Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ನಿನ್ನೆಯಷ್ಟೇ ಹೊಸ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು ಧರ್ಮೇಗೌಡ!

Public TV
Last updated: December 29, 2020 3:23 pm
Public TV
Share
2 Min Read
CKM DHARMEGOWDA
SHARE

ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದು, ನಿನ್ನೆಯಷ್ಟೇ ಅವರು ಹೊಸ ಮನೆ ನಿರ್ಮಾಣ ಮಾಡಲು ಗುದ್ದಲಿ ಪೂಜೆ ನೆರವೇರಿಸಿದ್ದರು.

ಧರ್ಮೇಗೌಡರ ಮನೆಯಲ್ಲಿ ನಿನ್ನೆ ಸಂತೋಷ, ಇಂದು ನೀರವ ಮೌನ ಆವರಿಸಿದೆ. ತಮ್ಮ ಫಾರಂಹೌಸ್ ನಲ್ಲಿ ಮತ್ತೊಂದು ಮನೆ ನಿರ್ಮಾಣ ಮಾಡುವ ಕನಸು ಕಂಡಿದ್ದ ಧರ್ಮೇಗೌಡರು, ಹೊಸ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕೂಡ ನೆರವೇರಿಸಿದ್ದರು. ಬೆಳಗ್ಗೆಯಿಂದಲೂ ಲವಲವಿಕೆಯಿಂದಲೇ ಇದ್ದ ಅವರು ಪೂಜೆ ಮುಗಿಸಿ, ಚಿಕ್ಕಮಗಳೂರು ಕಾರ್ಯಕ್ರಮ ಮುಗಿಸಿ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂಜೆ ನೆರವೇರಿಸಿದ್ದ ಗುದ್ದಲಿ, ಪಿಕಾಸಿ ಇನ್ನೂ ಅಲ್ಲೇ ಬಿದ್ದಿವೆ.

CKM 11 1

ಧರ್ಮೇಗೌಡರ ತೋಟದ ರೈಟರ್ ಮಾತನಾಡಿ, ಕಳೆದ ಮೂರು ದಿನಗಳಿಂದ ಧರ್ಮೇಗೌಡ ಅವರು ತೊಟದ ಮನೆಯಲ್ಲಿಯೇ ಇದ್ದರು. ಮಧ್ಯಾಹ್ನದವರೆಗೂ ತೋಟದಲ್ಲೇ ಇದ್ದರು. ಬೆಳಗ್ಗೆ ವಾಕ್ ಮಾಡಿದ್ರು, ತೋಟದ ಕೆಲಸ ಹೇಳಿದ್ರು. ಮಧ್ಯಾಹ್ನದ ಬಳಿಕ ಎಲ್ಲಿಗೆ ಹೋದರು ಅನ್ನೋ ಬಗ್ಗೆ ಮಾಹಿತಿ ಇಲ್ಲ. ಕಾಫಿತೋಟ, ತೆಂಗು, ಅಡಿಕೆ ತೋಟ ಅಂದ್ರೆ ಅವರಿಗೆ ಬಹಳ ಪ್ರೀತಿ. ಪ್ರತಿಯೊಂದನ್ನೂ ಚೆನ್ನಾಗಿ ಗಮನಿಸುತ್ತಿದ್ದರು. ನಮ್ಮನ್ನ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಅವರನ್ನು ಕಳೆದುಕೊಂಡು ತುಂಬಾ ನೋವಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.

CKM 11 2

ನಡೆದಿದ್ದೇನು..?
ಎಸ್.ಎಲ್ ಧರ್ಮೇಗೌಡ ಅವರು ನಿನ್ನೆ ಸಂಜೆ 6.30ರ ಸುಮಾರಿಗೆ ಗುಣಸಾಗರಕ್ಕೆ ಆಗಮಿಸಿದ್ದರು. ಸಖರಾಯಪಟ್ಟಣದ ಮನೆಯಿಂದ ಡ್ರೈವರ್ ಜೊತೆ ಕಾರಿನಲ್ಲಿ ಬಂದಿದ್ದ ಅವರು, ರೈಲ್ವೆ ಟ್ರ್ಯಾಕ್ ಬಳಿ ಕಾರನ್ನ ನಿಲ್ಲಿಸಲು ಡ್ರೈವರಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೆ ಹಳಿಯತ್ತ ಬರುವಾಗ ಹಳ್ಳಿಗರನ್ನ ಮಾತನಾಡಿಸಿ ಬಂದಿದ್ದರು. ಅಲ್ಲದೆ ನನಗೆ ಒಬ್ಬರ ಜೊತೆ ಖಾಸಗಿಯಾಗಿ ಮಾತನಾಡಬೇಕು, ನೀನು ಹೋಗು ಅಂತ ಚಾಲಕನನ್ನು ಕಳುಹಿಸಿದ್ದಾರೆ. ಆ ಬಳಿಕ ಕಡೂರಿನ ವ್ಯಕ್ತಿಯೊಬ್ಬರಿಗೆ ಫೋನ್ ಮಾಡಿ ಜನಶತಾಬ್ದಿ ರೈಲು ಬರುವ ಸಮಯವನ್ನು ವಿಚಾರಿಸಿದ್ದಾರೆ. ನಂತರ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದರು.

SL DHARMEGOWDA

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಬಂದ ರೈಲಿಗೆ ತಲೆಕೊಟ್ಟು ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯಿಂದ ಧರ್ಮೇಗೌಡ ಅವರ ಮೃತದೇಹ ಛಿದ್ರಗೊಂಡಿದ್ದು, ಸುಮಾರು 100 ಮೀಟರ್ ದೂರದಲ್ಲಿ ಕೈ ಪತ್ತೆಯಾಗಿದೆ. ಪರಿಷತ್‍ನಲ್ಲಿ ನಡೆದ ಗಲಾಟೆಯಿಂದ ಮನಸ್ಸಿಗೆ ನೋವಾಗಿದೆ. ಮನೆಯಲ್ಲಿನ ಆಸ್ತಿ ವಿಚಾರ, ಹಣಕಾಸು ಸಂಬಂಧ ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಅಲ್ಲದೆ ಪತ್ನಿ ಮಮತಾ, ಮಗ, ಮಗಳಲ್ಲಿ ಕ್ಷಮೆ ಕೂಡ ಕೇಳಿದ್ದು, ಮನೆಯನ್ನು ಪೂರ್ಣಗೊಳಿಸುವಂತೆ ಸೂಚನೆ ಕೂಡ ನೀಡಿದ್ದಾರೆ.

TAGGED:Chikkamagalurunew housePublic TVsl dharmegowdasuicideಆತ್ಮಹತ್ಯೆಎಸ್.ಎಲ್.ಧರ್ಮೇಗೌಡಚಿಕ್ಕಮಗಳೂರುಪಬ್ಲಿಕ್ ಟಿವಿಹೊಸ ಮನೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
11 minutes ago
DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರದುಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
15 minutes ago
Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
20 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
21 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
38 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
40 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?