವರಿಬ್ಬರದ್ದು ಎರಡು ಶರೀರ ಆದ್ರೂ ಒಂದೇ ಶಾರೀರ. ಅವರನ್ನು ಎಲ್ಲರೂ ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ” ಎಂದರು. ಬಾಲು ಅವರೇ ಧೈರ್ಯವಾಗಿರಿ, ನಿಮಗೆ ಏನು ಹಾಗಲ್ಲ. ನೀವು ಖಂಡಿತ ಆರೋಗ್ಯವಾಗಿ ವಾಪಸ್ ಬರುತ್ತೀರಿ ಎಂದು ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.

vlcsnap 2020 08 23 09h13m50s86 medium

ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *