Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ

Bengaluru City

ನಿರ್ಣಾಯಕ ‘ಪಂಚಮ’ ಕಹಳೆಗೆ ತತ್ತರಿಸಿದ ಸರ್ಕಾರ – ಯತ್ನಾಳ್ ರಾಜಕೀಯ ದಾಳ, ಫಲಕೊಡದ ಸಿಎಂ ಸಂಧಾನ

Public TV
Last updated: February 21, 2021 7:49 pm
Public TV
Share
3 Min Read
Panchamasali 1 2
SHARE

– ಸರ್ಕಾರಕ್ಕೆ ಮಾರ್ಚ್ 4ರವರೆಗೂ ಡೆಡ್‍ಲೈನ್
– ಇಕ್ಕಟ್ಟಿನಲ್ಲಿ ಸಿಎಂ ಬಿಎಸ್‍ವೈ

ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಏಳುನೂರಕ್ಕೂ ಹೆಚ್ಚು ಕಿಲೋಮೀಟರ್ ದೂರವನ್ನು ಪಾದಯಾತ್ರೆ ಮೂಲಕ ಕ್ರಮಿಸಿದ ಪಂಚಮಸಾಲಿ ಸಮುದಾಯದ ಲಕ್ಷಾಂತರ ಮಂದಿ ಬೆಂಗಳೂರಿನಲ್ಲಿ ಪಂಚಮ ಪಾಂಚಜನ್ಯ ಮೊಳಗಿಸಿದ್ದಾರೆ. ಪಂಚಮಸಾಲಿ ಸಮುದಾಯದ ಹೋರಾಟವನ್ನು ನಿಲ್ಲಿಸಬೇಕೆಂದು ಸಚಿವರ ಮೂಲಕ ಸಿಎಂ ಯಡಿಯೂರಪ್ಪ ಮಾಡಿದ ಒಂದೇ ಒಂದು ತಂತ್ರವೂ ಫಲ ಕೊಡಲಿಲ್ಲ. ಬದಲಿಗೆ ಮೀಸಲು ಹೋರಾಟ ಇನ್ನಷ್ಟು ತೀವ್ರವಾಯ್ತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಇಡೀ ಸಮುದಾಯ ಯತ್ನಿಸಿತು. ಅಧಿವೇಶನದಲ್ಲಿ ಅಂತಿಮ ನಿರ್ಣಯ ಆಗಲೇಬೇಕು. ಎಂಬ ಒಕ್ಕೊರಲ ನಿರ್ಣಯವನ್ನು ಸಮಾವೇಶ ತೆಗೆದುಕೊಂಡಿದೆ. ಇದರಿಂದಾಗಿ ಸಿಎಂ ಯಡಿಯೂರಪ್ಪ ಅಕ್ಷರಷಃ ಅಡಕತ್ತರಿಗೆ ಸಿಲುಕಿದ್ದಾರೆ.

Panchamasali 2 2

ಸ್ವಾಗತ ಸಮಿತಿ ಅಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್, ಕತ್ತಿ ಝಳಪಿಸುವ ಮೂಲಕ, ವಿಜಯಾನಂದ ಕಾಶಪ್ಪನವರ್ ಕಹಳೆ ಊದುವ ಮೂಲಕ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿದರು. ಸಮಾವೇಶ ಉದ್ದೇಶಿಸಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಇದು ಮುಕ್ತಾವಯಲ್ಲ, ಶಕ್ತಿ ಪ್ರದರ್ಶನ. ಯಾರೇನೇ ಒತ್ತಡ ಹೇರಿದರೂ ಮೀಸಲಾತಿ ಸಿಗೋವರೆಗೂ ಹೋರಾಟ ನಿಲ್ಲಿಸಲ್ಲ. ಮಾರ್ಚ್ 4ರವರೆಗೂ ಶಾಂತಿಯುತ ಧರಣಿ ಮಾಡೋದಾಗಿ ಘೋಷಿಸಿದರು.

Panchamasali 13

ಸಚಿವರ ಮನವೊಲಿಕೆ ಫುಲ್ ಫೇಲ್: ಸಿಎಂ ಸಂದೇಶ ತಂದಿದ್ದ ಸಚಿವ ಸಿಸಿ ಪಾಟೀಲ್ ಮಾತನಾಡಿ, ನಮ್ಮ ಹೋರಾಟಕ್ಕೆ ಸಿಎಂ ಬೆಂಬಲ ಸೂಚಿಸಿದ್ದಾರೆ. ಹಿಂದುಳಿದ ಆಯೋಗಕ್ಕೆ ವರದಿ ನೀಡುವಂತೆ ಸೂಚಿಸಿದ್ದಾರೆ. ಏಕಾಏಕಿ ತೀರ್ಮಾನ ಕೈಗೊಂದರೆ ಬೇರೆಯವರು ನ್ಯಾಯಾಲಯಕ್ಕೆ ಹೋಗಬಹುದು ಎನ್ನುತ್ತಲೇ ಸಭಿಕರು ಘೋಷಣೆ ಕೂಗಿದರು. ಆದ್ರೂ ಮಾತು ಮುಂದುವರೆಸಿದ ಸಿಸಿ ಪಾಟೀಲ್, ಸಮಾವೇಶದ ನಂತರ ಪ್ರತಿಭಟನೆ ಕೈಬಿಡಿ ಮನವಿ ಮಾಡಿದರು.

Panchamasali 5

ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಯಾರು ಚಿಂತೆ ಮಾಡುವ ಅಗತ್ಯವಿಲ್ಲ. ಮೀಸಲಾತಿ ಕೊಡಿಸುವ ಸಲುವಾಗೆ ಈ ಸಮಾವೇಶ ಮಾಡ್ತಿದ್ದೇವೆ. 70 ವರ್ಷ ಆಳಿದವರು ಏನು ಮಾಡಲಿಲ್ಲ ಅಂತಾ ಕಾಂಗ್ರೆಸ್ಸಿಗರ ಮೇಲೆ ಗೂಬೆ ಕೂರಿಸಲು ನೋಡಿದರು. ನಾವು ಕೊಟ್ಟೇ ಕೊಡ್ತೀವಿ ಸ್ವಲ್ಪ ಟೈಮ್ ಕೊಡಿ ಎಂದು ಮನವಿ ಮಾಡಿಕೊಂಡರು.

Panchamasali 4 1

ಸಚಿವರ ಭರವಸೆಯನ್ನು ಒಪ್ಪಲು ತಯಾರಿಲ್ಲದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮೂಗಿಗೆ ತುಪ್ಪ ಸವರೋ ಕೆಲಸ ಮಾಡಬೇಡಿ. ಇದು ಮಾಡು ಇಲ್ಲವೇ ಮಡಿ ಹೋರಾಟ. ಮೀಸಲಾತಿ ಸಿಗವರೆಗೂ ಮನೆಗೆ ಹೋಗಲ್ಲ. ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕೇ ಹಾಕ್ತೀವಿ ಅಂತಾ ಗುಡುಗಿದರು.

Panchamasali 11

ಯತ್ನಾಳ್ ಸವಾಲ್:
ಸಚಿವರ ಭರವಸೆಯನ್ನು ನಂಬಲು ತಯಾರಿರದ ಜಯಮೃತ್ಯುಂಜಯ ಸ್ವಾಮೀಜಿ, ಮುಂದಿನ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ಸ್ವಾಗತ ಸಮಿತಿ ಅಧ್ಯಕ್ಷ ಯತ್ನಾಳ್‍ಗೆ ನೀಡಿದ್ರು. ಈ ವೇಳೆ ಮಾತನಾಡಿದ ಯತ್ನಾಳ್, ನನ್ನ ಕೈಯಲ್ಲಿ ಕತ್ತಿ ಕೊಟ್ಟಿದ್ದಾರೆ. ಯಾಕೆ ಅಂದ್ರೆ ಮಾಡು ಇಲ್ಲವೇ ಮಡಿ ಅಂತಾ. ನಾವು ಬೆನ್ನಿಗೆ ಚೂರಿ ಹಾಕಲ್ಲ. ಎದುರು ಬಂದ್ರೆ ಹೊಡೆಯೋದೇ ಅಂತಾ ಅಬ್ಬರಿಸಿದರು. ಇಬ್ಬರು ಸಚಿವರು ಹೋಗಿ ಸಿಎಂಗೆ ಕೇಳಿ, ಇಲ್ಲವಾದ್ರೆ ರಾಜೀನಾಮೆ ಕೊಡ್ತಿನಿ ಅಂತಾ ಹೇಳಿರಿ.. ಅದ್ಯಾಕೆ ಮಾಡಲ್ಲ ನಾನು ನೋಡ್ತೀನಿ ಅಂತಾ ಓಪನ್ ವೇದಿಕೆಯಲ್ಲಿ ಸವಾಲು ಹಾಕಿದರು.

Panchamasali 1 1

ಶಾಸಕ ಯತ್ನಾಳ್ ಉರುಳಿಸಿದ ರಾಜಕೀಯ ದಾಳಕ್ಕೆ ಕಕ್ಕಾಬಿಕ್ಕಿಯಾದ ಸಚಿವರಿಬ್ಬರು ಕೋಪದಿಂದ ವೇದಿಕೆಯಿಂದ ಕೆಳಗಿಳಿದು ಹೊರ ನಡೆದರು. ನೇರವಾಗಿ ಸಿಎಂ ಮನೆಗೆ ಹೋಗಿ ಸಮಾವೇಶದ ವರದಿ ಒಪ್ಪಿಸಿದರು. ಇದಕ್ಕೂ ಮುನ್ನ ಜೈಲಲ್ಲಿರುವ ಮಾಜಿ ಮಂತ್ರಿ ವಿಜಯ್ ಕುಲಕರ್ಣಿ ಪತ್ನಿಯನ್ನು ವೇದಿಕೆಗೆ ಕರೆಯಿಸಿ ಸಮುದಾಯದ ಮುಖಂಡರು ಧೈರ್ಯ ತುಂಬುವ ಕೆಲಸ ಮಾಡಿದರು. ಈ ವೇಳೆ ಮಾತು ಬಾರದೇ ವಿನಯ್ ಕುಲಕರ್ಣಿ ಪತ್ನಿ ಗದ್ಗದಿತರಾದರು. ಸಮಾವೇಶದ ಮಧ್ಯೆ ಮಳೆ ಬಂದು ಕೆಲ ಕಾಲ ಜನ ಪರದಾಡಿದರು. ನಗರದಲ್ಲಿ ಟ್ರಾಫಿಕ್ ಜಾಮ್ ಕೂಡ ಕಂಡುಬಂತು.

TAGGED:Basanagowda Patil YatnalbjpcongressMurugesh niraniPanchamsaliPublic TVReservation Fightvijayananda kashappanavarಕಾಂಗ್ರೆಸ್ಪಂಚಮಸಾಲಿಪಬ್ಲಿಕ್ ಟಿವಿಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿಮೀಸಲಾತಿ ಹೋರಾಟಮುರುಗೇಶ್ ನಿರಾಣಿವಿಜಯಾನಂದ ಕಾಶಪ್ಪನವರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
25 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
36 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
56 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?