ಬೆಂಗಳೂರು: ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾಯಕ ಮಾತ್ರವಲ್ಲದೆ ನಟ, ಡಬ್ಬಿಂಗ್ ಆರ್ಟಿಸ್ಟ್ ಹೀಗೆ ಬೆಳ್ಳಿ ತೆರೆಯಲ್ಲಿ ಮಿಂಚಿ ನಂತರ ಕಿರುತೆರೆಗೂ ಕಾಲಿಟ್ಟು ಪ್ರಸಿದ್ಧಿ ಪಡೆದಿದ್ದರು. ಎದೆ ತುಂಬಿ ಹಾಡಿದೆನು ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು.
90ರ ದಶಕದಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಿರುತೆರೆಗೂ ಎಂಟ್ರಿ ಕೊಟ್ಟರು. ತೆಲುಗಿನ ಪಾಡುತಾ ತಿಯಗಾ ಕಾರ್ಯಕ್ರಮದಲ್ಲಿ ನಿರೂಪಕನಾಗಿ ಮನೆಮಾತಾದರು. ಕನ್ನಡದಲ್ಲಿ ಸಹ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಆಗಿ ನಿರೂಪಕನಾಗಿ ಗಮನ ಸೆಳೆದರು. ಈ ಕಾರ್ಯಕ್ರಮಗಳಿಂದ ಅದೆಷ್ಟೋ ಸಂಗೀತ ಪ್ರತಿಭೆಗಳು ಬೆಳಕಿಗೆ ಬಂದವು. ಅಲ್ಲದೆ ಈ ಕಾರ್ಯಕ್ರಮದಿಂದ ಎಸ್ಪಿಬಿ ಕನ್ನಡಿಗರ ಮನೆ ಮಾತಾದರು.
ಬಾಲು ಗಾನಕ್ಕೆ ಪ್ರಶಸ್ತಿಗಳ ಸುರಿಮಳೆ
ಎಸ್ಪಿಬಿ ಗಾನಕ್ಕೆ ಮಂತ್ರಮುಗ್ಧರಾಗದೆ ಇರುವವರೇ ಇಲ್ಲ ಎನ್ನಬಹುದು. ಬಾಲು ಗಾಯನಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಆಗಿದೆ. ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ಶಂಕರಾಭರಣಂ ಸಿನಿಮಾಗೆ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿತು.್ತ ಹಿಂದಿಯ ಏಕ್ ದುಜೆ ಕೇಲಿಯೇ ಸಿನಿಮಾ, ಕನ್ನಡದ ಪಂಚಾಕ್ಷರಿ ಗವಾಯಿ, ತೆಲುಗಿನ ರುದ್ರವೀಣ, ತಮಿಳಿನ ಮಿನ್ನರ ಕನ್ನವು ಸಿನಿಮಾಗಳಿಗೂ ರಾಷ್ಟ್ರೀಯ ಪ್ರಶಸ್ತಿ ಅರಸಿ ಬಂದಿತ್ತು. ಮೈನೇ ಪ್ಯಾರ್ ಕಿಯಾ ಚಿತ್ರಕ್ಕೆ ಮೊದಲ ಬಾರಿಗೆ ಫಿಲ್ಮ್ ಫೇರ್ ಪ್ರಶಸ್ತಿ ಸಿಕ್ಕಿತ್ತು. ಎನ್ಟಿಆರ್ ಪ್ರಶಸ್ತಿ, 8 ನಂದಿ ಪ್ರಶಸ್ತಿಗಳು ದಕ್ಕಿದ್ದವು. ಆದರೆ ಕರ್ನಾಟಕ ರಾಜ್ಯ ಸರ್ಕಾರ ಮಾತ್ರ ಅದೇಕೋ ಬಾಲು ಹೆಸರನ್ನು ಪ್ರಶಸ್ತಿಗಳಿಗೆ ಪರಿಗಣಿಸಲೇ ಇಲ್ಲ ಎನ್ನುವುದು ಬೇಸರದ ಸಂಗತಿ.