ನಾವು ಬಿಜೆಪಿಗೆ ಬಂದಿದ್ದಕ್ಕೆ ಈಶ್ವರಪ್ಪ ಮಿನಿಸ್ಟರ್ ಆಗಿದ್ದು: ಬಿ.ಸಿ.ಪಾಟೀಲ್ ತಿರುಗೇಟು

Public TV
1 Min Read
K S Eshwarappa B C Patil

ಮೈಸೂರು: ನಾವು 17 ಜನ ಬಿಜೆಪಿಗೆ ಬಂದಿದ್ದರಿಂದ ಸರ್ಕಾರ ರಚನೆಯಾಗಿ, ಈಶ್ವರಪ್ಪ ಮಿನಿಸ್ಟರ್ ಆಗಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆ ಆಗಿದೆ ಎಂಬ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಚಾರಕ್ಕೂ ಈಶ್ವರಪ್ಪಗೆ ಟಾಂಗ್ ಕೊಟ್ಟ ಬಿ.ಸಿ.ಪಾಟೀಲ್, 17 ಜನ ಬಿಜೆಪಿಗೆ ಬಂದ ಕಾರಣದಿಂದ ಸರ್ಕಾರ ಬಂದಿದೆ. ಸರ್ಕಾರ ಬಂದಿರುವ ಕಾರಣ ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾರೆ. ಈಶ್ವರಪ್ಪ ಆ ರೀತಿ ಹೇಳಿಕೆ ಕೊಟ್ಟಿದ್ದರೆ ಇದು ಸರಿಯಲ್ಲ. ಅವರು ಆ ರೀತಿ ಮಾತನಾಡಿಲ್ಲ ಎಂದುಕೊಳ್ಳುತ್ತೇನೆ ಎಂದರು.

BC Patil medium

ಕೆಲವರು ನಾಯಕತ್ವ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಈ ಎಲ್ಲಾ ವಿಚಾರಗಳಿಗು ನಾಳೆ ತೆರೆ ಬೀಳಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಇವರು ಎಲ್ಲರಿಗೂ ತಿಳಿ ಹೇಳಲಿದ್ದಾರೆ. ಪಕ್ಷದಲ್ಲಿ ಗೊಂದಲಗಳಿದ್ದರೆ ಅದನ್ನ ಆಂತರಿಕವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬೆಂಗ್ಳೂರು ಭೇಟಿಗೆ ಮುಹೂರ್ತ ಫಿಕ್ಸ್

KS ESHWARAPPA medium

ಈಶ್ವರಪ್ಪ ಹೇಳಿದ್ದೇನು?: ಭಾರತೀಯ ಜನತಾ ಪಾರ್ಟಿಗೆ ಪೂರ್ಣ ಬಹುಮತ ಸಿಕ್ಕಿದ್ದರೆ ಮುಖ್ಯಮಂತ್ರಿ ಬದಲಾವಣೆಯ ಗೊಂದಲ ಆಗುತ್ತಿರಲಿಲ್ಲ. 17 ಜನ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ನಂತರ ಈ ಸಣ್ಣ ಸಣ್ಣ ಗೊಂದಲವಾಗಿದೆ. ಗೊಂದಲ ನಿರ್ಮಾಣ ಮಾಡಿಕೊಂಡವರು ಪಕ್ಷದ ನಾಯಕರಲ್ಲ. ಚುನಾವಣೆ ಫಲಿತಾಂಶದ ಗೊಂದಲ. ಕೇಂದ್ರ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಾರೆ ಸಮಸ್ಯೆ ಆಲಿಸಿ ಪರಿಹಾರ ನೀಡುತ್ತಾರೆ. ಯಾರಿಗೆ ಏನು ಅಸಮಧಾನವಿದೆಯೋ ಕೇಂದ್ರದ ನಾಯಕರ ಮುಂದೆ ಹೇಳಿಕೊಳ್ಳುತ್ತಾರೆ ಎದು ಸಚಿವ ಈಶ್ವರಪ್ಪ ಹೇಳಿದ್ದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಗೆ ದೆಹಲಿಯಲ್ಲಿ ಬೆಲ್ಲದ್ ರಣತಂತ್ರ- ಅರುಣ್ ಸಿಂಗ್ ಮುಂದೆ ಬೆಲ್ಲದ್ ಹೇಳಿದ್ದೇನು?

Share This Article
Leave a Comment

Leave a Reply

Your email address will not be published. Required fields are marked *