Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

Karnataka

ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು

Public TV
Last updated: October 18, 2020 7:45 am
Public TV
Share
2 Min Read
flood rain
SHARE

– ಮಳೆ ಕಡಿಮೆಯಾದರೂ ಹೆಚ್ಚುತ್ತಲೇ ಇದೆ ನೆರೆ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ.

vlcsnap 2020 10 18 07h35m44s114

ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ಬ್ರಿಡ್ಜ್ ಮೇಲೆ ನೀರು ಹರಿಯುತ್ತಿರುವ ಹಿನ್ನೆಲೆ ವಡಗೇರಾ ಮೂಲಕ ರಾಯಚೂರು ಮತ್ತು ಯಾದಗಿರಿ ಸಂಪರ್ಕ ಬಂದ್ ಆಗಿದೆ. ಅವೈಜ್ಞಾನಿಕವಾಗಿ ಬ್ರಿಡ್ಜ್ ನಿರ್ಮಾಣ ಹಿನ್ನೆಲೆ ಇದರ ಅಕ್ಕ ಪಕ್ಕದ ಜೋಳದಡಗಿ, ಶಿವನೂರು, ಕೊಂಗಂಡಿ, ಗೋನಾಲಕ್ಕೆ ಪ್ರತಿ ವರ್ಷ ಪ್ರವಾಹದ ಆತಂಕ ಉಂಟಾಗುತ್ತಿದೆ.

vlcsnap 2020 10 18 07h36m15s175

ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ರೌದ್ರ ನರ್ತನ ತಾಳಿದ್ದು, ಹಲವು ಗ್ರಾಮಗಳು ಮುಳುಗಡೆಯಾಗಿವೆ. ಭೀಮಾ ನದಿಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡುತ್ತಿರುವುದರಿಂದ ರಾಯಚೂರಿನ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ನದಿ ಪಾತ್ರದ ಬುರ್ದಿಪಾಡ ಗ್ರಾಮದಲ್ಲಿ 10 ಮನೆಗಳು ಸ್ಥಳಾಂತರವಾಗದೆ ಉಳಿದಿದ್ದು ಮುಳುಗಡೆ ಭೀತಿ ಎದುರಿಸುತ್ತಿವೆ. ಅಲ್ಲದೆ ಕೃಷ್ಣಾ ನದಿಯ ನಡುಗಡ್ಡೆ ಗ್ರಾಮಗಳು ಸಂಪೂರ್ಣವಾಗಿ ಹೊರ ಜಗತ್ತಿನ ಸಂಪರ್ಕವನ್ನು ಕಳೆದುಕೊಂಡಿವೆ. ಕಲಬುರ್ಗಿಯ ಸೊನ್ನ ಬ್ಯಾರೇಜ್‍ನಿಂದ 8 ಲಕ್ಷ ಕ್ಯೂಸೆಕ್ ನೀರು ಹರಿಸಿರುವುದರಿಂದ ಕೃಷ್ಣ ನದಿ ಪಾತ್ರದ 17 ಗ್ರಾಮಗಳ ಜನ ಆತಂಕದಲ್ಲಿದ್ದಾರೆ.

vlcsnap 2020 10 18 07h31m46s38

ಸನ್ನತಿ ಬ್ಯಾರೇಜ್ ನಿಂದ ಭೀಮಾ ನದಿಗೆ 3 ಲಕ್ಷ ಕ್ಯೂಸೆಕ್ ನೀರು ಬಿಡುಲಾಗಿದೆ. ಅಲ್ಲದೆ ಬಸವಸಾಗರ ಜಲಾಶಯದಿಂದ 1.23 ಕ್ಯೂಸೆಕ್ ನೀರು ಹರಿಸಲಾಗಿದೆ. ಇದರಿಂದಾಗಿ ಭೀಮಾ ನದಿಯ ಒಳ ಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ. ಭೀಮಾ ನದಿಯಲ್ಲಿ ನೀರು ಹೆಚ್ಚಾಗುತ್ತಿದ್ದಂತೆ ಸೊನ್ನ ಬ್ಯಾರೇಜಿನಿಂದ 8 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಈ ನೀರು ಇಂದು ರಾಯಚೂರು ತಾಲೂಕಿಗೆ ಬರಲಿದ್ದು, ಕೃಷ್ಣಾ ನದಿ ಪ್ರವಾಹ ಇನ್ನೂ ಹೆಚ್ಚಳವಾಗಲಿದೆ.

vlcsnap 2020 10 18 07h32m55s222

ಜಿಲ್ಲಾಡಳಿತ ಭಾರೀ ಪ್ರವಾಹದ ಮುನ್ಸೂಚನೆ ನೀಡಿದ್ದು, ಪ್ರವಾಹ ಎದುರಿಸಲು ಸಿದ್ಧತೆ ನಡೆಸಿದೆ. ರಾಯಚೂರು ತಾಲೂಕಿನ ಗುರ್ಜಾಪುರ, ಬೂರ್ದಿಪಾಡ ಹಾಗೂ ಡಿ ರಾಂಪುರ ಸ್ಥಳಾಂತರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಕಟ್ಟೆಚ್ಚೆರ ವಹಿಸಲಾಗಿದೆ. ಒಂದು ಎನ್‍ಡಿಆರ್‍ಎಫ್ ತಂಡ ರಾಯಚೂರಿನಲ್ಲಿ ಬೀಡು ಬಿಟ್ಟಿದೆ.

vlcsnap 2020 10 18 07h34m47s66

ಮಹಾರಾಷ್ಟ್ರದಿಂದ ಮತ್ತೆ ನೀರು
ಮಹಾರಾಷ್ಟ್ರದಿಂದ ಭೀಮಾ ನದಿಗೆ ಮತ್ತೆ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ತಾವರಖೇಡ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಏಕಾಏಕಿ ಭೀಮೆಗೆ ನೀರು ಬಂದ ಕಾರಣ ಸುರಕ್ಷಿತ ಸ್ಥಳಗಳಿಗೆ ಗ್ರಾಮಸ್ಥರೇ ಶಿಫ್ಟ್ ಆಗಿದ್ದಾರೆ. ಆದರೆ ಅಪಾರ ಪ್ರಮಾಣದ ದವಸ, ಧಾನ್ಯ, ಮನೆಗಳು ಸೇರಿದಂತೆ ಗ್ರಾಮ ಸಂಪೂರ್ಣ ನೀರುಪಾಲಾಗಿದೆ. ಯಾವೊಬ್ಬ ಅಧಿಕಾರಿ ಸಹ ಗ್ರಾಮಸ್ಥರಿಗೆ ಪ್ರವಾಹದ ಮನ್ಸೂಚನೆ ನೀಡಿಲ್ಲ. ಇದೀಗ ಇಡೀ ಗ್ರಾಮ ನೀರಲ್ಲಿ ಮುಳುಗಿ ಹೋಗಿದ್ದರೂ ಈ ವರೆಗೆ ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಅಲ್ಲದೆ ಮೂಕ ಪ್ರಾಣಿಗಳ ರೋಧನೆ ಮುಗಿಲು ಮುಟ್ಟಿದೆ.

TAGGED:floodnorth karnatakaPublic TVraichurrainyadgirಉತ್ತರ ಕರ್ನಾಟಕಪಬ್ಲಿಕ್ ಟಿವಿಪ್ರವಾಹಮಳೆಯಾದಗಿರಿರಾಯಚೂರು
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
3 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
11 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?