– ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ ಅಂದ್ರು ಸಿದ್ದು
ತುಮಕೂರು: ಶಿರಾ ಉಪಚುನಾವಣೆ ಗರಿಗೆದರಿದ್ದು, ಅಭ್ಯರ್ಥಿಗಳ ಪರ ಮುಖಂಡರು ಮತಪ್ರಚಾರಕ್ಕೆ ಇಳಿದಿದ್ದಾರೆ. ಶಿರಾದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಶಿರಾ ಜನರ ಉತ್ಸಾಹ ಫಲಿತಾಂಶ ಏನಾಗುತ್ತದೆ ಎಂಬುದನ್ನು ತೋರಿಸುತ್ತದೆ. ಅನುಭವಿ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ಅವರು ಅಧಿಕಾರದಲ್ಲಿದ್ದಾಗ 2500 ಕೋಟಿ ಅನುದಾನ ತಂದು ಅಭಿವೃದ್ದಿ ಗುಡ್ಡೆಗಳನ್ನೇ ನಿರ್ಮಿಸಿದ್ದಾರೆ ಎಂದರು.
ಈ ಚುನಾವಣೆಯನ್ನು ನಾವ್ಯಾರು ಬಯಸಿರಲಿಲ್ಲ. ಸತ್ಯನಾರಾಯಣ್ ಅವರ ಕೊನೆ ಚುನಾವಣೆ ಎಂದು ಅವರನ್ನು ಗೆಲ್ಲಿಸಿದ್ರು. ಇಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿ ಸರ್ಕಾರದ ಆಡಳಿತ ಸರಿಯಿಲ್ಲ ಎನ್ನುವ ಸಂದೇಶ ನೀಡಬೇಕು. ನಮ್ಮ ಅಭ್ಯರ್ಥಿ ಟಿ.ಬಿ ಜಯಚಂದ್ರ ವಿದ್ಯಾವಂತ, ಬುದ್ಧಿವಂತರಿದ್ದಾರೆ. ನಾವು ಮುಂದೆ ರಾಜ್ಯಕ್ಕೆ ಅಭಿವೃದ್ದಿ ಸರ್ಕಾರ ಕೊಡುತ್ತೇವೆ. ನುಡಿದಂತೆ ನಡೆದಿದ್ದೇವೆ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಶಿರಾ ಉಪಚುನಾವಣೆಯಲ್ಲಿ ಜನರು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ. ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಬೇಕಿದೆ. ಬಿಜೆಪಿ ಸರ್ಕಾರ ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಯಚಂದ್ರ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ- ಸಮಿಶ್ರ ಸರ್ಕಾರ- ಬಿಜೆಪಿ ಸರ್ಕಾರವನ್ನು ಹೋಲಿಕೆ ಮಾಡುತ್ತಾರೆ ಎಂದರು.
ಮತದಾರರು ಬುದ್ಧಿವಂತರಿದ್ದಾರೆ. ಜಯಚಂದ್ರರಿಗೆ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ. ಈ ಬಾರಿ ಅವರನ್ನು ಶಿರಾ ಜನ ಕೈ ಹಿಡಿಯುತ್ತಾರೆ. ಜಯಚಂದ್ರ 100ಕ್ಕೆ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಶಿರಾದಲ್ಲಿ ತ್ರಿಕೋನ ಸ್ಪರ್ಥೆಯಿದೆ ಜಯಚಂದ್ರ ಗೆಲ್ಲುತ್ತಾರೆ. ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವು ಸಾಧಿಸಲಿದೆ. ಎರಡೂ ಉಪಚುನಾವಣೆ ಮುಂದಿನ ಚುನಾವಣೆಯ ದಿಕ್ಸೂಚಿ. ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.