ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ: ರಮೇಶ್ ಜಾರಕಿಹೊಳಿ ಪರ ವಕೀಲ

Public TV
1 Min Read
RAMESH SHYAM

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಕಕ್ಷಿದಾರ ನಿಜವಾಗಿಯೂ ಸಂತ್ರಸ್ತ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್ ಹೇಳಿದ್ದಾರೆ.

ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಅತ್ಯಾಚಾರ ಕೇಸ್‍ನ ತನಿಖೆ ಸರಿಯಾಗಿ ತನಿಖೆ ಆಗ್ತಿಲ್ಲ. ಪೊಲೀಸ್ ಆಯುಕ್ತರಿಗೆ ಯುವತಿ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿ, ಶ್ಯಾಮ್ ಸುಂದರ್ ಆಕ್ಷೇಪ ವ್ಯಕ್ತಪಡಿಸಿದರು. ಯುವತಿ ಸುಳ್ಳು ಆರೋಪ ಮತ್ತು ಸುಳ್ಳು ದೂರು ಕೊಡ್ತಿದ್ದಾರೆ. ನಿಜವಾಗಿಯೂ ಸಂತ್ರಸ್ತ ನನ್ನ ಕಕ್ಷಿದಾರ ಎಂದು ತಿಳಿಸಿದ್ದಾರೆ.

ramesh jarakiholi

ಇದೊಂದು ಪೂರ್ವಯೋಜಿತ ಕೃತ್ಯ. ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ಸುಳ್ಳು ದೂರುಗಳ ವಿರುದ್ಧ ಕಾನೂನು ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಕರಣದಲ್ಲಿ ನಾನು ಆರೋಪಿಯೋ? ಸಂತ್ರಸ್ತೆಯೋ? – ಆಯುಕ್ತರಿಗೆ ಸಿಡಿ ಲೇಡಿ ಪತ್ರ

ಕಳೆದ ಬಾರಿ ವಿಚಾರಣೆಗೆ ಕರೆಯುವಾಗ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರು ಗೋಕಾಕ್ ಆಸ್ಪತ್ರೆಗೆ ಹೋಗಿದ್ದು, ವಿಚಾರಣೆಯಿಂದ ತಪ್ಪಿಸಿಕೊಂಡಿಲ್ಲ. ಆ ಬಳಿಕ ತನಿಖಾಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿಲ್ಲ. ನೋಟಿಸ್ ಕೊಟ್ಟು ಕರೆದರೆ ಅವರು ಖಂಡಿತವಾಗಿಯೂ ಬರುತ್ತಾರೆ. ಆಸ್ಪತ್ರೆಗೆ ಯಾರಾದರೂ ಸುಮ್ ಸುಮ್ನೆ ಹೋಗ್ತಾರಾ. ಅದೂ ಸರ್ಕಾರಿ ಆಸ್ಪತ್ರೆಗೆ ಹೋಗಿರೋದು ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *