ಕೊಪ್ಪಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.
ಮಿನಿ ಬಸ್ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿಗೆ ಬರುತ್ತಿತ್ತು. ಈ ವೇಳೆ ಬೈಕ್ ವೇಗವಾಗಿ ಬಂದಿದ್ದರಿಂದ ಮಿನಿ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಿನಿ ಬಸ್ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ.