ಮಂಡ್ಯ: ಕಳೆದ ದಿನವಷ್ಟೆ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಹುಚ್ಚನಂತೆ ಅಲೆದಾಡುತ್ತಿದ್ದ ವೆಂಕಟ್ನನ್ನು ಸ್ಥಳೀಯರು ಗುರುತಿಸಿದ್ದರು. ಇದೀಗ ಜ್ಯೂಸ್ ಕುಡಿದು ಹಣ ನೀಡದೆ ಹಲ್ಲೆಗೆ ಮುಂದಾಗಿದ್ದ ವೆಂಕಟ್ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ.
ಶ್ರೀರಂಗಪಟ್ಟಣದ ದರಸಗುಪ್ಪೆ ಬಳಿ ಈ ಘಟನೆ ನಡೆದಿದೆ. ಹುಚ್ಚ ವೆಂಕಟ್ ಕಬ್ಬಿನ ಜ್ಯೂಸ್ ಕುಡಿದು ಹಣ ನೀಡದೆ ರಂಪಾಟ ಮಾಡಿದ್ದ. ಅಷ್ಟೇ ಅಲ್ಲದೇ ಜ್ಯೂಸ್ ಅಂಗಡಿಯವನ ಮೇಲೆ ಕೈ ಮಾಡಿದ್ದಾನೆ. ಈ ವೇಳೆ ಹಲ್ಲೆಗೆ ಮುಂದಾಗಿದ್ದ ವೆಂಕಟ್ಗೆ ಸಾರ್ವಜನಿಕರು ಏಟು ಕೊಟ್ಟಿದ್ದಾರೆ. ವೆಂಕಟ್ ಕಳೆದ ಎರಡ್ಮೂರು ದಿನಗಳಿಂದ ಶ್ರೀರಂಗಪಟ್ಟಣದಲ್ಲೇ ಅಲೆದಾಡುತ್ತಿದ್ದಾನೆ.
- Advertisement 2
- Advertisement 3
ಸೋಮವಾರ ಕೂಡ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಹುಚ್ಚನಂತೆ ಅಲೆದಾಡುತ್ತಿದ್ದ ವೆಂಕಟ್ ನನ್ನು ಸ್ಥಳೀಯರು ಗುರುತಿಸಿದ್ದರು. ನಂತರ ವೆಂಕಟ್ ಬಳಿ ತೆರಳಿ ಬುದ್ಧಿವಾದ ಹೇಳಿದ್ದರು. ಇದರಿಂದ ಕೋಪಗೊಂಡ ಹುಚ್ಚ ವೆಂಕಟ್ ಸ್ಥಳೀಯರಿಗೆ ಬೈದು ಕಿರುಚಾಡಿದ್ದರಿಂದ ಸಾರ್ವಜನಿಕರು ಹೆದರಿಕೊಂಡು ಆತನಿಂದ ದೂರ ಹೋಗಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.