ಮೈಸೂರು: ಸಾರ್ವಜನಿಕರಿಗೆ ನಿಷೇಧ ಹೇರಿದ್ದ ಬಂಡೀಪುರದಲ್ಲಿ ನಟ ಧನ್ವೀರ್ ರಾತ್ರಿ ಸಫಾರಿ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಹೌದು. ನಟ ಧನ್ವೀರ್ ರಾತ್ರಿ ವೇಳೆ ಸಫಾರಿ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಈ ಮೂಲಕ ಸಾಮಾನ್ಯರಿಗೊಂದು ನ್ಯಾಯ ಸೆಲೆಬ್ರಿಟಿಗಳಿಗೊಂದು ನ್ಯಾಯನಾ ಎಂದು ಪ್ರವಾಸಿಗರು ಕಿಡಿಕಾರುತ್ತಿದ್ದಾರೆ.
ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆ ಸಫಾರಿ ಮಾಡುವುದು ಕಾನೂನು ಬಾಹಿರವಾಗಿದೆ. ಸಾಮಾನ್ಯರು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಹಾಕುತ್ತಾರೆ. ಆದರೆ ಸೆಲೆಬ್ರಿಟಿಗಳಿಗೆ ಮಾತ್ರ ರೆಡ್ ಕಾರ್ಪೆಟ್ ಹಾಕಿ ಸಫಾರಿ ಮಾಡಲು ಅವಕಾಶ ನೀಡಲಾಗಿದೆ.
ಪ್ರಾಣಿಗಳಿಗೆ ತೊಂದರೆಯಾಗಬಾರದು ಎಂದು ಸಫಾರಿಗೆ ಸಮಯ ನಿಗದಿ ಮಾಡಲಾಗಿದೆ. ಆದರೆ ಸೆಲೆಬ್ರಿಟಿಗಳಾದರೆ ಇಷ್ಟ ಬಂದಂತೆ ರಾತ್ರಿ ವೇಳೆ ಸಫಾರಿ ಮಾಡಿದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬೆನ್ನಲ್ಲೇ ಪೋಸ್ಟ್ ಡಿಲೀಟ್ ಮಾಡಿ ನಂತರ ಎಡಿಟ್ ಮಾಡಿ ಮತ್ತೆ ಪೋಸ್ಟ್ ಮಾಡಿಕೊಂಡಿದ್ದಾರೆ.