– ಸಾವಿನ ಬಗ್ಗೆ ಸಂಬಂಧಿಕರು ಹೇಳೋದೇನು?
– ದಂಪತಿ ಆತ್ಮಹತ್ಯೆಗೆ ಕಾರಣವೇನು?
ತಿರುವನಂತಪುರಂ: ಪುಲ್ಪಲ್ಲಿಯ ಮುಲ್ಲಂಕೊಲ್ಲಿಯ ಮನೆಯಲ್ಲಿ ವೃದ್ಧ ದಂಪತಿಯ ಶವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕರುಣಾಕರನ್ ಹಾಗೂ ಅವರ ಪತ್ನಿ ಸುಮತಿ ಎಂದು ಗುರುತಿಸಲಾಗಿದೆ. ಈ ಘಟನೆ ಗುರುವಾರ ಮಧ್ಯರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವೃದ್ಧ ದಂಪತಿ ತಮ್ಮ ಅವಿವಾಹಿತ ಮಗಳೊಂದಿಗೆ ವಾಸವಾಗಿದ್ದರು. ಮಗಳಿಗೆ ಅನಾರೋಗ್ಯವಿತ್ತು ಎಂದು ಸಂಬಂಧಿಕರು ಹೇಳುತ್ತಿದ್ದಾರೆ. ಹೀಗಾಗಿ ಖನ್ನತೆಗೊಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಪೊಲೀಸರು ಶಂಕಿಸಿದ್ದಾರೆ.
ವೃದ್ಧ ದಂಪತಿಯ ಸಾವಿನಲ್ಲಿ ಯಾವುದೇ ಅನುಮಾನಗಳು ಇಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.