Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀಟ್ ಪರೀಕ್ಷೆಯಲ್ಲಿ ಪಾಸ್ – ವೈದ್ಯನಾಗಲು ಮುಂದಾದ ’64’ರ ಯುವಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೀಟ್ ಪರೀಕ್ಷೆಯಲ್ಲಿ ಪಾಸ್ – ವೈದ್ಯನಾಗಲು ಮುಂದಾದ ’64’ರ ಯುವಕ

Latest

ನೀಟ್ ಪರೀಕ್ಷೆಯಲ್ಲಿ ಪಾಸ್ – ವೈದ್ಯನಾಗಲು ಮುಂದಾದ ’64’ರ ಯುವಕ

Public TV
Last updated: December 27, 2020 4:08 pm
Public TV
Share
3 Min Read
old man
SHARE

ಭುವನೇಶ್ವರ: 40 ವರ್ಷಗಳ ಜೀವನದಲ್ಲಿ ಕಠಿಣ ಕೆಲಸ ಮತ್ತು ಮಕ್ಕಳನ್ನು ಬೆಳೆಸಿದ ನಂತರ ಒಬ್ಬ ಯಶಸ್ವಿ ವ್ಯಕ್ತಿ ಬಹುಶಃ ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು, ತೋಟಗಾರಿಕೆ ಮಾಡಿಕೊಂಡು, ತಮ್ಮ ಸಂಬಂಧಿಗಳೊಂದಿಗೆ ಹರಟೆ ಹೊಡೆಯುತ್ತಾ ಕಾಲ ಕಳೆಯುವುದು ಸರ್ವೇಸಾಮಾನ್ಯ. ಆದರೆ ಒಡಿಶಾದ 64 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ವೈದ್ಯರಾಗಲು ಮುಂದಾಗಿದ್ದಾರೆ.

1956 ರಲ್ಲಿ ಜನಿಸಿದ ಜೇ ಕಿಶೋರ್ ಪ್ರಧಾನ್ ಇದೀಗ ವೈದ್ಯರಾಗಲು ನೀಟ್ ಬರೆದು ತೇರ್ಗಡೆಗೊಂಡವರು. ಒಡಿಶಾದ ಪ್ರಧಾನ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಒಂದಾದ ಬುರ್ಲಾದ ವೀರ್ ಸುರೇಂದ್ರ ಸಾಯಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ (ವಿಮ್ಸಾರ್)ನಲ್ಲಿ ನಾಲ್ಕು ವರ್ಷಗಳ ಎಂಬಿಬಿಎಸ್ ಪದವಿ ತರಗತಿಗಾಗಿ ತಯಾರಾಗಿದ್ದಾರೆ.

old man2 1 e1609065333325

ಒಡಿಶಾದ ಬಾರ್ ಗ ಜಿಲ್ಲೆಯ ಅಟಾಬಿರಾದವರಾದ ಜೇ ಕಿಶೋರ್ ಪ್ರಧಾನ್ ಎಂಬಿಬಿಎಸ್ ಕಲಿಯಲು ಬೇಕಾದ ಎಲ್ಲಾ ತಯಾರಿ ಮುಗಿಸಿದ್ದಾರೆ. ಹಿರಿಯ ನಾಗರೀಕರಾದ ಇವರಿಗೆ ಹೃದ್ರೋಗ, ಶ್ವಾಸಕೋಶದ ಕಾಯಿಲೆ ಮತ್ತು ನೆಫ್ರಾಲಜಿ ಪರೀಕ್ಷೆಯಿಂದ ರಿಯಾಯಿತಿ ಕೊಡಲಾಗಿದ್ದು, ಅಧ್ಯಯನಕ್ಕಾಗಿ ಅವಕಾಶ ಮಾಡಿ ಕೊಡಲಾಗಿದೆ.

2016ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಪ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು. ನಂತರ ಇದೀಗ ಈ ನಿರ್ಧಾರವನ್ನು ಕಂಡು ಹಲವರು ಅಶ್ಚರ್ಯಗೊಂಡಿದ್ದಾರೆ. ಜೇ ಕಿಶೋರ್ ಪ್ರಧಾನ್ ಅವರು ಅನೇಕ ವರ್ಷಗಳಿಂದ ಕಂಡಿದ್ದ ಕನಸನ್ನು ನನಸು ಮಾಡಲು ಹೊರಟಿದ್ದು ಇದರ ಕುರಿತು ಹೇಳಿಕೆ ಕೊಟ್ಟಿದ್ದಾರೆ. 1970 ದಶಕದಲ್ಲಿ ನನ್ನ ಕನಸನ್ನು ಈಡೇರಿಸಲು ಆಗಿರಲಿಲ್ಲ. ನಂತರ ತಯಾರಿಯನ್ನು ನಿರಂತರ ಮುಂದುವರಿಸಿದೆ. ಬಿಎಸ್ಸಿ ಸೇರಿಕೊಂಡ ನಂತರ ಈ ಕನಸಿಗೆ ಇನ್ನಷ್ಟೂ ರೆಕ್ಕೆ ಪುಕ್ಕಗಳು ಸೇರಿದವು ಆದರೆ ಸಾಧಿಸಲು ಆಗಿರಲ್ಲ. ಈ ಪ್ರಜ್ಞೆ ನನ್ನನ್ನು ಕಾಡುತ್ತಲೇ ಇತ್ತು ಎಂದಿದ್ದಾರೆ.

old man3

ಇದಲ್ಲದೆ ನಾನು ವೈದ್ಯಕೀಯ ವಿಜ್ಞಾನಕ್ಕೆ ಹೆಚ್ಚಿನ ಒಲವನ್ನು ತೋರಿದ್ದು 1982ರಲ್ಲಿ. ನನ್ನ ತಂದೆ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 1987ರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಉನ್ನತ ಚಿಕಿತ್ಸೆಗಾಗಿ ವೆಲ್ಲೂರಿಗೆ ಕರೆದೊಯ್ಯಲಾಯಿತು. ಯಶಸ್ವಿ ಚಿಕಿತ್ಸೆಯ ಪರಿಣಾಮವಾಗಿ ನನ್ನ ತಂದೆ ಜನವರಿ 2010ರ ವರೆಗೆ ಬದುಕುಳಿದರು. ಇದರಿಂದ ನನಗೆ ಇನ್ನಷ್ಟೂ ಹೆಚ್ಚಿನ ಗಮನ ವೈದ್ಯಕೀಯದತ್ತ ನೆಟ್ಟಿತು ಎಂದು ವಿವರಿಸಿದರು.

ವೈದ್ಯಕೀಯ ಅಧ್ಯಯನದ ಹೆಚ್ಚಿನ ಆಸಕ್ತಿಯಿಂದಾಗಿ 15 ವರ್ಷಗಳ ಬ್ಯಾಕಿಂಗ್ ಸೇವೆಯ ನಂತರ ಸ್ವಯಂಪ್ರೇರಿತ ನಿವೃತ್ತಿ ಪಡೆದುಕೊಳ್ಳುವ ಹುಚ್ಚಾಟಕ್ಕೆ ಹೋಗಿದ್ದೆ, ಆದರೆ ಕೊನೆಗೆ ಕುಟುಂಬ ನಡೆಸುವ ಯೋಚನೆಯ ಪರಿಣಾಮ ಕೆಲಸ ತ್ಯಜಿಸುವ ಯೋಚನೆ ಕೈ ಬಿಟ್ಟೆ.

DOCTOR 3

ನನಗೆ ಅವಳಿ ಹೆಣ್ಣು ಮಕ್ಕಳಿದ್ದಾರೆ. ಅವರು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅವರ ತಯಾರಿಯಲ್ಲಿ ನಾನು ಸಹಾಯ ಮಾಡುತ್ತಿದ್ದೆ. ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಹೆಚ್ಚಿನ ಹಿಡಿತ ಹೊಂದಿದ್ದ ನನ್ನನ್ನು ಗಮನಿಸಿದ ನನ್ನ ಮಕ್ಕಳು ಕಲಿಕೆಗೆ ನನ್ನನ್ನು ಪ್ರೇರೇಪಿಸಿದರು ಎನ್ನುತ್ತಾರೆ ಕಿಶೋರ್ ಪ್ರಧಾನ್.

ಅಧ್ಯಯನಕ್ಕಾಗಿದ್ದ ವಯಸ್ಸಿನ ಮಿತಿಯನ್ನು 2019ರಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಇದೂ ನನ್ನ ಸಂಕಲ್ಪವನ್ನು ಈಡೇರಿಸಲು ದಾರಿ ಮಾಡಿ ಕೊಟ್ಟಿತ್ತು ಮತ್ತು ಎಂಬಿಬಿಎಸ್ ಕಲಿಯುವುದನ್ನು ಸವಾಲಾಗಿ ಸ್ವೀಕರಿಸಿದೆ ಎಂದರು. ನೀಟ್‍ನಲ್ಲಿ 175 ಅಂಕಗಳಿಸುವ ಮೂಲಕ 5,94,380ನೇ ರ್ಯಾಂಕ್‍ಗಳಿಸಿ ವಿಮ್ಸಾರ್‍ನಲ್ಲಿ ಎಂಬಿಬಿಎಸ್ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ.

Doctor

ನನ್ನ ಅವಳಿ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆ ಕಳೆದ ತಿಂಗಳು ದುರದೃಷ್ಟಕರವಾಗಿ ನಿಧನ ಹೊಂದಿದ್ದರಿಂದ ಈ ಸಂಭ್ರಮವನ್ನು ಆಚರಿಸಲು ಸಾಧ್ಯವಾಗಿಲ್ಲ ಇದನ್ನು ಹೊರತು ನಾನು ಮಗಳ ನೆನಪಿಗಾಗಿ ಅಧ್ಯಯನ ಮಾಡುತ್ತೇನೆ ಎನ್ನುತ್ತಾರೆ ಕಿಶೋರ್ ಪ್ರಧಾನ್.

ಪ್ರಧಾನ್ ಅವರು ಎಂಬಿಬಿಎಸ್ ಮುಗಿಸುವ ಹೊತ್ತಿಗೆ ಅವರಿಗೆ 69 ವರ್ಷವಾಗುತ್ತದೆ. ಅಧ್ಯಯನದ ನಂತರ ಸೇವೆ ಸೇರಲು ಸಿದ್ಧರಾಗಿದ್ದೀರ ಎಂದು ಪ್ರಶ್ನಿಸಿದಾಗ ನಾನು ಈಗಲೇ ಏನನ್ನೂ ಹೇಳಲು ಬಯಸುವುದಿಲ್ಲ. ಆದರೆ 5 ವರ್ಷಗಳ ನಂತರದ ದಿನಗಳಲ್ಲಿ ಖಾಸಗಿಯಾಗಿ ಅಭ್ಯಾಸ ಮಾಡುತ್ತಲೇ ಇರುತ್ತೇನೆಂದು ಹೇಳಿದರು.

Doctor 1

ಕಿಶೋರ್ ಪ್ರಧಾನ್ ಪದವಿ ಮುಗಿದ ತಕ್ಷಣ ಟೆಲಿಕಾಂ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ನಂತರ ಕೆಲಕಾಲ ಸ್ಥಳೀಯ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅರೆಕಾಲಿಕ ಶಿಕ್ಷಕರಾಗಿ ಸೇರಿದ್ದರು. ನಂತರ 1983ರಲ್ಲಿ ಎಸ್‍ಬಿಐ ಉದ್ಯೋಗಿಯಾದರು.

ವಿಮ್ಸಾರ್‍ನ ಡೀನ್ ಮತ್ತು ಪ್ರಾಂಶುಪಾಲರಾದ ಬ್ರಜಮೋಹನ್ ಮಿಶ್ರಾ ಮಾತನಾಡಿ, ನಾನು ಪ್ರಧಾನ್ ಅವರಿಂದ ಒಂದು ವರ್ಷ ಹಿರಿಯವನಾಗಿದ್ದು ಈ ವಯಸ್ಸಿನಲ್ಲಿ ಪ್ರಧಾನ್ ಸಾಧನೆಗೆ ಪದಗಳೇ ಸಿಗುತ್ತಿಲ್ಲ. ಸುಪ್ರೀಂ ಕೋರ್ಟ್‍ನ ಆದೇಶದಂತೆ ಅಧ್ಯಯನಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಅವರನ್ನು ವೈದ್ಯಕೀಯವಾಗಿ ಅರ್ಹರೆಂದು ಹೇಳಲಾಗಿದ್ದು ಕೆಲವು ದಾಖಲೆಗಳ ಪರಿಶೀಲನೆಗಾಗಿ ಮತ್ತು ಸಹಿ ಹಾಕಿ ಕೋರ್ಸ್‍ಗೆ ಸೇರಲು ಹೇಳಲಾಗಿದೆ ಎಂದು ಮಿಶ್ರಾ ಹೇಳಿದರು.

doctor

ನಾನು ಅವರನ್ನು ಸಹಪಾಠಿ ಎಂದು ಪರಿಗಣಿಸುತ್ತೇನೆ. ನನಗೆ ಹೊಸ ರೀತಿಯ ಅನುಭವಾಗಿದೆ ಅವರ ಮಿದುಳುಗಳು ವೈದ್ಯಕೀಯ ಅಧ್ಯನಕ್ಕಾಗಿ ಸಿದ್ಧವಾಗಿರುವುದರಿಂದಾಗಿ ಅವರಿಗೆ ಯಾವುದೇ ಸಮಸ್ಯೆ ಕಾಡಲಾರದು ಎಂದು ಸಂತಸ ಹಂಚಿಕೊಂಡರು.

TAGGED:doctormbbsmedicalMedical Educationಎಂಬಿಬಿಎಸ್ಡಾಕ್ಟರ್ವೈದ್ಯಕೀಯವೈದ್ಯಕೀಯ ಶಿಕ್ಷಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
5 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?